Homeಮುಖಪುಟದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ನೀಟ್‌ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ವೈದ್ಯರು ಪ್ರತಿಭಟಿಸುತ್ತಿದ್ದು, ಸರ್ಕಾರ ಕ್ರಮ ಜರುಗಿಸದಿದ್ದರೆ ಬುಧವಾರ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

- Advertisement -
- Advertisement -

ನವ ದೆಹಲಿ: ನೀಟ್‌ ಸ್ನಾತಕೋತ್ತರ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ದೆಹಲಿಯ ನಿವಾಸಿ ವೈದ್ಯರ ಗುಂಪುಗಳು ವೈದ್ಯಕೀಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿವೆ.

ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್‌‌ನ ​​(ಎಫ್‌‌ಒಆರ್‌ಡಿಎ) 4,000 ಸದಸ್ಯರು ಸೋಮವಾರ ಮಧ್ಯರಾತ್ರಿ ಸರೋಜಿನಿ ನಗರ ಪೊಲೀಸ್ ಠಾಣೆ ಎದುರು ಧರಣಿಯನ್ನು ನಡೆಸಿದ್ದು, ರಾತ್ರಿ ಕರ್ಫ್ಯೂಗೆ ಬದ್ಧರಾಗಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಹಿಂದಿನ ದಿನ ಆರೋಗ್ಯ ಸಚಿವಾಲಯದ ಕಚೇರಿ ಕಡೆಗೆ ಮೆರವಣಿಗೆ ಹೊರಟಾಗ ತಡೆಯಲಾಗಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ಎಲ್ಲಾ ಆರ್‌ಡಿಎ ಸಂಘಗಳು ಮತ್ತು ಭಾರತದಾದ್ಯಂತ ಇರುವ ಇತರ ವೈದ್ಯರ ಸಂಘಗಳು ಬುಧವಾರದಿಂದ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ​​(ಎಫ್‌ಎಐಎಂಎ) ಕರೆ ನೀಡಿದೆ. ಏಮ್ಸ್‌ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಫೋರ್ಡಾಗೆ ಬೆಂಬಲವಾಗಿ ನಿಂತಿದೆ. 24 ಗಂಟೆಗಳ ಒಳಗೆ ಸರ್ಕಾರದಿಂದ ಯಾವುದೇ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದರೆ ಬುಧವಾರ ಎಲ್ಲಾ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಸಿದ್ದಾರೆ.

ವೈದ್ಯಕೀಯ ಭ್ರಾತೃತ್ವಕ್ಕೆ ಇದು “ಕಪ್ಪು ದಿನ” ಎಂದು ವೈದ್ಯರು ಕರೆದಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಹಲವು ಮಹಿಳಾ ವೈದ್ಯರು ಹಲ್ಲೆಗೊಳಗಾಗಿದ್ದಾರೆ. ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ಸಫ್ದರ್‌ಜಂಗ್, ಆರ್‌ಎಂಎಲ್ ಮತ್ತು ಲೇಡಿ ಹಾರ್ಡಿಂಜ್ – ಇತರ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಯ ಮೇಲೆ ವೈದ್ಯರ ಪ್ರತಿಭಟನೆ ಪರಿಣಾಮ ಬೀರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶೇ. 66ರಷ್ಟು ಸಾಮರ್ಥ್ಯದಲ್ಲಿ ವೈದ್ಯರು ಕೆಲಸ ಮಾಡುತ್ತಿದ್ದಾರೆ. ಹೊಸ ವೈದ್ಯರ ನೇಮಕ ತುರ್ತಾಗಿ ಆಗಬೇಕಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಒಂದು ವರ್ಷದಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.

“ನಾವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು (ಎಂಎಎಂಸಿ) ಕ್ಯಾಂಪಸ್‌ನಿಂದ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದೇವೆ. ಆದರೆ ನಾವು ಮೆರವಣಿಗೆ ಪ್ರಾರಂಭಿಸಿದ ಕೂಡಲೇ, ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಪೊಲೀಸರ ಕ್ರಮದಿಂದಾಗಿ ಕೆಲವು ಕಿರಿಯ ವೈದ್ಯರು ಗಾಯಗೊಂಡಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯಾವುದೇ ಬಲ ಪ್ರಯೋಗ ಮಾಡಿಲ್ಲ, ನಿಂದನೀಯ ಭಾಷೆ ಬಳಸಿಲ್ಲ. ಕೇವಲ 12 ಮಂದಿ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು” ಎಂದಿದ್ದಾರೆ.

ಆರರಿಂದ ಎಂಟು ಗಂಟೆಗಳ ಕಾಲ ಪ್ರತಿಭಟನಾಕಾರರು ದೆಹಲಿಯ ಆರ್ಟಿರಿಯಲ್ ಐಟಿಒ ರಸ್ತೆಯ ಒಂದು ಭಾಗವನ್ನು ಸ್ಥಗಿತಗೊಳಿಸಿದರು. ಸ್ಥಳದಿಂದ ದೂರ ಸರಿಯುವಂತೆ ಅವರಿಗೆ ಪದೇ ಪದೇ ಮನವಿ ಮಾಡಲಾಗಿದ್ದರೂ ಅವರು ರಸ್ತೆ ಜಾಮ್ ಮಾಡುವುದನ್ನು ಮುಂದುವರೆಸಿದರು. ನಂತರ, ಐಟಿಒ ಮಾರ್ಗದ ಎರಡೂ ಮಾರ್ಗಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದರು ಎಂದು ಪೊಲೀಸರು ಆರೋಪಿಸಿದ್ದಾರೆ.

“ನಾವು ಸಂಘದ ಸದಸ್ಯರೊಂದಿಗೆ ಮಾತನಾಡಿದ್ದೇವೆ ಮತ್ತು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ರಸ್ತೆಗಳನ್ನು ನಿರ್ಬಂಧಿಸುವುದನ್ನು ಮುಂದುವರೆಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರೆವುಗೊಳಿಸಲು ಯತ್ನಿಸಿದಾಗ ಅವರು ಪೊಲೀಸ್ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಲು ಯತ್ನಿಸಲಾಯಿತು. ಪೊಲೀಸ್ ವಾಹನಗಳ ಗಾಜು ಒಡೆದು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಪೊಲೀಸರು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸದಿದ್ದಲ್ಲಿ ಸೇವೆಯನ್ನು ತ್ಯಜಿಸಿ “ಸಾಮೂಹಿಕ ರಾಜೀನಾಮೆ” ನೀಡಲು ಸಂಘದ ಸದಸ್ಯರಲ್ಲಿ ಕೋರಲಾಗುವುದು ಎಂದು ನಿವಾಸಿ ವೈದ್ಯರ ಸಂಘ ಎಚ್ಚರಿಸಿದೆ.


ಇದನ್ನೂ ಓದಿರಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...