Homeಕರ್ನಾಟಕಆರೋಗ್ಯ ಸೂಚ್ಯಂಕ: ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ಕಡೆಯ ಸ್ಥಾನದಲ್ಲಿ ಕರ್ನಾಟಕ

ಆರೋಗ್ಯ ಸೂಚ್ಯಂಕ: ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ಕಡೆಯ ಸ್ಥಾನದಲ್ಲಿ ಕರ್ನಾಟಕ

- Advertisement -
- Advertisement -

ಸೋಮವಾರ (ಡಿ.27) ರಂದು ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೇ ಕಡೆಯ ಸ್ಥಾನವನ್ನು ಪಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ಕರ್ನಾಟಕವು ತೀವ್ರ ಕುಸಿತವನ್ನು ಕಂಡಿದೆ.

ಆರೋಗ್ಯ ಮೂಲಸೌಕರ್ಯ ಏರಿಕೆಯ ಸೂಚ್ಯಂಕದಲ್ಲಿ 2018-19 ರಲ್ಲಿ ರಾಜ್ಯವು 16 ನೇ ಸ್ಥಾನದಲ್ಲಿತ್ತು ಈ ವರ್ಷ 19 ನೇ ಸ್ಥಾನಕ್ಕೆ ಕುಸಿದಿದೆ. ಒಟ್ಟಾರೆ ಆರೋಗ್ಯ ಸೂಚ್ಯಂಕದಲ್ಲಿ 8 ನೇ ಸ್ಥಾನದಿಂದ 9 ನೇ ಸ್ಥಾನಕ್ಕೆ ಕುಸಿದಿದೆ. ರಾಜ್ಯದ ಒಟ್ಟಾರೆ ಸ್ಕೋರ್ 59.29 ರಿಂದ 57.93 ಕ್ಕೆ ಕುಸಿತ ಕಂಡಿದೆ.

ನೀತಿ ಆಯೋಗವು ದೊಡ್ಡ ರಾಜ್ಯಗಳು, ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಎಂದು ವಿಂಗಡಿಸಿ ವರದಿ ಸಿದ್ಧಪಡಿಸಿದೆ. ಕರ್ನಾಟಕವನ್ನು 19 ದೊಡ್ಡ ರಾಜ್ಯಗಳಲ್ಲಿ ಬಂದಿದೆ. ನವಜಾತ ಶಿಶುಗಳ ಮರಣ ಪ್ರಮಾಣ (NMR), ಐದು ವರ್ಷದೊಳಗಿನ ಮರಣ ಪ್ರಮಾಣ (U5MR) ಮತ್ತು ಸಂಪೂರ್ಣ ರೋಗನಿರೋಧಕತೆ ಎಂಬ ಹಲವು ವಿಭಾಗಗಳಲ್ಲಿ ವರ್ಗಿಕರಿಸಿ ವರದಿ ನೀಡಲಾಗುತ್ತದೆ.

ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ಉತ್ತಮ ಆರೋಗ್ಯ ವ್ಯವಸ್ಥೆಗಳನ್ನು ಸೂಚಿಸುವ ಒಟ್ಟಾರೆ ಕಾರ್ಯಕ್ಷಮತೆಯ ದೃಷ್ಟಿಯಿಂದ ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಹರಿಯಾಣ ದೊಡ್ಡ ರಾಜ್ಯಗಳಲ್ಲಿ ಮೂರನೇ ಒಂದು ಭಾಗವಾಗಿವೆ ಎಂದು ವರದಿ ಹೇಳಿದೆ, ಆದರೆ ಕಳೆದ ವರ್ಷ 2018-19ದಿಂದ 2019- 20 ರವರೆಗೆ ನೆಗೆಟಿವ್ ಕಾರ್ಯಕ್ಷಮತೆಯನ್ನು ಹೊಂದಿದೆ.

ರಾಜ್ಯವನ್ನು ಒಟ್ಟಾರೆ ‘ಸಾಧಕರು’ ವಿಭಾಗದಲ್ಲಿ ವರ್ಗೀಕರಿಸಲಾಗಿದೆ. ಆದರೆ ಹೆಚ್ಚುತ್ತಿರುವ ಮೂಲ ಸೌಕರ್ಯಗಳ ಕಾರ್ಯಕ್ಷಮತೆಯಲ್ಲಿ ‘ಸುಧಾರಿತವಾಗಿಲ್ಲ’ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಜನನದ ಸಮಯದಲ್ಲಿ ಲಿಂಗ ಅನುಪಾತದಲ್ಲಿ ನಿರಂತರ ಕುಸಿತವಾಗಿದೆ ಎಂದು ವರದಿ ಹೇಳುತ್ತದೆ

“ಕರ್ನಾಟಕವನ್ನು ಹೊರತುಪಡಿಸಿ, ಎಲ್ಲಾ ದಕ್ಷಿಣ ರಾಜ್ಯಗಳು ಕಳೆದ 2018-19 ವರ್ಷ ಮತ್ತು ವರದಿಯ ಉಲ್ಲೇಖಿತ ವರ್ಷ 2019-20 ನಡುವೆ ಸಂಯೋಜಿತ ಸೂಚ್ಯಂಕ ಅಂಶಗಳಲ್ಲಿ ಸುಧಾರಣೆಯನ್ನು ತೋರಿಸಿವೆ” ಎಂದು ನೀತಿ ಆಯೋಗ ತಿಳಿಸಿದೆ.

ದೊಡ್ಡ ರಾಜ್ಯಗಳ ಪೈಕಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರಸ್ಥಾನದಲ್ಲಿದೆ. ಆದರೆ ಉತ್ತರ ಪ್ರದೇಶ ರಾಜ್ಯವು ಆರೋಗ್ಯ ಕ್ಷಮತೆಯಲ್ಲಿ ಕಡೆಯ ಸ್ಥಾನದಲ್ಲಿದೆ.


ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...