Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪುರೋಹಿತರೊಬ್ಬರ ಮನೆಗೆ ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವಿಡಿಯೊದಲ್ಲಿ, ಚಿನ್ನಾಭರಣಗಳನ್ನು ಸಾಲಾಗಿ ಜೋಡಿಸಿಟ್ಟಿರುವುದು ಮತ್ತು ಒಂದಷ್ಟು ಜನರು ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಇರುವುದು ಕಾಣಬಹುದಾಗಿದೆ.

“ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರ ಎಷ್ಟು ಗೊತ್ತಾ? 128 ಕೆಜಿ ಚಿನ್ನ , 150 ಕೋಟಿ ಕ್ಯಾಶ್, 70 ಕೋಟಿ ಬೆಲೆಯ ವಜ್ರ” ಎಂದು ವಾಟ್ಸಪ್‌ನಲ್ಲಿ ಸತತವಾಗಿ ವಿಡಿಯೊ ಹರಿದಾಡುತ್ತಿದೆ. ಈ ಬಗ್ಗೆ ಫ್ಯಾಕ್ಟ್‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಸಂದೇಶಗಳು ಬಂದಿವೆ.

ವಿಡಿಯೊ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆ ಕೇಳಿ ನಾನುಗೌರಿ.ಕಾಂ ಗೆ ಬಂದಿರುವ ಸಂದೇಶ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ವಿಡಿಯೊ ಫೇಸ್‌ಬುಕ್‌‌ನಲ್ಲಿ ಕೂಡಾ ಹರಿದಾಡುತ್ತಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಅಲ್ಲಿ ಕೂಡಾ ವಿಡಿಯೊ ಜೊತೆಗಿನ ಸಂದೇಶವು ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದಂತೆ ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ ಸಿಕ್ಕ ಆಭರಣಗಳು ಎಂದು ಪ್ರತಿಪಾದಿಸುತ್ತಿದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸುಮಾರು 37 ಸೆಕೆಂಡಿನ ಈ ವಿಡಿಯೊವನ್ನು ಅದೇ ಪ್ರತಿಪಾದನೆಯೊಂದಿಗೆ ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ. ಅದನ್ನು ಇಲ್ಲಿ ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ತಿರುಪತಿ ದೇವಸ್ಥಾನದ ಮಾಜಿ ಟ್ರಸ್ಟಿ ಜೆ. ಸೇಕರ್‌ ರೆಡ್ಡಿ ಅವರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣಗಳು ಎಂದು ಪ್ರತಿಪಾದಿಸಿ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಅವರುಗಳ ಆರ್ಕೈವ್ ಲಿಂಕ್‌ ಅನ್ನು ಇಲ್ಲಿ ವೀಕ್ಷಿಸಿ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ಫ್ಯಾಕ್ಟ್‌‌ಚೆಕ್‌

ವಾಸ್ತವದಲ್ಲಿ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೇ ಸಂಬಂಧವೇ ಇಲ್ಲ. ಈ ಬಗ್ಗೆ ನಾವು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದು ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯಿಂದ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ಮರುವಶಪಡಿಸಿಕೊಂಡಿರುವ ವಿಡಿಯೊವಾಗಿದೆ. ಇದನ್ನು ತಮಿಳು ಮಾಧ್ಯಮ ಜಯಾ ಪ್ಲಸ್‌ ಡಿಸೆಂಬರ್‌ 22, 2021 ರಂದು ವರದಿ ಮಾಡಿತ್ತು.

ವರದಿಯ ಪ್ರಕಾರ, ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್‌ ಅಲುಕ್ಕಾಸ್‌ ಶೋರೂಂನಿಂದ ಈ ದರೋಡೆ ನಡೆದಿತ್ತು. ಅದನ್ನು ದರೋಡೆಕೋರದಿಂದ ಪೊಲೀಸರು ಮರು ವಶಪಡಿಸಿಕೊಂಡಿರುವ ವಿಡಿಯೊ ಇದಾಗಿದೆ. ಇದನ್ನು ಹಲವಾರು ತಮಿಳು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಯೂಟ್ಯೂಬ್‌ ಚಾನೆಲ್‌ಗಳು ಪ್ರಸಾರ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ದರೋಡೆಯ ಘಟನೆಯು ಡಿಸೆಂಬರ್ 14, 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಗಿತ್ತು. ತನಿಖೆಯ ನಂತರ ವೆಲ್ಲೂರು ಪೊಲೀಸರು ವೆಲ್ಲೂರಿನ ಸ್ಮಶಾನದಲ್ಲಿ ಹೂತಿಟ್ಟಿದ್ದ ಎಲ್ಲಾ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಸ್ ಅಲುಕ್ಕಾಸ್ ಶೋರೂಂನಿಂದ ಚಿನ್ನ ಮತ್ತು ವಜ್ರಗಳನ್ನು ದರೋಡೆ ಮಾಡಿದ್ದ ಆರೋಪಿ ಡೀಕಾರಾಮನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಹೀಗಾಗಿ ಈ ವಿಡಿಯೊಗೂ ತಿರುಪತಿ ದೇವಾಲಯಕ್ಕೂ ಯಾವುದೆ ಸಂಬಂಧವಿಲ್ಲ. ಆದರೆ 2016ರಲ್ಲಿ ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ. ಶೇಕರ್ ರೆಡ್ಡಿ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಈ ಐಟಿ ದಾಳಿಗಳ ನಂತರ ಆಂಧ್ರಪ್ರದೇಶ ಸರ್ಕಾರ ಸೇಕರ್ ರೆಡ್ಡಿ ಅವರನ್ನು ಟಿಟಿಡಿ ಸದಸ್ಯತ್ವದಿಂದ ತೆಗೆದುಹಾಕಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್‌ನಲ್ಲಿ ಶೇಕರ್ ರೆಡ್ಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿತ್ತು. ಪ್ರಕರಣವನ್ನು ವಜಾ ಮಾಡಿದ ನಂತರ ಶೇಕರ್ ರೆಡ್ಡಿ ಮತ್ತೇ ತಿರುಪತಿ ಆಡಳಿತ ಮಂಡಳಿಗೆ ಸೇರಿದ್ದರು. ಆದಾಗ್ಯೂ, ಆಗಸ್ಟ್ 2021 ರಲ್ಲಿ ರಚಿತವಾದ ಹೊಸ ಮಂಡಳಿಯಲ್ಲಿ ಅವರನ್ನು ಸೇರಿಸಲಾಗಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೆ ಸಂಬಂಧವಿಲ್ಲ. ವೈರಲ್‌ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ, ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆಗೆ ಸಂಬಂಧಪಟ್ಟದ್ದಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...