Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...