Homeಮುಖಪುಟ5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

- Advertisement -
- Advertisement -

ಆದಾಯ ತೆರಿಗೆ ಇಲಾಖೆ ಉತ್ತರ ಪ್ರದೇಶದ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಅವರ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 200 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ದೊಡ್ಡ ಪ್ರಮಾಣದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌‌ಡಿಟಿವಿ ಸೋಮವಾರ ವರದಿ ಮಾಡಿದೆ. ಆದಾಯ ತೆರಿಗೆ ಇಲಾಖೆಯು ಕಳೆದ ವಾರ ಅವರ ಮನೆಗಳ ಮೇಲೆ ದಾಳಿ ಪ್ರಾರಂಭಿಸಿದ್ದು, ಇನ್ನೂ ನಡೆಯುತ್ತಿದೆ.

ಜಿಎಸ್‌ಟಿ ಗುಪ್ತಚರ ಘಟಕದ ಮೂಲಗಳು 107 ಕೋಟಿ ನಗದು ಮತ್ತು ಕೋಟ್ಯಂತರ ಮೌಲ್ಯದ ಆಸ್ತಿಗಳ ದಾಖಲೆಗಳನ್ನು ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಖನೌಜ್‌ನಲ್ಲಿರುವ ಮೂರು ಮನೆಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಇದನ್ನೂ ಓದಿ:ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ಖನೌಜ್‌‌ನ ಚುಪ್ಪಟ್ಟಿ ಮೂಲದ ಪಿಯೂಷ್‌‌ ಜೈನ್ ತಮ್ಮ ವ್ಯವಹಾರಕ್ಕಾಗಿ ತಮ್ಮ ಪೂರ್ವಜರ ಚಿನ್ನವನ್ನು ಮಾರಾಟ ಮಾಡಿ ಹಣವನ್ನು ಸಂಗ್ರಹಿಸಿದ್ದಾಗಿ ಜಿಎಸ್‌ಟಿ ಅಧಿಕಾರಿಗಳಿಗೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಆದರೆ ಅವರು ಚಿನ್ನವನ್ನು ಯಾರಿಗೆ ಮಾರಾಟ ಮಾಡಿದ್ದಾರೆ ಎಂದು ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ತಿಳಿದು ಬಂದಿದ್ದು, ಅವರ ಪುತ್ರರನ್ನೂ ವಿಚಾರಣೆ ನಡೆಸಲಾಗುತ್ತಿದೆ.

ಪಿಯೂಷ್ ಜೈನ್ ಅವರನ್ನು ಭಾನುವಾರ ತೆರಿಗೆ ವಂಚನೆಗಾಗಿ ಜಿಎಸ್‌ಟಿ ಅಧಿಕಾರಿಗಳು ಬಂಧಿಸಿದ್ದರು. ದಾಳಿಯ 1 ನೇ ದಿನದಂದು (ಗುರುವಾರ) ಅವರು ಪರಾರಿಯಾಗಿದ್ದು, ನಂತರ ಕರೆ ನೀಡಿದ ನಂತರ ಮರಳಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ಗೆ ವರದಿ ಮಾಡಿದೆ.

ಇದನ್ನೂ ಓದಿ:ಯುಪಿ, ಉತ್ತರಾಖಂಡ ಚುನಾವಣೆಗೆ 150 ಕ್ಕೂ ಹೆಚ್ಚು ಹಿರಿಯ ಬಿಜೆಪಿ ನಾಯಕರ ನಿಯೋಜನೆ

ಈ ಮಧ್ಯೆ ಕಾನ್ಪುರ ಮತ್ತು ಕನ್ನೌಜ್‌ನಲ್ಲಿರುವ ಅವರ ಮನೆಗಳು ಹಾಗೂ ಖನೌಜ್‌ನಲ್ಲಿರುವ ಕಾರ್ಖಾನೆಯಿಂದ ಸುಮಾರು 187 ಕೋಟಿ ರೂ. ಗಳನ್ನು ಎಣಿಕೆ ಮಾಡಿದ್ದಾರೆ. ಇದರಲ್ಲಿ ಖನೌಜ್‌ನಲ್ಲಿರುವ ಅವರ ಸುಗಂಧ ದ್ರವ್ಯ ಕಾರ್ಖಾನೆಯಿಂದ ವಶಪಡಿಸಿಕೊಳ್ಳಲಾಗಿರುವ 10 ಕೋಟಿ ರೂ.ಗಳು ಸೇರಿದೆ.

“ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(ಸಿಬಿಐಸಿ)ಯ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಪ್ರಕರಣವಾಗಿದೆ” ಎಂದು ಸಿಬಿಐಸಿ ಅಧ್ಯಕ್ಷ ವಿವೇಕ್ ಜೋಹ್ರಿ ಶುಕ್ರವಾರ ಎಎನ್‌ಐಗೆ ತಿಳಿಸಿದ್ದಾರೆ. ಅಂದು ವಸೂಲಿಯಾದ ಮೊತ್ತವು ಕೇವಲ 150 ಕೋಟಿ ರೂ. ಆಗಿತ್ತು.

ಇದನ್ನೂ ಓದಿ:ಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...