Homeಮುಖಪುಟ'ನೆಲದ ಪದ': ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

‘ನೆಲದ ಪದ’: ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖರವರು ಉದ್ಘಾಟಿಸಲಿದ್ದಾರೆ. 

- Advertisement -
- Advertisement -

ಡಿಸೆಂಬರ್ 29, ಜಾತಿ -ಧರ್ಮಗಳನ್ನು ಮೀರಿದ ವಿಶ್ವಮಾನವ ಸಂದೇಶವನ್ನು ನಾಡಿಗೆ ಸಾರಿದ ಕುವೆಂಪು ಅವರ ಜನ್ಮದಿನದಂದು, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯು ವಿದ್ಯಾರ್ಥಿ- ಯುವಜನರಿಗಾಗಿ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ಒಂದಿಡಿ ದಿನ ಕಾರ್ಯಕ್ರಮ ನಡೆಯಲಿದ್ದು, ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ತನ್ನದೇ ಭಾಷೆಯಲ್ಲಿ ಮಾತಾಡಬೇಕು, ಹಾಡಬೇಕು, ಕುಣಿಯಬೇಕು. ಬಹುಆಯಾಮಗಳ ಸಾಂಸ್ಕೃತಿಕ ಪರಿಸರವನ್ನು ಕಟ್ಟಿಕೊಳ್ಳಲು ಮುಂದಡಿಯಿಡಬೇಕು ಎಂಬ ಉದ್ದೇಶದಿಂದ ನೆಲದ ಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎನ್ನುತ್ತಾರೆ ಕೆವಿಎಸ್ ಸಂಚಾಲಕರಾದ ಸರೋವರ್ ಬೆಂಕಿಕೆರೆ.

ನೆಲದ ಪದ ಉತ್ಸವವು ಒಂದು ಕಾರ್ಯಕ್ರಮ ಮಾತ್ರವಲ್ಲದೆ, ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫ್ಯಾಸಿಸ್ಟ್‌ ಶಕ್ತಿಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಸಮಾಜವನ್ನು ಜಾತಿ-ಧರ್ಮಗಳಾಗಿ ಒಡೆದು, ಸಹಬಾಳ್ವೆಯ ತತ್ವಗಳನ್ನು ಕಳಚಿ ದ್ವೇಷ ಭಿತ್ತುವ ಮೂಲಕ ಬಹುಜನರ ವಿರೋಧಿ ಸಾಂಸ್ಕೃತಿಕ ರಾಜಕಾರಣವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಬಹುತ್ವದ ತಾತ್ವಿಕತೆಯ ಬದಲು ಏಕರೂಪ ನಿರಂಕುಶತೆಯನ್ನೂ, ನೆಲಮೂಲದ ಸಂಸ್ಕೃತಿಯ ಬದಲು ಆಳುವವರ ಸಂಸ್ಕೃತಿಯನ್ನೂ ಜನರ ಬುದ್ಧಿಯೊಳಕ್ಕೆ ತೂರಿಸುತ್ತಿರುವ ಈ ಸಂದರ್ಭದಲ್ಲಿ ಬಹುಜನರ ಸಂಸ್ಕೃತಿಯನ್ನೂ-ಸಹಬಾಳ್ವೆಯ ತತ್ವವನ್ನು ಸಾಗುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ತಮಟೆ, ನಗಾರಿ, ಮೊಹರಂ ಅಲೈ ಕುಣಿತ ಸೇರಿದಂತೆ ವಿವಿಧ ವಾದ್ಯಗಳು, ರಾಜ್ಯದ ವಿವಿಧ ಪ್ರದೇಶಗಳ ವಿಶಿಷ್ಟ ಜನಪದ ಸಾಂಸ್ಕೃತಿ ಪ್ರಕಾರಗಳು, ತಳಸಮುದಾಯಗಳ ನೆಲಮೂಲದ ಹಾಡು-ಕುಣಿತ, ಸೌಹಾರ್ದತೆಯ ತತ್ವಗಳನ್ನು ಸಾರುವ ಹಾಡು, ಕವಿತೆ ನಾಟಕಗಳು ಪ್ರದರ್ಶನವಾಗಲಿವೆ.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕ ಮಂಸೋರೆ, ಸಾಹಿತಿ-ನಿರ್ದೇಶಕ ಯೋಗೇಶ್‌ ಮಾಸ್ಟರ್‌, ನಿರ್ದೇಶಕ ಬಿ.ಎಂ.ಗಿರಿರಾಜ್, ಯುವ ಗಾಯಕ ಚಿಂತನ್ ವಿಕಾಶ್, ಚಿಂತಕರಾದ ಜಾಪರ್ ಮೊಹಿಯುದ್ದೀನ್, ಜನಪ್ರಿಯ ಕಲಾವಿದ ಜಂಬೆ ಬಾಲು, ಗಾಯಕ ನಾದ ಮಣಿನಾಲ್ಕೂರು, ಗಾಯಕ ವಾಸು ದೀಕ್ಷಿತ್‌, ಕಲಾವಿದರಾದ ಹ.ರಾ.ಮಹೇಶ್‌, ಕವಯಿತ್ರಿ ಉಮಾ, ಯುವ ಕಲಾವಿದೆ ಸೌಮಿನಿ, ಕಲಾವಿದ ಸೌರಪಲ್ಲಿ ಚಂದ್ರು ಸೇರಿದಂತೆ ವಿವಿಧ ಕಲಾವಿದರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮವು ಡಿ.29ರ ಬುಧವಾರ ಬೆಳಗ್ಗೆ 10-30ರಿಂದ ಆರಂಭವಾಗಲಿದೆ. ಮಾಗಡಿ ರಸ್ತೆಯಲ್ಲಿರುವ ಅಂಜನಾನಗರದ ಬಳಿಯ ಸ್ಫೂರ್ತಿಧಾಮದ ವಿಶಾಲ ಸಾಂಸ್ಕೃತಿಕ ವಾತವಾರಣದಲ್ಲಿ ನೆಲಪ ಪದ ಮೇಳೈಸಲಿದೆ.


ಇದನ್ನೂ ಓದಿ: ಕುವೆಂಪು ಅವರ ಜನುಮದಿನದಂದು ‘ಕೊಲುವೆನೆಂಬ ಭಾಶೆ’ ಕೃತಿ ಬಿಡುಗಡೆ; ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...