Homeಕರ್ನಾಟಕಆರೋಗ್ಯ ಸೂಚ್ಯಂಕ: ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ಕಡೆಯ ಸ್ಥಾನದಲ್ಲಿ ಕರ್ನಾಟಕ

ಆರೋಗ್ಯ ಸೂಚ್ಯಂಕ: ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ಕಡೆಯ ಸ್ಥಾನದಲ್ಲಿ ಕರ್ನಾಟಕ

- Advertisement -
- Advertisement -

ಸೋಮವಾರ (ಡಿ.27) ರಂದು ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೇ ಕಡೆಯ ಸ್ಥಾನವನ್ನು ಪಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ಕರ್ನಾಟಕವು ತೀವ್ರ ಕುಸಿತವನ್ನು ಕಂಡಿದೆ.

ಆರೋಗ್ಯ ಮೂಲಸೌಕರ್ಯ ಏರಿಕೆಯ ಸೂಚ್ಯಂಕದಲ್ಲಿ 2018-19 ರಲ್ಲಿ ರಾಜ್ಯವು 16 ನೇ ಸ್ಥಾನದಲ್ಲಿತ್ತು ಈ ವರ್ಷ 19 ನೇ ಸ್ಥಾನಕ್ಕೆ ಕುಸಿದಿದೆ. ಒಟ್ಟಾರೆ ಆರೋಗ್ಯ ಸೂಚ್ಯಂಕದಲ್ಲಿ 8 ನೇ ಸ್ಥಾನದಿಂದ 9 ನೇ ಸ್ಥಾನಕ್ಕೆ ಕುಸಿದಿದೆ. ರಾಜ್ಯದ ಒಟ್ಟಾರೆ ಸ್ಕೋರ್ 59.29 ರಿಂದ 57.93 ಕ್ಕೆ ಕುಸಿತ ಕಂಡಿದೆ.

ನೀತಿ ಆಯೋಗವು ದೊಡ್ಡ ರಾಜ್ಯಗಳು, ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಎಂದು ವಿಂಗಡಿಸಿ ವರದಿ ಸಿದ್ಧಪಡಿಸಿದೆ. ಕರ್ನಾಟಕವನ್ನು 19 ದೊಡ್ಡ ರಾಜ್ಯಗಳಲ್ಲಿ ಬಂದಿದೆ. ನವಜಾತ ಶಿಶುಗಳ ಮರಣ ಪ್ರಮಾಣ (NMR), ಐದು ವರ್ಷದೊಳಗಿನ ಮರಣ ಪ್ರಮಾಣ (U5MR) ಮತ್ತು ಸಂಪೂರ್ಣ ರೋಗನಿರೋಧಕತೆ ಎಂಬ ಹಲವು ವಿಭಾಗಗಳಲ್ಲಿ ವರ್ಗಿಕರಿಸಿ ವರದಿ ನೀಡಲಾಗುತ್ತದೆ.

ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ಉತ್ತಮ ಆರೋಗ್ಯ ವ್ಯವಸ್ಥೆಗಳನ್ನು ಸೂಚಿಸುವ ಒಟ್ಟಾರೆ ಕಾರ್ಯಕ್ಷಮತೆಯ ದೃಷ್ಟಿಯಿಂದ ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಹರಿಯಾಣ ದೊಡ್ಡ ರಾಜ್ಯಗಳಲ್ಲಿ ಮೂರನೇ ಒಂದು ಭಾಗವಾಗಿವೆ ಎಂದು ವರದಿ ಹೇಳಿದೆ, ಆದರೆ ಕಳೆದ ವರ್ಷ 2018-19ದಿಂದ 2019- 20 ರವರೆಗೆ ನೆಗೆಟಿವ್ ಕಾರ್ಯಕ್ಷಮತೆಯನ್ನು ಹೊಂದಿದೆ.

ರಾಜ್ಯವನ್ನು ಒಟ್ಟಾರೆ ‘ಸಾಧಕರು’ ವಿಭಾಗದಲ್ಲಿ ವರ್ಗೀಕರಿಸಲಾಗಿದೆ. ಆದರೆ ಹೆಚ್ಚುತ್ತಿರುವ ಮೂಲ ಸೌಕರ್ಯಗಳ ಕಾರ್ಯಕ್ಷಮತೆಯಲ್ಲಿ ‘ಸುಧಾರಿತವಾಗಿಲ್ಲ’ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಜನನದ ಸಮಯದಲ್ಲಿ ಲಿಂಗ ಅನುಪಾತದಲ್ಲಿ ನಿರಂತರ ಕುಸಿತವಾಗಿದೆ ಎಂದು ವರದಿ ಹೇಳುತ್ತದೆ

“ಕರ್ನಾಟಕವನ್ನು ಹೊರತುಪಡಿಸಿ, ಎಲ್ಲಾ ದಕ್ಷಿಣ ರಾಜ್ಯಗಳು ಕಳೆದ 2018-19 ವರ್ಷ ಮತ್ತು ವರದಿಯ ಉಲ್ಲೇಖಿತ ವರ್ಷ 2019-20 ನಡುವೆ ಸಂಯೋಜಿತ ಸೂಚ್ಯಂಕ ಅಂಶಗಳಲ್ಲಿ ಸುಧಾರಣೆಯನ್ನು ತೋರಿಸಿವೆ” ಎಂದು ನೀತಿ ಆಯೋಗ ತಿಳಿಸಿದೆ.

ದೊಡ್ಡ ರಾಜ್ಯಗಳ ಪೈಕಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರಸ್ಥಾನದಲ್ಲಿದೆ. ಆದರೆ ಉತ್ತರ ಪ್ರದೇಶ ರಾಜ್ಯವು ಆರೋಗ್ಯ ಕ್ಷಮತೆಯಲ್ಲಿ ಕಡೆಯ ಸ್ಥಾನದಲ್ಲಿದೆ.


ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...