Homeಚಳವಳಿಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ..

- Advertisement -
- Advertisement -

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು ಜನರು ಗೌರವಿಸುವ ಕಾರಣ್ಕಕ್ಕಾಗಿಯೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ, ಫ್ಯಾಸಿಸ್ಟ್ ಶಕ್ತಿಗಳು ಅಂತಹ ಕಲಾವಿದರಿಗೆ ನಿರ್ಬಂಧಗಳನ್ನು ಹೇರುವ ಮಾರ್ಗಗಳನ್ನು ಹುಡುಕುತ್ತಿರುತ್ತವೆ. ಹಾಸ್ಯ ಕಲಾವಿದರಾದ ಮನಾವರ್ ಫಾರೂಖಿ, ಕುನಾಲ್ ಕಾಮ್ರಾ ಅವರ ಕಾರ್ಯಕ್ರಮಗಳನ್ನು ರದ್ದು ಮಾಡುವುದರ ಹಿಂದೆ ಕಲಾವಿದನ ಮೇಲೆ ಪ್ರಭುತ್ವಕ್ಕಿರುವ ಭಯವನ್ನು ಕಾಣಬಹುದು. ಇಂತಹ ಸಂದರ್ಭಗಳಲ್ಲಿ ಬಹುಸಂಖ್ಯೆಯ ಜನರು ಕಲಾವಿದನ ಬೆನ್ನಿಗೆ ನಿಂತರೆ, ಆತನ ಪ್ರತಿರೋಧದ ನೆಲೆಗಳು ಮತ್ತಷ್ಟು ದಿಟ್ಟವಾಗಿ ಮೂಡಿಬರುತ್ತವೆ. ನಾಡಿನ ಪ್ರಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಸತ್ಯವಾಗಿದೆ.

ಹಂಸಲೇಖ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಮಾಂಸಾಹಾರದ ಕುರಿತು, ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಕುರಿತು ಆಡಿದ ಮಾತುಗಳು ವಿವಾದಕ್ಕೆ ಕಾರಣವಾದವು. “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವು ಮೇಲ್ಜಾತಿಗಳ ದೊಡ್ಡಸ್ತಿಕೆ ಪ್ರದರ್ಶನ ಆಗಬಾರದು” ಎಂಬುದು ಹಂಸಲೇಖ ಅವರ ಮಾತಿನ ಆಶಯವಾಗಿತ್ತು. “ದಲಿತರ ಮನೆಗೆ ಬಲಿತರು ಬರುವುದಲ್ಲ. ಬಲಿತರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಬೇಕು. ಅದು ನಿಜವಾದ ಸಮಾನತೆ” ಎಂದಿದ್ದ ಹಂಸಲೇಖರು ಪೇಜಾವರ ಶ್ರೀಗಳು ದಲಿತ ಕೇರಿಗಳಿಗೆ ಭೇಟಿ ನೀಡುತ್ತಿದ್ದನ್ನು ಉಲ್ಲೇಖಿಸಿದ್ದರು. ಈ ಕುರಿತು ಮಾತನಾಡುತ್ತಾ ಪ್ರಾಸಂಗಿಕವಾಗಿ, “ದಲಿತರು ಕೊಡುವ ಆಹಾರವನ್ನು ತಿನ್ನುತ್ತಾರಾ, ಕುರಿ ಕೋಳಿ ರಕ್ತವನ್ನು ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ?” ಎಂದು ಹೇಳಿಕೆ ನೀಡಿದರು. ಇದು ವಿವಾದಕ್ಕೆ ಕಾರಣವಾಯಿತು. ಸ್ವಾಮೀಜಿಯವರಿಗೆ ಅವಮಾನಿಸಲಾಗಿದೆ ಎಂದು ಬಿಂಬಿಸಲಾಯಿತು. ವಿವಾದ ಭುಗಿಲೆದ್ದ ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದರು. ಈ ನಡುವೆ ಮಾಂಸಾಹಾರದ ಕುರಿತು ಮಹಿಳೆಯೊಬ್ಬರು ತೋರಿದ ಅಸಹನೆ, ‘ಮಾಂಸಾಹಾರ-ಸಸ್ಯಾಹಾರ’ದ ಚರ್ಚೆಗೆ ನಾಂದಿಯಾಯಿತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರನ್ನು ಪೀಡಿಸುವ ಕೆಲಸ ಮುಂದುವರಿಯಿತು. “ಬೃಂದಾವನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದು, ಬ್ರಾಹ್ಮಣ್ಯದ, ಒಂದು ವರ್ಗದ ಸವರ್ಣೀಯರ ಅಹಂಕಾರದ ಪ್ರತಿರೂಪದಂತೆ ನಾಡಿನ ಜನತೆಗೆ ಭಾಸವಾಯಿತು. ದೊಡ್ಡ ಮಟ್ಟದಲ್ಲಿ ಜನರು ಹಂಸಲೇಖರ ಪರ ನಿಂತರು. ಈ ನಡುವೆ ಪ್ರಕರಣವೂ ದಾಖಲಾಗಿ, ಹಂಸಲೇಖರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹೇಳಿಕೆಯನ್ನು ನೀಡಿಬಂದರು. ನವೆಂಬರ್ 26ರ ಸಂವಿಧಾನ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಸೇರಿದ ಜನರು ಹಂಸಲೇಖರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದರು. ಬಸವನಗುಡಿ ಪೊಲೀಸರ ವರ್ತನೆಯನ್ನು ಖಂಡಿಸಿದರು.

ಪ್ರಕರಣ ಇಷ್ಟು ಚರ್ಚೆಯಾದ ನಂತರದಲ್ಲಿ ಹಂಸಲೇಖ ಅವರು ನೀಡಿರುತ್ತಿರುವ ಪ್ರತಿಮಾತ್ಮಕ ಪ್ರತಿಕ್ರಿಯೆಗಳು ಕೋಮು ವಿಷಮತೆ ಬಿತ್ತುವ ರಾಜಕಾರಣವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ಸುಳ್ಳಲ್ಲ. “ಸುಧಾರಣೆಯ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ ಅವರು ‘ಹಿಟ್ ರನ್ ಕೇಸ್’ ಆಗಲಿಲ್ಲ. ಸಂವಿಧಾನ ಆಶಯಗಳನ್ನು ಸ್ಮರಿಸಿದರು. “ಪೂಜ್ಯ ಕನ್ನಡಿಗರೇ, ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಪತ್ರ ಬರೆದರು. ಪ್ರೀತಿ ಆವೇಶಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ತನ್ನ ಬೆನ್ನ ಹಿಂದೆ ನಿಂತ ಬಹುದೊಡ್ಡ ಜನಸಮೂಹವನ್ನು ನೆನೆದರು. ಮುಂದುವರಿದ ಹಂಸಲೇಖರು, ಸಂವಿಧಾನ ಗೀತೆಯನ್ನು ಹಂಚಿಕೊಂಡರು.

“ನಾನು, ನೀನು, ನಮಗಾಗಿರೋದೇ ಕಾನೂನು,
ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”
ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು
ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ
ಬಹುತ್‌ ಭಾರತದ ಬೃಹತ್ ಸಂವಿಧಾನ
ಓ ಬಡವರ ಗೀತೆ, ಓ ಬಹುಜನ ಮಾತೆ
ಓ ಬಡವರ ಗೀತೆ, ಓ ಬಹುಜನ ಮಾತೆ
ಅಕ್ಷರ ರೂಪದ ಶಾಂತಿಯ ದನಿಯ
ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌
“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”
– ಎಂದು ಹಂಸಲೇಖರು ಬರೆದರು. ವಿವಾದದ ಬಳಿಕ ಸರಿಗಮಪ ಕಾರ್ಯಕ್ರಮಕ್ಕೆ ತೆರಳಿದ ಅವರು, ಶಾಂತಿ, ಸಹಬಾಳ್ವೆ, ಸಹೋದರತೆ, ಪ್ರೀತಿಯ ಸಂದೇಶಗಳನ್ನು ಸಾರಿದ ಬೌದ್ಧತ್ವವನ್ನು ತಮ್ಮ ವಸ್ತ್ರಾಲಂಕಾರದಲ್ಲಿ ಢಾಳಾಗಿ ತೋರಿಸಿಕೊಂಡರು.

ಲೇಖಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, “ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿ ಉಳಿಸೋಣ” ಎಂದು ಪುನರುಚ್ಚರಿಸಿದರು. ಹಂಸಲೇಖರ ಜೊತೆ ನಾಡಿನ ಜನರು ನಿಂತು, ಒಬ್ಬ ಕಲಾವಿದನ ನೋವಿಗೆ ಸ್ಪಂದಿಸಿದ್ದೇ ಇದಕ್ಕೆಲ್ಲ ಕಾರಣ.

ಹಂಸಲೇಖರು ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿಯ ಬಗ್ಗೆ ಮಾತನಾಡುತ್ತಾರೆ. ಬುದ್ಧ, ಬಸವ, ಭೀಮ ಅನುಯಾಯಿಗಳ ಜೊತೆಯಲ್ಲಿ, ಬುದ್ಧ ಮತ್ತು ಅಂಬೇಡ್ಕರ್‌ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರ ರಚನಾತ್ಮಕ ಸಾಂಸ್ಕೃತಿಕ ಪ್ರತಿರೋಧವು ಆಪ್ತವಾಗುತ್ತದೆ. ಹಿಂಸೆಯನ್ನು ಎಂದಿಗೂ ಪ್ರಚೋದಿಸದ ಅವರು ‘ನೆಲದ ಪದ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾವು ನೇಯುವ ಕೆಲಸ ಮಾಡೋಣ. ಹರಿಯುವುದು ಬೇಡ. ಮನಸ್ಸುಗಳನ್ನು, ಹೃದಯಗಳನ್ನು ಬೆಸೆಯೋಣ” ಎಂದು ನುಡಿದಿದ್ದಾರೆ. ರಾಷ್ಟ್ರಪಿತ ಗಾಂಧೀಜಿಯವರನ್ನು ‘ಹರಾಮಿ’ ಎನ್ನುವ, ಅಂತಹ ಹೇಳಿಕೆಗಳಿಗೆ ಶಿಳ್ಳೆ, ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುವ ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ ಎಂಬುದು ಮುಖ್ಯ. ಸಂವಿಧಾನ ವಿರೋಧಿ ಕೃತ್ಯಗಳನ್ನು ಪ್ರಭುತ್ವವೇ ಸಮರ್ಥಿಸುವ ಕಾಲಘಟ್ಟದಲ್ಲಿ ಈ ಮಾತುಗಳನ್ನು ಹಂಸಲೇಖ ಅವರು ಆಡುತ್ತಿದ್ದಾರೆಂಬುದು ಮುಖ್ಯ.

ಹಿಂಸೆಯನ್ನು ಅಹಿಂಸೆಯಿಂದಷ್ಟೇ ಮಣಿಸಬಹುದು ಎಂಬ ಬಹುದೊಡ್ಡ ಸಂದೇಶವನ್ನು ಸಾರಿದ ಗಾಂಧಿ ಮಾರ್ಗವನ್ನು ತುಳಿದು ರೈತರು ಗೆದ್ದಂತೆ, ‘ನೇಯುವ’ ಕೆಲಸದಿಂದ ಜನಮಾನಸವನ್ನು ಹಂಸಲೇಖರು ಗೆಲ್ಲುತ್ತಿದ್ದಾರೆ. ಸಾಂಸ್ಕೃತಿಕ ಪ್ರತಿರೋಧವನ್ನು ಸೃಜನಾತ್ಮಕವಾಗಿ ದಾಖಸುತ್ತಿದ್ದಾರೆ. ಹಂಸಲೇಖ ಅವರು ಒಂದು ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಕನ್ನಡ ಚಿತ್ರರಂಗದ ಸಂವೇದನಾಶೀಲ ಮನಸ್ಸುಗಳೂ ಚಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...