Homeಕರ್ನಾಟಕಕೋಮು ಪ್ರಚೋದನೆ: ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿ ನಾಯಕರಲ್ಲಿ ಅಸಮಾಧಾನ

ಕೋಮು ಪ್ರಚೋದನೆ: ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿ ನಾಯಕರಲ್ಲಿ ಅಸಮಾಧಾನ

- Advertisement -
- Advertisement -

ಬಿಜೆಪಿಯ ಯುವ ಘಟಕದ ಅಧ್ಯಕ್ಷ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ರಾಜಕೀಯ ಜೀವನವನ್ನು ವೃದ್ಧಿಸಿಕೊಳ್ಳಲು ಕೋಮು ಕೇಂದ್ರಿತ ಭಾಷಣಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅವರ ಕೆಲವು ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪಕ್ಷದ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರು ಉಡುಪಿಯ ಕೃಷ್ಣ ಮಠದಲ್ಲಿ ನಡೆದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದೂ ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ನಂತರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಭಾರಿ ವಿವಾದ ಸೃಷ್ಟಿಯಾಗಿತ್ತು. ತಮ್ಮ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ ತೇಜಸ್ವಿ ಸೂರ್ಯ, “ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ತಪ್ಪಿಸಬಹುದಾಗಿದ್ದ ವಿವಾದವನ್ನು ಉಂಟುಮಾಡಿದ ನನ್ನ ಭಾಷಣದ ಕೆಲವು ಹೇಳಿಕೆಗಳಿಗಾಗಿ ವಿಷಾದಿಸುತ್ತೇನೆ. ಹಾಗಾಗಿ ಈ ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆಯುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಮುಂಬರುವ ಗೋವಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಹಿಂದೂ-ಕ್ರಿಶ್ಚಿಯನ್ ಮತಗಳ ಬಲವರ್ಧನೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ತೇಜಸ್ವಿ ಸೂರ್ಯ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಬರುತ್ತಿರುವ ಪ್ರತಿಕ್ರಿಯೆಗಳನ್ನು ಗಮನಿಸಿರುವ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಸೂರ್ಯ ಅವರು ತಮ್ಮ ಹಲವು ಕೋಮುವಾದಿ ಹೇಳಿಕೆಗಳಿಂದ ಬಿಜೆಪಿ ನಾಯಕರು ಮೌನವಹಿಸಿದ್ದರೂ ಇತ್ತೀಚೆಗೆ ಉಡುಪಿ ಮಠದಲ್ಲಿ ಅವರು ನೀಡಿದ್ದ ಹೇಳಿಕೆಗೆ ಸಮ್ಮತಿ ಸೂಚಿಸಿಲ್ಲ.

“ನಮ್ಮ ಪಕ್ಷವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಪ್ರತಿಪಾದಿಸುತ್ತದೆ. ಪೇಜಾವರ ಮಠದಲ್ಲಿ ಅವರು ಹೇಳಿಕೆ ನೀಡಿದ್ದರು. ಸ್ವಾಮೀಜಿ ಹಿಂದೂ ಧರ್ಮದ ಪರವಾಗಿ ನಿಂತಿದ್ದರೂ, ಈ ಮಠವು ಎಲ್ಲರನ್ನೂ ಒಳಗೊಳ್ಳುವ ಸ್ವಭಾವ ಹೊಂದಿದೆ. ಮಠದ ವೇದಿಕೆಯನ್ನು ಬಳಸಿಕೊಂಡು ಹೇಳಿಕೆ ನೀಡಿದ್ದಕ್ಕೆ ಮಠದಲ್ಲಿಯೂ ಅಸಮಾಧಾನ ವ್ಯಕ್ತವಾಗಿದೆ ಎಂಬ ಭಾವನೆ ರಾಜ್ಯ ಬಿಜೆಪಿ ನಾಯಕರಲ್ಲಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಸೂರ್ಯ ಅವರ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಲ್ಲಿ ಕೇಳಿದಾಗ, “ಇದಕ್ಕೆ ನನ್ನ ಯಾವುದೇ ಪ್ರತಿಕ್ರಿಯೆಗಳಿಲ್ಲ. ಸೂರ್ಯ ನಮ್ಮ ಪಕ್ಷದ ನಾಯಕ ಮತ್ತು ಅಂತಹ ಯಾವುದೇ ಸಮಸ್ಯೆ ಇದ್ದಾಗ, ನಾನು ನೇರವಾಗಿ ಅವರೊಂದಿಗೆ ಮಾತನಾಡುತ್ತೇನೆ, ಮಾಧ್ಯಮಗಳೊಂದಿಗೆ ಅಲ್ಲ” ಎಂದು ತಿಳಿಸಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿಕಟವರ್ತಿ ಎಂದೇ ಗುರುತಿಸಲಾಗಿರುವ ಸೂರ್ಯ ಅವರು ತಮ್ಮ ಕಾರ್ಯವೈಖರಿಯಿಂದ ಹಲವಾರು ರಾಜ್ಯ ನಾಯಕರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ರಾಜ್ಯ ನಾಯಕರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂಬಂತೆ ವರ್ತಿಸುತ್ತಾರೆ ಎಂದು ಕರ್ನಾಟಕ ಬಿಜೆಪಿ ನಾಯಕರೊಬ್ಬರು ಟೀಕಿಸಿದ್ದಾರೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....