Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪುರೋಹಿತರೊಬ್ಬರ ಮನೆಗೆ ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವಿಡಿಯೊದಲ್ಲಿ, ಚಿನ್ನಾಭರಣಗಳನ್ನು ಸಾಲಾಗಿ ಜೋಡಿಸಿಟ್ಟಿರುವುದು ಮತ್ತು ಒಂದಷ್ಟು ಜನರು ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಇರುವುದು ಕಾಣಬಹುದಾಗಿದೆ.

“ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರ ಎಷ್ಟು ಗೊತ್ತಾ? 128 ಕೆಜಿ ಚಿನ್ನ , 150 ಕೋಟಿ ಕ್ಯಾಶ್, 70 ಕೋಟಿ ಬೆಲೆಯ ವಜ್ರ” ಎಂದು ವಾಟ್ಸಪ್‌ನಲ್ಲಿ ಸತತವಾಗಿ ವಿಡಿಯೊ ಹರಿದಾಡುತ್ತಿದೆ. ಈ ಬಗ್ಗೆ ಫ್ಯಾಕ್ಟ್‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಸಂದೇಶಗಳು ಬಂದಿವೆ.

ವಿಡಿಯೊ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆ ಕೇಳಿ ನಾನುಗೌರಿ.ಕಾಂ ಗೆ ಬಂದಿರುವ ಸಂದೇಶ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ವಿಡಿಯೊ ಫೇಸ್‌ಬುಕ್‌‌ನಲ್ಲಿ ಕೂಡಾ ಹರಿದಾಡುತ್ತಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಅಲ್ಲಿ ಕೂಡಾ ವಿಡಿಯೊ ಜೊತೆಗಿನ ಸಂದೇಶವು ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದಂತೆ ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ ಸಿಕ್ಕ ಆಭರಣಗಳು ಎಂದು ಪ್ರತಿಪಾದಿಸುತ್ತಿದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸುಮಾರು 37 ಸೆಕೆಂಡಿನ ಈ ವಿಡಿಯೊವನ್ನು ಅದೇ ಪ್ರತಿಪಾದನೆಯೊಂದಿಗೆ ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ. ಅದನ್ನು ಇಲ್ಲಿ ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ತಿರುಪತಿ ದೇವಸ್ಥಾನದ ಮಾಜಿ ಟ್ರಸ್ಟಿ ಜೆ. ಸೇಕರ್‌ ರೆಡ್ಡಿ ಅವರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣಗಳು ಎಂದು ಪ್ರತಿಪಾದಿಸಿ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಅವರುಗಳ ಆರ್ಕೈವ್ ಲಿಂಕ್‌ ಅನ್ನು ಇಲ್ಲಿ ವೀಕ್ಷಿಸಿ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ಫ್ಯಾಕ್ಟ್‌‌ಚೆಕ್‌

ವಾಸ್ತವದಲ್ಲಿ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೇ ಸಂಬಂಧವೇ ಇಲ್ಲ. ಈ ಬಗ್ಗೆ ನಾವು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದು ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯಿಂದ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ಮರುವಶಪಡಿಸಿಕೊಂಡಿರುವ ವಿಡಿಯೊವಾಗಿದೆ. ಇದನ್ನು ತಮಿಳು ಮಾಧ್ಯಮ ಜಯಾ ಪ್ಲಸ್‌ ಡಿಸೆಂಬರ್‌ 22, 2021 ರಂದು ವರದಿ ಮಾಡಿತ್ತು.

ವರದಿಯ ಪ್ರಕಾರ, ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್‌ ಅಲುಕ್ಕಾಸ್‌ ಶೋರೂಂನಿಂದ ಈ ದರೋಡೆ ನಡೆದಿತ್ತು. ಅದನ್ನು ದರೋಡೆಕೋರದಿಂದ ಪೊಲೀಸರು ಮರು ವಶಪಡಿಸಿಕೊಂಡಿರುವ ವಿಡಿಯೊ ಇದಾಗಿದೆ. ಇದನ್ನು ಹಲವಾರು ತಮಿಳು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಯೂಟ್ಯೂಬ್‌ ಚಾನೆಲ್‌ಗಳು ಪ್ರಸಾರ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ದರೋಡೆಯ ಘಟನೆಯು ಡಿಸೆಂಬರ್ 14, 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಗಿತ್ತು. ತನಿಖೆಯ ನಂತರ ವೆಲ್ಲೂರು ಪೊಲೀಸರು ವೆಲ್ಲೂರಿನ ಸ್ಮಶಾನದಲ್ಲಿ ಹೂತಿಟ್ಟಿದ್ದ ಎಲ್ಲಾ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಸ್ ಅಲುಕ್ಕಾಸ್ ಶೋರೂಂನಿಂದ ಚಿನ್ನ ಮತ್ತು ವಜ್ರಗಳನ್ನು ದರೋಡೆ ಮಾಡಿದ್ದ ಆರೋಪಿ ಡೀಕಾರಾಮನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಹೀಗಾಗಿ ಈ ವಿಡಿಯೊಗೂ ತಿರುಪತಿ ದೇವಾಲಯಕ್ಕೂ ಯಾವುದೆ ಸಂಬಂಧವಿಲ್ಲ. ಆದರೆ 2016ರಲ್ಲಿ ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ. ಶೇಕರ್ ರೆಡ್ಡಿ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಈ ಐಟಿ ದಾಳಿಗಳ ನಂತರ ಆಂಧ್ರಪ್ರದೇಶ ಸರ್ಕಾರ ಸೇಕರ್ ರೆಡ್ಡಿ ಅವರನ್ನು ಟಿಟಿಡಿ ಸದಸ್ಯತ್ವದಿಂದ ತೆಗೆದುಹಾಕಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್‌ನಲ್ಲಿ ಶೇಕರ್ ರೆಡ್ಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿತ್ತು. ಪ್ರಕರಣವನ್ನು ವಜಾ ಮಾಡಿದ ನಂತರ ಶೇಕರ್ ರೆಡ್ಡಿ ಮತ್ತೇ ತಿರುಪತಿ ಆಡಳಿತ ಮಂಡಳಿಗೆ ಸೇರಿದ್ದರು. ಆದಾಗ್ಯೂ, ಆಗಸ್ಟ್ 2021 ರಲ್ಲಿ ರಚಿತವಾದ ಹೊಸ ಮಂಡಳಿಯಲ್ಲಿ ಅವರನ್ನು ಸೇರಿಸಲಾಗಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೆ ಸಂಬಂಧವಿಲ್ಲ. ವೈರಲ್‌ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ, ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆಗೆ ಸಂಬಂಧಪಟ್ಟದ್ದಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...