Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...