Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...