Homeಚಳವಳಿಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ..

- Advertisement -
- Advertisement -

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು ಜನರು ಗೌರವಿಸುವ ಕಾರಣ್ಕಕ್ಕಾಗಿಯೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ, ಫ್ಯಾಸಿಸ್ಟ್ ಶಕ್ತಿಗಳು ಅಂತಹ ಕಲಾವಿದರಿಗೆ ನಿರ್ಬಂಧಗಳನ್ನು ಹೇರುವ ಮಾರ್ಗಗಳನ್ನು ಹುಡುಕುತ್ತಿರುತ್ತವೆ. ಹಾಸ್ಯ ಕಲಾವಿದರಾದ ಮನಾವರ್ ಫಾರೂಖಿ, ಕುನಾಲ್ ಕಾಮ್ರಾ ಅವರ ಕಾರ್ಯಕ್ರಮಗಳನ್ನು ರದ್ದು ಮಾಡುವುದರ ಹಿಂದೆ ಕಲಾವಿದನ ಮೇಲೆ ಪ್ರಭುತ್ವಕ್ಕಿರುವ ಭಯವನ್ನು ಕಾಣಬಹುದು. ಇಂತಹ ಸಂದರ್ಭಗಳಲ್ಲಿ ಬಹುಸಂಖ್ಯೆಯ ಜನರು ಕಲಾವಿದನ ಬೆನ್ನಿಗೆ ನಿಂತರೆ, ಆತನ ಪ್ರತಿರೋಧದ ನೆಲೆಗಳು ಮತ್ತಷ್ಟು ದಿಟ್ಟವಾಗಿ ಮೂಡಿಬರುತ್ತವೆ. ನಾಡಿನ ಪ್ರಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಸತ್ಯವಾಗಿದೆ.

ಹಂಸಲೇಖ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಮಾಂಸಾಹಾರದ ಕುರಿತು, ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಕುರಿತು ಆಡಿದ ಮಾತುಗಳು ವಿವಾದಕ್ಕೆ ಕಾರಣವಾದವು. “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವು ಮೇಲ್ಜಾತಿಗಳ ದೊಡ್ಡಸ್ತಿಕೆ ಪ್ರದರ್ಶನ ಆಗಬಾರದು” ಎಂಬುದು ಹಂಸಲೇಖ ಅವರ ಮಾತಿನ ಆಶಯವಾಗಿತ್ತು. “ದಲಿತರ ಮನೆಗೆ ಬಲಿತರು ಬರುವುದಲ್ಲ. ಬಲಿತರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಬೇಕು. ಅದು ನಿಜವಾದ ಸಮಾನತೆ” ಎಂದಿದ್ದ ಹಂಸಲೇಖರು ಪೇಜಾವರ ಶ್ರೀಗಳು ದಲಿತ ಕೇರಿಗಳಿಗೆ ಭೇಟಿ ನೀಡುತ್ತಿದ್ದನ್ನು ಉಲ್ಲೇಖಿಸಿದ್ದರು. ಈ ಕುರಿತು ಮಾತನಾಡುತ್ತಾ ಪ್ರಾಸಂಗಿಕವಾಗಿ, “ದಲಿತರು ಕೊಡುವ ಆಹಾರವನ್ನು ತಿನ್ನುತ್ತಾರಾ, ಕುರಿ ಕೋಳಿ ರಕ್ತವನ್ನು ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ?” ಎಂದು ಹೇಳಿಕೆ ನೀಡಿದರು. ಇದು ವಿವಾದಕ್ಕೆ ಕಾರಣವಾಯಿತು. ಸ್ವಾಮೀಜಿಯವರಿಗೆ ಅವಮಾನಿಸಲಾಗಿದೆ ಎಂದು ಬಿಂಬಿಸಲಾಯಿತು. ವಿವಾದ ಭುಗಿಲೆದ್ದ ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದರು. ಈ ನಡುವೆ ಮಾಂಸಾಹಾರದ ಕುರಿತು ಮಹಿಳೆಯೊಬ್ಬರು ತೋರಿದ ಅಸಹನೆ, ‘ಮಾಂಸಾಹಾರ-ಸಸ್ಯಾಹಾರ’ದ ಚರ್ಚೆಗೆ ನಾಂದಿಯಾಯಿತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರನ್ನು ಪೀಡಿಸುವ ಕೆಲಸ ಮುಂದುವರಿಯಿತು. “ಬೃಂದಾವನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದು, ಬ್ರಾಹ್ಮಣ್ಯದ, ಒಂದು ವರ್ಗದ ಸವರ್ಣೀಯರ ಅಹಂಕಾರದ ಪ್ರತಿರೂಪದಂತೆ ನಾಡಿನ ಜನತೆಗೆ ಭಾಸವಾಯಿತು. ದೊಡ್ಡ ಮಟ್ಟದಲ್ಲಿ ಜನರು ಹಂಸಲೇಖರ ಪರ ನಿಂತರು. ಈ ನಡುವೆ ಪ್ರಕರಣವೂ ದಾಖಲಾಗಿ, ಹಂಸಲೇಖರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹೇಳಿಕೆಯನ್ನು ನೀಡಿಬಂದರು. ನವೆಂಬರ್ 26ರ ಸಂವಿಧಾನ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಸೇರಿದ ಜನರು ಹಂಸಲೇಖರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದರು. ಬಸವನಗುಡಿ ಪೊಲೀಸರ ವರ್ತನೆಯನ್ನು ಖಂಡಿಸಿದರು.

ಪ್ರಕರಣ ಇಷ್ಟು ಚರ್ಚೆಯಾದ ನಂತರದಲ್ಲಿ ಹಂಸಲೇಖ ಅವರು ನೀಡಿರುತ್ತಿರುವ ಪ್ರತಿಮಾತ್ಮಕ ಪ್ರತಿಕ್ರಿಯೆಗಳು ಕೋಮು ವಿಷಮತೆ ಬಿತ್ತುವ ರಾಜಕಾರಣವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ಸುಳ್ಳಲ್ಲ. “ಸುಧಾರಣೆಯ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ ಅವರು ‘ಹಿಟ್ ರನ್ ಕೇಸ್’ ಆಗಲಿಲ್ಲ. ಸಂವಿಧಾನ ಆಶಯಗಳನ್ನು ಸ್ಮರಿಸಿದರು. “ಪೂಜ್ಯ ಕನ್ನಡಿಗರೇ, ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಪತ್ರ ಬರೆದರು. ಪ್ರೀತಿ ಆವೇಶಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ತನ್ನ ಬೆನ್ನ ಹಿಂದೆ ನಿಂತ ಬಹುದೊಡ್ಡ ಜನಸಮೂಹವನ್ನು ನೆನೆದರು. ಮುಂದುವರಿದ ಹಂಸಲೇಖರು, ಸಂವಿಧಾನ ಗೀತೆಯನ್ನು ಹಂಚಿಕೊಂಡರು.

“ನಾನು, ನೀನು, ನಮಗಾಗಿರೋದೇ ಕಾನೂನು,
ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”
ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು
ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ
ಬಹುತ್‌ ಭಾರತದ ಬೃಹತ್ ಸಂವಿಧಾನ
ಓ ಬಡವರ ಗೀತೆ, ಓ ಬಹುಜನ ಮಾತೆ
ಓ ಬಡವರ ಗೀತೆ, ಓ ಬಹುಜನ ಮಾತೆ
ಅಕ್ಷರ ರೂಪದ ಶಾಂತಿಯ ದನಿಯ
ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌
“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”
– ಎಂದು ಹಂಸಲೇಖರು ಬರೆದರು. ವಿವಾದದ ಬಳಿಕ ಸರಿಗಮಪ ಕಾರ್ಯಕ್ರಮಕ್ಕೆ ತೆರಳಿದ ಅವರು, ಶಾಂತಿ, ಸಹಬಾಳ್ವೆ, ಸಹೋದರತೆ, ಪ್ರೀತಿಯ ಸಂದೇಶಗಳನ್ನು ಸಾರಿದ ಬೌದ್ಧತ್ವವನ್ನು ತಮ್ಮ ವಸ್ತ್ರಾಲಂಕಾರದಲ್ಲಿ ಢಾಳಾಗಿ ತೋರಿಸಿಕೊಂಡರು.

ಲೇಖಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, “ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿ ಉಳಿಸೋಣ” ಎಂದು ಪುನರುಚ್ಚರಿಸಿದರು. ಹಂಸಲೇಖರ ಜೊತೆ ನಾಡಿನ ಜನರು ನಿಂತು, ಒಬ್ಬ ಕಲಾವಿದನ ನೋವಿಗೆ ಸ್ಪಂದಿಸಿದ್ದೇ ಇದಕ್ಕೆಲ್ಲ ಕಾರಣ.

ಹಂಸಲೇಖರು ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿಯ ಬಗ್ಗೆ ಮಾತನಾಡುತ್ತಾರೆ. ಬುದ್ಧ, ಬಸವ, ಭೀಮ ಅನುಯಾಯಿಗಳ ಜೊತೆಯಲ್ಲಿ, ಬುದ್ಧ ಮತ್ತು ಅಂಬೇಡ್ಕರ್‌ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರ ರಚನಾತ್ಮಕ ಸಾಂಸ್ಕೃತಿಕ ಪ್ರತಿರೋಧವು ಆಪ್ತವಾಗುತ್ತದೆ. ಹಿಂಸೆಯನ್ನು ಎಂದಿಗೂ ಪ್ರಚೋದಿಸದ ಅವರು ‘ನೆಲದ ಪದ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾವು ನೇಯುವ ಕೆಲಸ ಮಾಡೋಣ. ಹರಿಯುವುದು ಬೇಡ. ಮನಸ್ಸುಗಳನ್ನು, ಹೃದಯಗಳನ್ನು ಬೆಸೆಯೋಣ” ಎಂದು ನುಡಿದಿದ್ದಾರೆ. ರಾಷ್ಟ್ರಪಿತ ಗಾಂಧೀಜಿಯವರನ್ನು ‘ಹರಾಮಿ’ ಎನ್ನುವ, ಅಂತಹ ಹೇಳಿಕೆಗಳಿಗೆ ಶಿಳ್ಳೆ, ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುವ ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ ಎಂಬುದು ಮುಖ್ಯ. ಸಂವಿಧಾನ ವಿರೋಧಿ ಕೃತ್ಯಗಳನ್ನು ಪ್ರಭುತ್ವವೇ ಸಮರ್ಥಿಸುವ ಕಾಲಘಟ್ಟದಲ್ಲಿ ಈ ಮಾತುಗಳನ್ನು ಹಂಸಲೇಖ ಅವರು ಆಡುತ್ತಿದ್ದಾರೆಂಬುದು ಮುಖ್ಯ.

ಹಿಂಸೆಯನ್ನು ಅಹಿಂಸೆಯಿಂದಷ್ಟೇ ಮಣಿಸಬಹುದು ಎಂಬ ಬಹುದೊಡ್ಡ ಸಂದೇಶವನ್ನು ಸಾರಿದ ಗಾಂಧಿ ಮಾರ್ಗವನ್ನು ತುಳಿದು ರೈತರು ಗೆದ್ದಂತೆ, ‘ನೇಯುವ’ ಕೆಲಸದಿಂದ ಜನಮಾನಸವನ್ನು ಹಂಸಲೇಖರು ಗೆಲ್ಲುತ್ತಿದ್ದಾರೆ. ಸಾಂಸ್ಕೃತಿಕ ಪ್ರತಿರೋಧವನ್ನು ಸೃಜನಾತ್ಮಕವಾಗಿ ದಾಖಸುತ್ತಿದ್ದಾರೆ. ಹಂಸಲೇಖ ಅವರು ಒಂದು ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಕನ್ನಡ ಚಿತ್ರರಂಗದ ಸಂವೇದನಾಶೀಲ ಮನಸ್ಸುಗಳೂ ಚಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...