Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...