Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...