Homeಮುಖಪುಟಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡಿದ್ದಾರೆ.

“ಕೇಂದ್ರ ಸಚಿವಾಲಯವು ಭಾರತದಲ್ಲಿನ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕ್ರಿಸ್‌ಮಸ್‌ನಲ್ಲಿ ಸ್ಥಗಿತಗೊಳಿಸಿದೆ ಎಂದು ಕೇಳಿ ಆಘಾತವಾಯಿತು!” ಎಂದು ಟ್ವೀಟ್‌ ಮಾಡಿರುವ ಅವರು, “ಕಾನೂನು ಅತ್ಯುನ್ನತವಾಗಿದ್ದರೂ, ಮಾನವೀಯ ಪ್ರಯತ್ನಗಳಲ್ಲಿ ರಾಜಿ ಮಾಡಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ಕಲ್ಕತ್ತಾದ ಆರ್ಚ್‌ಡಯಾಸಿಸ್‌ನ ಫಾದರ್ ಡೊಮಿನಿಕ್ ಗೋಮ್ಸ್ ಅವರು ಹೇಳಿಕೆ ನೀಡಿದ್ದು, “ಬಡವರಿಗೆ ಕ್ರೂರ ಕ್ರಿಸ್ಮಸ್ ಉಡುಗೊರೆ ಇದು” ಎಂದು ಹೇಳಿದ್ದಾರೆ.

ಸಂಸ್ಥೆಯ ಚಟುವಟಿಕೆಗಳ ಫಲಾನುಭವಿಗಳು ಸೇರಿದಂತೆ 22,000 ಜನರ ಮೇಲೆ ಸರ್ಕಾರದ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಮಿಷನರೀಸ್ ಆಫ್ ಚಾರಿಟಿ ಹೇಳಿಕೆ ನೀಡಿದ್ದು, “ಕ್ರಿಶ್ಚಿಯನ್ ಸಮುದಾಯ ಮತ್ತು ಅವರ ಸಾಮಾಜಿಕ ಪ್ರಭಾವದ ಮೇಲಿನ ಈ ಇತ್ತೀಚಿನ ದಾಳಿಯು ಭಾರತದ ಬಡ ಬಡವರ ಮೇಲಿನ ದಾಳಿಗಿಂತ ಹೆಚ್ಚು ಭೀಕರವಾಗಿದೆ” ಎಂದು ಹೇಳಿದೆ.

“ಕ್ರಿಶ್ಚಿಯನ್ ಸಂಘಟನೆಗಳು ಅನ್ಯಧರ್ಮಿಯರನ್ನು ಮತಾಂತರ ಮಾಡುತ್ತವೆ ಎಂದು ಆರೋಪಿಸಿ ಇಂತಹ ಘಟನೆಗಳನ್ನು ಸಮರ್ಥಿಸಿಕೊಳ್ಳಲಾಗುತ್ತದೆ. ಈ ಆರೋಪವು ಸುಳ್ಳಾಗಿದೆ. ಮತಾಂತರ ನಿಜವಾಗಿದ್ದರೆ, ಪ್ರಸ್ತುತ ಭಾರತದಲ್ಲಿ ಶೇ. 2.3ಕ್ಕಿಂತ ಹೆಚ್ಚು ಕ್ರಿಶ್ಚಿಯನ್ನರು ಇರುತ್ತಿದ್ದರು” ಎಂದು ತಿಳಿಸಿದ್ದಾರೆ.

ಗುಜರಾತ್‌ನ ವಡೋದರಾ ನಗರದಲ್ಲಿ ಬಾಲಕಿಯರ ಚಾರಿಟಿ ಹೋಮ್‌ನಲ್ಲಿ ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹುಡುಗಿಯರಿಗೆ ಬೈಬಲ್ ಓದಲು ಹೇಳಲಾಗುತ್ತಿದೆ. ಇತರ ಸಮುದಾಯಗಳಿಗೆ ಸೇರಿದವರ ಕೆಲವು ವಿವಾಹಗಳನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಸಲಾಗುತ್ತಿದೆ ಎಂಬ ಆರೋಪಗಳನ್ನು ಪೊಲೀಸರು ಮಾಡಿದ್ದರು. ಆದರೆ, ಇನ್‌ಸ್ಟಿಟ್ಯೂಟ್‌ನಲ್ಲಿ ಕೆಲಸ ಮಾಡುತ್ತಿರುವ ಸನ್ಯಾಸಿನಿಯೊಬ್ಬರು ಆರೋಪಳನ್ನು ಅಲ್ಲಗಳೆದಿದ್ದರು.

ಸ್ಥಗಿತ ಮಾಡಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ

“ಮಿಷನರೀಸ್ ಆಫ್ ಚಾರಿಟಿಯ ಯಾವುದೇ ಖಾತೆಗಳನ್ನು ಸ್ಥಗಿತ ಮಾಡಿಲ್ಲ. ಮಿಷನರೀಸ್ ಆಫ್ ಚಾರಿಟಿ ಸ್ವತಃ ತನ್ನ ಖಾತೆಗಳನ್ನು ಸ್ಥಗಿತ ಮಾಡಲು ಎಸ್‌ಬಿಐಗೆ ವಿನಂತಿಯನ್ನು ಕಳುಹಿಸಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ” ಎಂದು ಹೇಳಿಕೆ ಗೃಹ ಸಚಿವಾಲಯ ಹೇಳಿದೆ.

“ಮಿಷನರೀಸ್ ಆಫ್ ಚಾರಿಟಿಯ ನವೀಕರಣ ಅರ್ಜಿಯನ್ನು ಅನುಮೋದಿಸಲಾಗಿಲ್ಲ. ಮಿಷನರೀಸ್ ಆಫ್ ಚಾರಿಟಿಯ ನೋಂದಣಿಯು ಡಿಸೆಂಬರ್ 31, 2021 ರವರೆಗೆ ಮಾನ್ಯವಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...