Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...