Homeಮುಖಪುಟಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ...

ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

- Advertisement -
- Advertisement -

ಉತ್ತರ ಪ್ರದೇಶದ ಉದ್ಯಮಿ ಪಿಯೂಷ್ ಜೈನ್ ಮೇಲಿನ ದಾಳಿಗೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಬಿಜೆಪಿ, ಸಮಾಜವಾದಿ ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸುತ್ತಿವೆ. ಇದಕ್ಕೆ ಸ್ಪಷ್ಟನೆ ನೀಡಿರುವ ಏಜೆನ್ಸಿಯ ಮೂಲಗಳು, ಇದು ತಪ್ಪಾಗಿ ನಡೆದ ದಾಳಿ ಪ್ರಕರಣವಲ್ಲ ಎಂದಿವೆ.

ಜಿಎಸ್‌ಟಿ ವಂಚನೆಗಳ ತನಿಖೆ ನಡೆಸುತ್ತಿರುವ ಏಜೆನ್ಸಿಯು ಉದ್ಯಮಿ ಪಿಯೂಷ್ ಜೈನ್ ಅವರ ಮನೆಯಿಂದ ಲೆಕ್ಕಕ್ಕೆ ಸಿಗದ ಹಣದ ರಾಶಿಯನ್ನು ಪತ್ತೆಹಚ್ಚಿದೆ. ಆದಾಯ ತೆರಿಗೆ ಇಲಾಖೆ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಅವರ ಮೇಲೆ ನಡೆಸಿದ ದಾಳಿಯಲ್ಲಿ 200 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ದೊಡ್ಡ ಪ್ರಮಾಣದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದು ಯಾರ ಮೇಲೋ ದಾಳಿ ನಡೆಸಲು ಹೋಗಿ ಮತ್ತೊಬ್ಬರ ಮೇಲೆ ನಡೆಸಿರುವ ದಾಳಿಯಲ್ಲ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ ಈ ದಾಳಿ ಕೂಡ ರಾಜಕೀಯ ನಾಯಕರಿಗೆ ವಿಪಕ್ಷಗಳ ವಿರುದ್ಧ ಬಳಸಲು ದಾಳವಾಗಿದೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ರ್‍ಯಾಲಿಗಳ ಭಾಷಣಗಳಲ್ಲಿ ಈ ವಿಷಯ ಮುಖ್ಯವಾಗುತ್ತಿದೆ.

ನಿನ್ನೆ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, “ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯಾಪಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ರ ಮೊದಲು ಅವರು ಉತ್ತರದಾದ್ಯಂತ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಇದು” ಎಂದು ಆರೋಪಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್ ಯಾದವ್, ’ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರು ಎಂದು ಗೊಂದಲ ಮಾಡಿಕೊಂಡಿದೆ. ತಮ್ಮದೆ ಉದ್ಯಮಿ ಮೇಲೆ ತಪ್ಪಾಗಿ ದಾಳಿ ನಡೆಸಿದೆ’ ಎಂದು ಹೇಳಿದ್ದಾರೆ.

ಇವರ ರಾಜಕೀಯ ಕೆಸರೆರಚಾಟದ ಮಧ್ಯೆ ಬಂದಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಈ ಕಾಮಿಡಿ ಇಲ್ಲಿಗೆ ಮುಗಿಯುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಬಿಜೆಪಿ ಮತ್ತು ಎಸ್‌ಪಿ ನಡುವೆ ಹೆಚ್ಚಿನ ಆರೋಪಗಳು ಹೆಚ್ಚಾದಹಾಗೆ ಇನ್ನಷ್ಟು ಪಾತ್ರಗಳು ಹೊರಹೊಮ್ಮುತ್ತವೆ” ಎಂದಿದ್ದಾರೆ.


ಇದನ್ನೂ ಓದಿ: ‘ಪಶ್ಚಾತ್ತಾಪವಿಲ್ಲ’: ಮಹಾತ್ಮ ಗಾಂಧಿ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಳಿಚರಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...