Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...