Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...