Homeಮುಖಪುಟಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

ಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

- Advertisement -
- Advertisement -

| ರಾಜಶೇಖರ್ ಅಕ್ಕಿ |

ಎರಡು ವಾರಗಳ ಹಿಂದೆ ಸಿನೆಮಾ ಮತ್ತು ಸ್ಟ್ರಕ್ಚರ್ ಬಗ್ಗೆ ಬರೆದಿದ್ದೆ. ಇಂದು ಸಂಘರ್ಷದ ಬಗ್ಗೆ ಬರೆಯಲು ಪ್ರಯತ್ನಿಸುವೆ.
ಇತರ ಕಲಾ ಮಾಧ್ಯಮಗಳನ್ನು ಹೋಲಿಸಿದರೆ ಸಿನೆಮಾಗೆ ತನ್ನದೇ ಆದ ಸಾಧ್ಯತೆಗಳೊಂದಿಗೆ ಇತಿಮಿತಿಗಳೂ ಇವೆ. ಸಿನೆಮಾದಲ್ಲಿ ಒಂದು ನೇರ ಕಥೆ ಇರಲೇಬೇಕು. ಒಬ್ಬ ಮುಖ್ಯ ಪಾತ್ರವನ್ನು ಗುರುತಿಸಲೇಬೇಕು,(ಇದಕ್ಕೆ ಕೆಲವು ಶ್ರೇಷ್ಠ ಅಪವಾದಗಳು ಖಂಡಿತ ಇವೆ.) ಆ ಮುಖ್ಯ ಪಾತ್ರಕ್ಕೆ ಕೆಲವು ಗುರಿಗಳಿರಬೇಕು, ಆ ಗುರಿಗಳಿಗೆ ತದ್ವಿರುದ್ಧವಾಗಿ ಕೆಲವು ಶಕ್ತಿಗಳಿರಬೇಕು. ಆಗ ಉಂಟಾಗುವುದು ಸಂಘರ್ಷ.

ಸಂಘರ್ಷವೇ ಒಂದು ಸಿನೆಮಾದ ಜೀವಾಳ. ಸಂಘರ್ಷ ತಪ್ಪಿದ ತಕ್ಷಣ ಆ ಸಿನೆಮಾ ಬಿದ್ದುಹೋಗುತ್ತದೆ. ನಮ್ಮಲ್ಲಿ ಅನೇಕ ಬರಹಗಾರರು ‘ಒಳ್ಳೆಯ’ ಕಥೆಗಳನ್ನು, ‘ಒಳ್ಳೆಯ’ ಸೀನ್‍ಗಳನ್ನು ಬರೆದು ಒಳ್ಳೆಯ ಪಾತ್ರಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಒಳ್ಳೆಯ ಹಾಸ್ಯ, ಭಾವನೆ, ಒಳ್ಳೆಯ ವಿಚಾರಗಳನ್ನೂ ಹೇಳಲು ಪ್ರಯತ್ನಿಸುತ್ತಾರೆ. ಆದರೆ ಆ ಎಲ್ಲ ‘ಒಳ್ಳೆಯ’ಗಳು ಸಂಘರ್ಷದ ವ್ಯಾಪ್ತಿಯಲ್ಲಿ ಬಂದಾಗ ಮಾತ್ರ ಕೆಲಸ ಮಾಡುತ್ತವೆ ಇಲ್ಲವಾದರೆ ಅವುಗಳು ಒಳ್ಳೆಯ ಸೀನ್‍ಗಳಾಗೇ ಉಳಿದು ಚಿತ್ರಕ್ಕೆ ಯಾವ ಸಹಾಯವನ್ನೂ ಮಾಡುವುದಿಲ್ಲ.

ಒಂದು ಕಾದಂಬರಿಯಲ್ಲಿ ಪಾತ್ರದ, ಆ ಪಾತ್ರಗಳು ಜೀವಿಸುತ್ತಿರುವ ಸಮಾಜದ ಬಗ್ಗೆ ನೂರಾರು ಪುಟಗಳನ್ನು ಬರೆಯಬಹುದು; ಆ ಪಾತ್ರದ ತಲೆಯೊಳಗೆ ಹೊಕ್ಕಿ ಅಲ್ಲಿ ಆಗುತ್ತಿರುವ ತಲ್ಲಣಗಳ ಬಗ್ಗೆ, ಕನಸು, ನಿರಾಶೆಗಳ ಬಗ್ಗೆಯೂ ಬರೆಯಬಹುದು. ಆದರೆ ಸಿನೆಮಾಗೆ ಆ ಸ್ವಾತಂತ್ರವಿಲ್ಲ. ಇದು ಸಿನೆಮಾದ ಒಂದು ಮಿತಿ. ಈ ಮಿತಿಗಳನ್ನು ಮೀರುತ್ತ, ಆ ತಲ್ಲಣಗಳನ್ನು ದೃಶ್ಯರೂಪಕ್ಕೆ ತರುವಲ್ಲಿ ಅನೇಕ ನಿರ್ದೇಶಕರು ಯಶಸ್ವಿಯಾಗಿದ್ದಾರೆ ಆದರೂ ಅಲ್ಲೊಂದು ಸಂಘರ್ಷ ಅತಿಗಿರುತ್ತದೆ.

ಇನ್ನು ಸಂಘರ್ಷಗಳ ಸ್ವರೂಪಗಳನ್ನು ನೋಡುವ. ಮೊದಲನೇಯದು, ನಮಗೆ ಹೆಚ್ಚಾಗಿ ಕಾಣಿಸುವ ಸಂಘರ್ಷವಾದ ಬಾಹ್ಯ ಕಾರಣಗಳಿಂದ ಉಂಟಾಗುವ ಸಂಘರ್ಷ. ಅಂದರೆ, ನಮ್ಮ ನಾಯಕ/ಕಿ ಏನೋ ಗುರಿಯಿಟ್ಟುಕೊಂಡು ಹೋಗುತ್ತಿರುವಾಗ ಆ ಗುರಿಗೆ ಅಡ್ಡಬರುವ ಅಡೆತಡೆಗಳು ಮೂಲತಃವಾಗಿ ಆ ನಾಯಕಿಯ ಪಾತ್ರದ ಹೊರಗಿರುತ್ತವೆ. ಉದಾಹರಣೆಗೆ, ಆ ಹುಡುಗ ತನಗಿಷ್ಟವಾದ ಹುಡುಗಿಯೊಂದಿಗೆ ಮದುವೆ ಮಾಡಿಕೊಳ್ಳುವ ಗುರಿಯನ್ನಿಟ್ಟುಕೊಂಡಿರುವಾಗ ಅದಕ್ಕೆ ಹುಡುಗಿಯ ಅಪ್ಪ ವಿರೋಧ ಒಡ್ಡುತ್ತಾನೆ; ಒಂದು ಹಳ್ಳಿಯಲ್ಲಿ ನಾಯಕಿ ಬಡ ಮಕ್ಕಳ ಸಲುವಾಗಿ ಒಂದು ಶಾಲೆಯನ್ನು ಪ್ರಾರಂಭಿಸುವ ಗುರಿಯನ್ನಿಟ್ಟುಕೊಂಡಿದ್ದಾಳೆ ಆದರೆ ಅಲ್ಲಿ ಖಾಸಗಿ ಶಾಲೆಯನ್ನು ನಡೆಸುವ ಪಟ್ಟಭದ್ರ ಹಿತಾಸಕ್ತಿಗಳು ಇವಳು ಶಾಲೆ ಪ್ರಾರಂಭಿಸಲು ಬಿಡುವುದಿಲ್ಲ.

ಈಗ ಈ ಪ್ರಮುಖ ಪಾತ್ರಧಾರಿಗಳು ತಮ್ಮ ಎದುರಿನ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎನ್ನುವುದೇ ಸಂಘರ್ಷ. ಇಲ್ಲಿ ಜೀವನದಲ್ಲಿ ಪ್ರೀತಿ ಎನ್ನುವುದು ಎಷ್ಟು ಮುಖ್ಯ ಅಥವಾ ಬಡಮಕ್ಕಳಿಗಾಗಿ ಶಾಲೆಗಳನ್ನು ಪ್ರಾರಂಭಿಸುವುದು ಎಷ್ಟು ಒಳ್ಳೆಯ ಕೆಲಸ ಎನ್ನುವುದರ ಬಗ್ಗೆ ಲೆಕ್ಷರ್ ಕೊಡಲು ಅವಕಾಶವಿರುವುದಿಲ್ಲ. ಆಯಾ ಸಂಘರ್ಷಗಳ ವ್ಯಾಪ್ತಿಯಲ್ಲೇ ಈ ಸಂಗತಿಗಳು ಹೊರಬರಬೇಕು.

1998 ರಲ್ಲಿ ತೆರೆಕಂಡ ಸತ್ಯಾ ಚಿತ್ರದಲ್ಲಿ ಒಂದು ಪಾತ್ರ ಜೋಕ್ ಹೇಳುವ ಸನ್ನಿವೇಶವಿದೆ. ಒಂದು ಕನ್‍ಸ್ಟ್ರಕ್ಷನ್ ಆಗುತ್ತಿರುವ ಕಟ್ಟಡದಲ್ಲಿ ಕುಳಿತಾಗ ಸ್ನೇಹಲ್ ದಾಬಿಯ ಪಾತ್ರ ಒಂದು ತರಲೆ ಜೋಕ್ ಹೇಳಲಾರಂಭಿಸುತ್ತಾನೆ. ಆ ಜೋಕ್‍ಗೆ ಪ್ರೇಕ್ಷಕರು ನಗಬೇಕು ಎನ್ನುವಷ್ಟರಲ್ಲಿ ಗುಂಡಿನ ಸುರಿಮಳೆಯಾಗಿ ಅಲ್ಲಿಯ ಅನೇಕರು ಜೀವ ಕಳೆದುಕೊಳ್ಳುತ್ತಾರೆ. ಆ ಸೀನ್ ಜೋಕ್ ಹೇಳಲಂತೂ ಇದ್ದೇ ಇಲ್ಲ, ಜೋಕ್ ಮುಂದುವರೆಯುತ್ತಿದ್ದಾಗಲೂ ಏನೋ ಆಗುವುದು ಎನ್ನುವ ಭಾವನೆ ಗಟ್ಟಿಗೊಳ್ಳುತ್ತಲಿರುತ್ತದೆ. ಗಟ್ಟಿಯಾದ ಸ್ಟ್ರಕ್ಷರ್ ಮತ್ತು ಸಂಘರ್ಷವನ್ನಿಟ್ಟುಕೊಂಡೇ ಲಘು ಸನ್ನಿವೇಶಗಳನ್ನೂ ತೋರಿಸುವುದಕ್ಕೆ ಸತ್ಯಾ ಸಿನೆಮಾ ಒಳ್ಳೆಯ ಉದಾಹರಣೆ.

ಎರಡನೇಯದ್ದು ಆಂತರಿಕ ಸಂಘರ್ಷ. ಒಬ್ಬ ವ್ಯಕ್ತಿಗೆ ಬಾಕ್ಸಿಂಗ್ ಚಾಂಪಿಯನ್‍ಷಿಪ್ ಗೆಲ್ಲಬೇಕಿದೆ, ಒಬ್ಬನಿಗೆ ತಾನು ದುರ್ಬಲ ಎನ್ನುವ ಕೀಳರಿಮೆಯಿದೆ, ಇನ್ನೊಬ್ಬನಿಗೆ ತನ್ನನ್ನು ಯಾರೂ ಇಷ್ಟಪಡಲಾರರು ಎನ್ನುವ ಭಾವನೆಯಿದೆ, ಬಾಲ್ಯದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿದ ಒಬ್ಬ ಬಾಲಕಿಯು ಯಾವುದೇ ಸಂಬಂಧವನ್ನು ನಿಭಾಯಿಸಲು ಅಸಮರ್ಥಳಾಗಿದ್ದಾಳೆ. ಈಗ ಇವುಗಳನ್ನು ಎದುರಿಸಬೇಕಿದೆ. ಇಲ್ಲಿಯ ಆಯಾ ನಾಯಕ/ಕಿಗೆ ಇರುವ ಅಡೆತಡೆಗಳು ತನ್ನೊಳಗೇ ಹುದುಗಿವೆ. ತನ್ನೊಳಗೇ ಹುದುಗಿರುವ ಶತ್ರುವನ್ನು ಎದುರಿಸುವುದನ್ನು ದೃಶ್ಯ ಮಾಧ್ಯಮದಲ್ಲಿ ತೋರಿಸುವುದು ಕಷ್ಟ ಎನಿಸಬಹುದು. ಆದರೆ ಅನಿಸಿದಷ್ಟು ಕಷ್ಟವಲ್ಲ. ಅಲ್ಲಿಯೂ ಬಾಹ್ಯ ಸಂಗತಿಗಳಿವೆ.

ನಾಯಕ/ಕಿಯ ದೈನಂದಿನ ದೈಹಿಕ ಕ್ರಿಯೆಗಳಿಂದಲೇ ಆ ಸಂಘರ್ಷ ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತದೆ. ತನ್ನ ಸಮಸ್ಯೆ ಮತ್ತು ಅದಕ್ಕಿರುವ ಉತ್ತರಗಳೂ ದೈನಂದಿನ ಕ್ರಿಯೆಗಳಿಂದ ಸ್ಪಷ್ಟವಾಗುವ ಹಾಗೆ ಚಿತ್ರಕಥೆಯನ್ನು ಹೆಣೆಯಬೇಕಾಗುತ್ತದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಎರಡೂ ಬಗೆಯ ಸಂಘರ್ಷಗಳು ಎಲ್ಲಾ ಹಂತಗಳಲ್ಲಿ ಪ್ರತ್ಯೇಕವಾಗಿರಬೇಕಿಲ್ಲ. ಬಾಹ್ಯ ಸಂಘರ್ಷದಲ್ಲಿ ಆಂತರಿಕ ಸಂಘರ್ಷವಿದ್ದರೆ, ಆಂತರಿಕ ಸಂಘರ್ಷದ ಕಥೆಗಳಲ್ಲಿ ಬಾಹ್ಯ ಸಂಗತಿಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಚಿತ್ರಕಥೆ ಬರೆಯುವ ರೂಢಿಸಮ್ಮತ ಕಲಿಕೆಯಲ್ಲಿ ನಾಯಕಿ/ಕ ತನ್ನ ಗುರಿಯನ್ನು ತಲುಪಲು ಹರಸಾಹಸ ಪಡುತ್ತಾಳೆ/ನೆ; ಅವಳಿಗೆ ತನ್ನ ಗುರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ; ಚಿತ್ರದಲ್ಲಿ ಆಗುವ ಹೆಚ್ಚಿನ ಘಟನೆಗಳನ್ನು ನಾಯಕಿಯೇ ಮೊದಲು ಮಾಡುತ್ತಾಳೆ ಅದರಿಂದ ಪ್ರೇಕ್ಷಕ ತನ್ನನ್ನು ಆ ನಾಯಕಿಯಲ್ಲಿ ಕಂಡುಕೊಳ್ಳುತ್ತಾನೆ ಎನ್ನುವ ನಂಬಿಕೆ. ಆದರೆ ಇವ್ಯಾವೂ ಅನಿವಾರ್ಯವಲ್ಲ. ಅನೇಕ ಕಥೆಗಳಲ್ಲಿ ನಾಯಕಿಗೆ ತನ್ನ ಗುರಿಯ ಅರಿವು ಇರುವುದಿಲ್ಲ. ಪರಿಸ್ಥಿತಿಯ ಕೂಸು ಆ ನಾಯಕಿ. ಅದರರ್ಥ ಅಲ್ಲಿ ಸಂಘರ್ಷ ತಪ್ಪಿಲ್ಲ.

ತನಗರಿವಿಲ್ಲದೇ ಆ ನಾಯಕಿ ಹೋರಾಟದ ಪಯಣವನ್ನು ಕ್ರಮಿಸುತ್ತಾಳೆ. ಕೆಲವು ಚಿತ್ರಗಳಲ್ಲಿ ನಾಯಕಿಯ ಹೋರಾಟ, ಸಂಘರ್ಷ ಸ್ಪಷ್ಟವಾಗಿ ಕಂಡುಬರುವುದಿಲ್ಲ. ಮತ್ತು ಆ ಸಂಘರ್ಷ ಅವಳದ್ದೇ ಆಗಿರಬೇಕೆನ್ನುವ ನಿಯಮವೂ ಇಲ್ಲ. ಅಲೆಕ್ಸಾಂಡರ್ ಪೇನ್‍ನ ಮೊದಲ ಚಿತ್ರ ಸಿಟಿಝನ್ ರೂತ್‍ನಲ್ಲಿ ನಾಯಕಿ ರೂತ್ ಗರ್ಭಿಣಿ. ರಸ್ತೆಯಲ್ಲಿ ಬದುಕುತ್ತಿರುವ ಅವಳಿಗೆ ಮಗುವನ್ನು ಉಳಿಸಿಕೊಳ್ಳಬೇಕೇ, ಗರ್ಭಪಾತ ಮಾಡಿಸಿಕೊಳ್ಳಬೇಕೇ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. ತನ್ನ ಹೊರಗಿನ ಪರಿಸ್ಥಿತಿ ಬದಲಾದಂತೆ ತನಗೆ ಸೂಕ್ತವೆನಿಸಿದ ಹಾಗೆ ಅವಳು ಪ್ರತಿಕ್ರಿಯಿಸುತ್ತಾಳೆ. ಅಬೌಟ್ ಶ್ಮಿತ್ ಚಿತ್ರದಲ್ಲಿ ನಾಯಕ ಶ್ಮಿತ್ ಈಗ ತಾನೆ ನಿವೃತ್ತಿ ಹೊಂದಿದ್ದಾನೆ. ಮುಂದೇನು ಮಾಡಬೇಕೆನ್ನುವುದು ತಿಳಿಯದು. ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಲೇ ಅವನು ತನ್ನ ಬಗ್ಗೆ ಕಂಡುಕೊಳ್ಳುತ್ತಾನೆ. ಆದರೆ ಅದರಲ್ಲೂ ಸಂಘರ್ಷವಿದೆ.

ಯಾವುದೇ ಸಂಘರ್ಷದಲ್ಲಿ ನಾಯಕಿ ಸರಿ ಎನಿಸುವ ದಾರಿಯಲ್ಲಿದ್ದು, ಆ ನಾಯಕಿಯ ವಿರುದ್ಧದ ಶಕ್ತಿಗಳು ತಪ್ಪಾದ ದಾರಿಯಲ್ಲೇ ಇರಬೇಕು ಎನ್ನುವ ಅನಿವಾರ್ಯವೂ ಇಲ್ಲ. ನಾಯಕಿಯೊಂದಿಗೆ ಅವಳ ಶತ್ರುಗಳೂ ಪರಿಸ್ಥಿತಿಯ ಕೂಸುಗಳೇ. ಆ ಶಕ್ತಿಗಳಿಗೂ ತಮ್ಮದೇ ಆದ ಕಾರಣಗಳಿರುತ್ತವೆ. ಅದೇ ಕಾರಣಕ್ಕೆ ಅನೇಕ ಸಲ ಖಳನಾಯಕರ ಪಾತ್ರಗಳೂ ನಮಗೆ ಇಷ್ಟವಾಗುತ್ತವೆ.
ನಾಯಕಿಯ ಈ ಸಂಘರ್ಷದಲ್ಲಿ ಯಾರು ಗೆಲ್ಲಬೇಕು ಎನ್ನುವುದು ಅಷ್ಟು ಮುಖ್ಯವಲ್ಲ. ನಾಯಕಿ ತನ್ನ ಗುರಿ ಮುಟ್ಟುವಲ್ಲಿ ವಿಫಲವಾದರೂ ಸಂಘರ್ಷ ನಿರಂತರವಾಗಿರುವುದರಿಂದ ಚಿತ್ರ ಗೆಲ್ಲುತ್ತದೆ. ಆ ಚಿತ್ರದ ಆಶಯ ಮುಟ್ಟುತ್ತದೆ. ಆದರೆ ಆ ಸೋಲು ಗೆಲುವಿನ ದಡಕ್ಕೆ ಮುಟ್ಟಿಸುವುದು ಚಿತ್ರದ ಕರ್ತವ್ಯ. ಸಿನೆಮಾದ ಅಂತ್ಯದಲ್ಲಿ ಆ ಸಂಘರ್ಷ ಮುಕ್ತಾಯವಾಗುತ್ತದೆ ಅಥವಾ ಇನ್ನೊಂದು ಸ್ವರೂಪವನ್ನು ಪಡೆದುಕೊಳ್ಳುತ್ತದೆ. ನ್ಯೂಟನ್‍ನ ನಿಯಮದಂತೆ ಪ್ರತೀ ಕ್ರಿಯೆಗೂ ಸಮನಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇರುತ್ತದೆ ಎಂದಾಗ ಸಂಘರ್ಷ ಎನ್ನುವುದು ನಿರಂತರವಲ್ಲದೇ?

ಇದನ್ನು ಓದಿ: ಸಿನಿಮಾ ಮತ್ತು ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...