Homeಕರ್ನಾಟಕಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರಿನ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್‌ ಮತ್ತು ಭಿತ್ತಿ ಪತ್ರಗಳನ್ನು ಹಾಕಿರುವ ಪ್ರಕರಣದಲ್ಲಿ 62 ವರ್ಷದ ದೇವದಾಸ ದೇಸಾಯಿ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯೂ ಮಂಗಳೂರಿನ ದೈವಸ್ಥಾನ, ದೇವಸ್ಥಾನ, ಮಸೀದಿ ಮತ್ತು ಸಿಖ್‌ ಗುರುದ್ವಾರ ಸೇರಿದಂತೆ ಒಟ್ಟು 18 ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕಿರುವುದಾಗಿ ಒಪ್ಪಿಕೊಂಡಿದ್ದಾಗಿ ನಗರದ ಆಯುಕ್ತರಾದ ಶಶಿಕುಮಾರ್‌‌ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಮೂಲತಃ ಹುಬ್ಬಳ್ಳಿ ನಿವಾಸಿಯಾಗಿದ್ದಾನೆ. ಆದರೆ ಕಳೆದ 24 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಿಕ್ಷಾ ಡ್ರೈವರ್‌ ಆಗಿದ್ದ ಆರೋಪಿಯು ಪ್ರಸ್ತುತ ಪೇಪರ್‌ ಮತ್ತು ರಟ್ಟುಗಳನ್ನು ಸಂಗ್ರಹಿಸಿ ಅದನ್ನು ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಂಗಳೂರಿನಲ್ಲಿ ಇತ್ತೀಚೆಗೆ ದೈವಸ್ಥಾನದ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಂ ಪತ್ತೆಯಾಗುತ್ತಿರುವ ಬಗ್ಗೆ ಸರಣಿಯಾಗಿ ವರದಿಯಾಗಿತ್ತು. ಜೊತೆಗೆ ಹಲವು ಪ್ರದೇಶಗಳಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು.

ಡಿಸೆಂಬರ್‌ 28 ರಂದು ಮಂಗಳೂರು ನಗರದ ನಂದಿಗುಡ್ಡೆಯಲ್ಲಿರುವ ಕೊರಗಜ್ಜ ದೈವಸ್ಥಾನದ ಕಟ್ಟೆಯ ಮೇಲೆ ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈತನನ್ನು ಬಂಧಿಸಿದಾಗ, ಆರೋಪಿಯ ಉಳಿದ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ.

ಆರೋಪಿಯು ಸುಮಾರು 20 ವರ್ಷಗಳ ಹಿಂದೆಯೆ ಕುಟುಂಬದೊಂದಿಗೆ ಸಂಪರ್ಕ ಕಡಿದು ಏಕಾಂಗಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, “ಅವನ ಹಿಂದೆ ಯಾವುದೇ ಜನ ಅಥವಾ ಗುಂಪಿನ ಕೈವಾಡ ಇಲ್ಲ, ಆತ ಏಕಾಂಗಿಯಾಗಿ ಈ ಕೃತ್ಯಗಳನ್ನು ಮಾಡುತ್ತಿದ್ದ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಕಟ್ಟೆ, ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ಸಮೀಪದ ಕಾಣಿಕೆ ಡಬ್ಬಿ, ಒಮೆಗಾ ಆಸ್ಪತ್ರೆ ಬಳಿಯ ಕಲ್ಲುರ್ಟಿ ದೈವಸ್ಥಾನ, ಪಂಪ್ ವೆಲ್ ಬಳಿಯಿರುವ ದೈವಸ್ಥಾನ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಪು ನಾಗನಕಟ್ಟೆ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ, ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯ ಸೈದಾನಿ ಬೀಬಿ ದರ್ಗಾ, ಬಂಗ್ರ ಕೂಳೂರಿನಲ್ಲಿರುವ ಸಿಖ್ ಗುರುದ್ವಾರ, ಕೋಟ ಶ್ರೀ ಬಬ್ಬುಸ್ವಾಮಿ ದೈವಸ್ಥಾನ- ಮಂಕಿಸ್ಟ್ಯಾಂಡ್ ಹಾಗೂ ಜೆಪ್ಪು ಮಹಾಕಾಳಿಪಡ್ಪುವಿನಲ್ಲಿರುವ ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿಯ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ ಇತ್ಯಾದಿಗಳನ್ನು ಹಾಕಿದ್ದಾಗಿ ಆರೋಪಿಯು ಒಪ್ಪಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ ರಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದಕ್ಕಾಗಿ ಆರೋಪಿಯು ದಾರ್ಮಿಕ ಕೇಂದ್ರಗಳನ್ನು ಅಪವಿತ್ರ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಪಿ ದೇವದಾಸ್ ದೇಸಾಯಿ, ತಾನು ಮಾಡಿದ ಯಾವುದೆ ಕೃತ್ಯದ ಬಗ್ಗೆ ಪಶ್ಚಾತಾಪ ಇಲ್ಲ ಎಂದು ಹೇಳಿಕೊಂಡಿದ್ದಾನೆ. “ಹದಿನೈದು ವರ್ಷಗಳಿಂದ ಬೈಬಲನ್ನು ಆಳವಾಗಿ ಅಧ್ಯಯನ ಮಾಡುತ್ತಿದ್ದೇನೆ. ಭೂಮಿಗೆ ಅಂತ್ಯ ಬರುವ ಮೊದಲು ಏಸುಕ್ರಿಸ್ತನ ಹೆಸರಿನಲ್ಲಿ ರಕ್ಷಣೆ ಹೊಂದಿ ಎಂದು ಅದು ಹೇಳುತ್ತದೆ. ಆದರೆ ಜನರು ಇದನ್ನು ಪಾಲಿಸುತ್ತಿಲ್ಲ, ಹಾಗಾಗಿ ಅಪವಿತ್ರ ಜಾಗಗಳಿಗೆ ಅಪವಿತ್ರ ವಸ್ತುಗಳನ್ನು ಹಾಕುತ್ತಿದ್ದೆ” ಎಂದು ಹೇಳಿದ್ದಾನೆ.

ಇದನ್ನೂ ಓದಿ:ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...