Homeಮುಖಪುಟ1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

1 ಕೋಟಿ ಓಟು ನೀಡಿ, 70 ರೂ.ಗೆ ಮದ್ಯ ಕೊಡುತ್ತೇವೆ: ಆಂಧ್ರ BJP ಅಧ್ಯಕ್ಷ

- Advertisement -
- Advertisement -

2024 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಒಂದು ಕೋಟಿ ಮತಗಳನ್ನು ಪಡೆದರೆ ರಾಜ್ಯದ ಜನರಿಗೆ 70 ರೂ.ಗೆ ಮದ್ಯ ಸಿಗುತ್ತದೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಭರವಸೆ ನೀಡಿದ್ದಾರೆ.

ವಿಜಯವಾಡದಲ್ಲಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವೀರರಾಜು, “ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಚೆನ್ನಾಗಿರುವ ಮತ್ತು ಜನಪ್ರಿಯ ಬ್ರಾಂಡ್‌ಗಳು ಲಭ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

“ಸ್ಪೆಷಲ್‌ ಸ್ಟೇಟಸ್‌, ಗವರ್ನರ್ಸ್‌ ಮೆಡಲ್‌ ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಅವರು ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರು ಆದರೆ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿಗೆ ಒಂದು ಕೋಟಿ ಮತ ನೀಡಿ…ನಾವು ಕೇವಲ 70 ರೂ.ಗೆ ಮದ್ಯವನ್ನು ನೀಡುತ್ತೇವೆ. ಹೆಚ್ಚಿನ ಲಾಭ ಬಂದರೆ ದರವನ್ನು ಇನ್ನೂ ಇಳಿಸಿ ಕೇವಲ 50 ರೂ.ಗೆ ಮದ್ಯ ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಸರ್ಕಾರ ನಕಲಿ ಮದ್ಯ ಉತ್ಪಾದಿಸಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ರಾಜ್ಯ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಪ್ರತಿ ತಿಂಗಳು ಒಬ್ಬ ವ್ಯಕ್ತಿ ಮದ್ಯಕ್ಕೆ 12,000 ರೂ. ಖರ್ಚು ಮಾಡುತ್ತಿದ್ದಾನೆ. ಈ ಹಣವನ್ನು ಸರ್ಕಾರ ಪಡೆದು, ಕಲ್ಯಾಣ ಯೋಜನೆಗಳ ನೆಪದಲ್ಲಿ ಪಡೆದು ವಾಪಸು ನೀಡುತ್ತಿದೆ” ಎಂದಿದ್ದಾರೆ.

ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ‘ವಿಶೇಷ ಮಾರ್ಜಿನ್’ ಸೇರಿಸಿರುವುದರಿಂದ MRP ಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪಕ್ಷ ಗೆದ್ದರೆ 30 ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಗೆದ್ದು ಆಮೇಲೆ ಪೆಟ್ರೋಲ್ ಬೆಲೆಯನ್ನು 100 ರೂ ಗೆ ತಂದು ನಿಲ್ಲಿಸಿರುವ ಸರ್ಕಾರ ನಿಮ್ಮದು.
    1 ಕೋಟಿ ಮತ ನೀಡಿ ಕಡಿಮೆ ಬೆಲೆಗೆ ಕುಡಿಯುವ ವ್ಯವಸ್ಥೆ ನಮಗೆ ಬೇಡ. ಈಗಾಗಲೇ ದುಡಿದು ರಾಷ್ಟ್ರ ಕಟ್ಟುವ ನಮ್ಮ ಯುವ ಜನತೆ ಕುಡಿತದ ಅಮಲಿನಿಂದ ತಮ್ಮ ಬದುಕನ್ನೇ ಕಟ್ಟಲು ಆಗದೇ ಇರುವ ಸ್ಥಿತಿಯಲ್ಲಿ ಇದ್ದಾರೆ, ಮತ್ತೆ ಕಡಿಮೆ ಬೆಲೆಗೆ ಮದ್ಯ ನೀಡಿ ನಮ್ಮ ದೇಶವನ್ನು ಮತ್ತೊಂದು ಸೂಡಾನ್ ದೇಶವಾಗಿ ಪರಿವರ್ತಿಸುವ ಕೆಲಸ ಮಾಡಬೇಡಿ ! ಯಾಕೆಂದರೆ ಯುವ ಜನಾಂಗ ಆರ್ಥಿಕವಾಗಿ ದೇಶವನ್ನು ಬಲಿಷ್ಠ ಮಾಡಬೇಕೇ ಹೊರತು ತುತ್ತು ಅನ್ನಕ್ಕಾಗಿ ಪರಿತಾಪ ಪಡುವ ಯುವ ಜನಾಂಗದ ದೇಶವಾಗಬಾರದು.
    ನಿಮ್ಮಲ್ಲಿ ಕಿಂಚಿತ್ತೂ ದೇಶಭಕ್ತಿ, ಸ್ವಾಭಿಮಾನ, ಅದೂ ಬೇಡ ಮಾನ ಮರ್ಯಾದೆ ಇದ್ದರೆ ಇಡೀ ದೇಶದಲ್ಲಿ ಮಧ್ಯವನ್ನು ಬ್ಯಾನ್ ಮಾಡಿ. ಆಗ ಒಪ್ಪುತ್ತೇನೆ ನೀವು ಒಬ್ಬ ಅಪ್ಪನಿಗೆ ಹುಟ್ಟಿದ ಪಕ್ಷ ಮತ್ತು ಮಕ್ಕಳು ಎಂದು.
    ಕುಡಿದು ಕ್ಷಣಕಾಲ ಮೋಜು ಮಾಡುವುದನ್ನು ಹೇಳಿಕೊಡುವ ನಿಮ್ಮ ಸರ್ಕಾರಕ್ಕೆ ನನ್ನ ಧಿಕ್ಕಾರ ಧಿಕ್ಕಾರ 👎👎
    ಛೇ ಛೇ ನಾಚಿಕೆ ನಾಚಿಕೆ…………👎👎👎👎👎👎

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...