Homeಚಳವಳಿನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

ನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಡಿಸೆಂಬರ್ 5 ರಂದು 14 ನಾಗರಿಕರನ್ನು ಬಲಿತೆಗೆದುಕೊಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೈನಿಕರ ಹೇಳಿಕೆಯನ್ನು ದಾಖಲಿಸಲು ಸೇನೆಯು ರಾಜ್ಯದ ತನಿಖಾ ತಂಡಕ್ಕೆ ಅನುಮತಿ ನೀಡಿದೆ.

ಗುಂಡಿನ ದಾಳಿ ಪ್ರಕರಣದ ತನಿಖೆಗಾಗಿ ನಾಗಾಲ್ಯಾಂಡ್ ತಲುಪಿದ ಸೇನಾ ತಂಡವು ನಾಗರಿಕರ ಹತ್ಯಾಕಾಂಡದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಯೋಧರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ರಾಜ್ಯದ ತನಿಖಾ ತಂಡಕ್ಕೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ನಾಗಾಲ್ಯಾಂಡ್ ವಿಶೇಷ ತನಿಖಾ ತಂಡ ಅಥವಾ ಎಸ್‌ಐಟಿ ಈ ವಾರ 21 ಪ್ಯಾರಾ ವಿಶೇಷ ಪಡೆಯ ಯೋಧರ ಹೇಳಿಕೆಗಳನ್ನು ದಾಖಲಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು.

ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾಗಾಲ್ಯಾಂಡ್ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಅಡಿಯಲ್ಲಿ ಇರುವುದರಿಂದ ರಾಜ್ಯ ಮಟ್ಟದ ತಂಡದಿಂದ ತನಿಖೆ ಹೇಗೆ ನಡೆಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತನಿಖೆಯನ್ನು ವೇಗಗೊಳಿಸಲು ನಾಗಾಲ್ಯಾಂಡ್ ಎಸ್‌ಐಟಿಯನ್ನು ಎಂಟು ಸದಸ್ಯರಿಂದ 22 ಸದಸ್ಯರಿಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ದೊಡ್ಡ ತಂಡವು ಐದು ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳನ್ನು ಒಳಗೊಂಡಿದೆ. ಎಸ್‌ಐಟಿಯನ್ನು ಏಳು ತಂಡಗಳಾಗಿ ವಿಂಗಡಿಸಲಾಗಿದೆ.

ಇನ್ನು ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.


ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Tu loafer nanmakla nachike, maana, maryade enu ella Tu nim janmakke, enta naayi jeevana nimdu, sainikara bagge mathadoke yogyate beeku ayogya nanmakla, terrorists, naxal galige support mado sule malli neevu

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...