Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...