Homeಮುಖಪುಟದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ನೀಟ್‌ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ವೈದ್ಯರು ಪ್ರತಿಭಟಿಸುತ್ತಿದ್ದು, ಸರ್ಕಾರ ಕ್ರಮ ಜರುಗಿಸದಿದ್ದರೆ ಬುಧವಾರ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

- Advertisement -
- Advertisement -

ನವ ದೆಹಲಿ: ನೀಟ್‌ ಸ್ನಾತಕೋತ್ತರ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ದೆಹಲಿಯ ನಿವಾಸಿ ವೈದ್ಯರ ಗುಂಪುಗಳು ವೈದ್ಯಕೀಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿವೆ.

ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್‌‌ನ ​​(ಎಫ್‌‌ಒಆರ್‌ಡಿಎ) 4,000 ಸದಸ್ಯರು ಸೋಮವಾರ ಮಧ್ಯರಾತ್ರಿ ಸರೋಜಿನಿ ನಗರ ಪೊಲೀಸ್ ಠಾಣೆ ಎದುರು ಧರಣಿಯನ್ನು ನಡೆಸಿದ್ದು, ರಾತ್ರಿ ಕರ್ಫ್ಯೂಗೆ ಬದ್ಧರಾಗಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಹಿಂದಿನ ದಿನ ಆರೋಗ್ಯ ಸಚಿವಾಲಯದ ಕಚೇರಿ ಕಡೆಗೆ ಮೆರವಣಿಗೆ ಹೊರಟಾಗ ತಡೆಯಲಾಗಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ಎಲ್ಲಾ ಆರ್‌ಡಿಎ ಸಂಘಗಳು ಮತ್ತು ಭಾರತದಾದ್ಯಂತ ಇರುವ ಇತರ ವೈದ್ಯರ ಸಂಘಗಳು ಬುಧವಾರದಿಂದ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ​​(ಎಫ್‌ಎಐಎಂಎ) ಕರೆ ನೀಡಿದೆ. ಏಮ್ಸ್‌ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಫೋರ್ಡಾಗೆ ಬೆಂಬಲವಾಗಿ ನಿಂತಿದೆ. 24 ಗಂಟೆಗಳ ಒಳಗೆ ಸರ್ಕಾರದಿಂದ ಯಾವುದೇ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದರೆ ಬುಧವಾರ ಎಲ್ಲಾ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಸಿದ್ದಾರೆ.

ವೈದ್ಯಕೀಯ ಭ್ರಾತೃತ್ವಕ್ಕೆ ಇದು “ಕಪ್ಪು ದಿನ” ಎಂದು ವೈದ್ಯರು ಕರೆದಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಹಲವು ಮಹಿಳಾ ವೈದ್ಯರು ಹಲ್ಲೆಗೊಳಗಾಗಿದ್ದಾರೆ. ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ಸಫ್ದರ್‌ಜಂಗ್, ಆರ್‌ಎಂಎಲ್ ಮತ್ತು ಲೇಡಿ ಹಾರ್ಡಿಂಜ್ – ಇತರ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಯ ಮೇಲೆ ವೈದ್ಯರ ಪ್ರತಿಭಟನೆ ಪರಿಣಾಮ ಬೀರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶೇ. 66ರಷ್ಟು ಸಾಮರ್ಥ್ಯದಲ್ಲಿ ವೈದ್ಯರು ಕೆಲಸ ಮಾಡುತ್ತಿದ್ದಾರೆ. ಹೊಸ ವೈದ್ಯರ ನೇಮಕ ತುರ್ತಾಗಿ ಆಗಬೇಕಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಒಂದು ವರ್ಷದಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.

“ನಾವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು (ಎಂಎಎಂಸಿ) ಕ್ಯಾಂಪಸ್‌ನಿಂದ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದೇವೆ. ಆದರೆ ನಾವು ಮೆರವಣಿಗೆ ಪ್ರಾರಂಭಿಸಿದ ಕೂಡಲೇ, ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಪೊಲೀಸರ ಕ್ರಮದಿಂದಾಗಿ ಕೆಲವು ಕಿರಿಯ ವೈದ್ಯರು ಗಾಯಗೊಂಡಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯಾವುದೇ ಬಲ ಪ್ರಯೋಗ ಮಾಡಿಲ್ಲ, ನಿಂದನೀಯ ಭಾಷೆ ಬಳಸಿಲ್ಲ. ಕೇವಲ 12 ಮಂದಿ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು” ಎಂದಿದ್ದಾರೆ.

ಆರರಿಂದ ಎಂಟು ಗಂಟೆಗಳ ಕಾಲ ಪ್ರತಿಭಟನಾಕಾರರು ದೆಹಲಿಯ ಆರ್ಟಿರಿಯಲ್ ಐಟಿಒ ರಸ್ತೆಯ ಒಂದು ಭಾಗವನ್ನು ಸ್ಥಗಿತಗೊಳಿಸಿದರು. ಸ್ಥಳದಿಂದ ದೂರ ಸರಿಯುವಂತೆ ಅವರಿಗೆ ಪದೇ ಪದೇ ಮನವಿ ಮಾಡಲಾಗಿದ್ದರೂ ಅವರು ರಸ್ತೆ ಜಾಮ್ ಮಾಡುವುದನ್ನು ಮುಂದುವರೆಸಿದರು. ನಂತರ, ಐಟಿಒ ಮಾರ್ಗದ ಎರಡೂ ಮಾರ್ಗಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದರು ಎಂದು ಪೊಲೀಸರು ಆರೋಪಿಸಿದ್ದಾರೆ.

“ನಾವು ಸಂಘದ ಸದಸ್ಯರೊಂದಿಗೆ ಮಾತನಾಡಿದ್ದೇವೆ ಮತ್ತು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ರಸ್ತೆಗಳನ್ನು ನಿರ್ಬಂಧಿಸುವುದನ್ನು ಮುಂದುವರೆಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರೆವುಗೊಳಿಸಲು ಯತ್ನಿಸಿದಾಗ ಅವರು ಪೊಲೀಸ್ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಲು ಯತ್ನಿಸಲಾಯಿತು. ಪೊಲೀಸ್ ವಾಹನಗಳ ಗಾಜು ಒಡೆದು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಪೊಲೀಸರು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸದಿದ್ದಲ್ಲಿ ಸೇವೆಯನ್ನು ತ್ಯಜಿಸಿ “ಸಾಮೂಹಿಕ ರಾಜೀನಾಮೆ” ನೀಡಲು ಸಂಘದ ಸದಸ್ಯರಲ್ಲಿ ಕೋರಲಾಗುವುದು ಎಂದು ನಿವಾಸಿ ವೈದ್ಯರ ಸಂಘ ಎಚ್ಚರಿಸಿದೆ.


ಇದನ್ನೂ ಓದಿರಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...