Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಮುಖಭಂಗ ಎದುರಿಸಿದ್ದು, ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

- Advertisement -
- Advertisement -

ರಾಜ್ಯದ 5 ನಗರಸಭೆ ಸಭೆಗಳು ಸೇರಿದಂತೆ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಗುರುವಾರ) ಪ್ರಕಟವಾಗಿದೆ. ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. 

ರಾಜ್ಯದ ಒಟ್ಟು 19 ಪುರಸಭೆಗಳ ಪೈಕಿ ಕಾಂಗ್ರೆಸ್- 8, ಬಿಜೆಪಿ- 6, ಜೆಡಿಎಸ್- 1 ಪುರಸಭೆಗಳ ಅಧಿಕಾರ ಗಿಟ್ಟಿಸಿಕೊಂಡಿವೆ. ಇನ್ನು 4 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಒಟ್ಟು 34 ಪಟ್ಟಣ ಪಂಚಾಯತ್‌ಗಳ ಪೈಕಿ ಕಾಂಗ್ರೆಸ್- 13, ಬಿಜೆಪಿ- 5, ಇತರರು- 5 ಪುರಸಭೆಗಳಲ್ಲಿ ಅಧಿಕಾರ ಹಿಡಿದ್ದಾರೆ. ಉಳಿದ 10 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಎದುರಾಗಿದೆ.

ಇನ್ನು 5 ನಗರಸಭೆಗಳ ಪೈಕಿ ಬಿಜೆಪಿ- 3 (ಚಿಕ್ಕಮಗಳೂರು, ಹೆಬ್ಬಗೋಡಿ, ಗದಗ-ಬೆಟಗೇರಿ) ನಗರ ಸಭೆಗಳಲ್ಲಿ ಅಧಿಕಾರ ಪಡೆದಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾವುದೇ ನಗರಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ.  2 ನಗರಸಭೆ (ಶಿರಾ, ಹೊಸಪೇಟೆ)ಗಳಲ್ಲಿ ಅತಂತ್ರ ಪರಿಸ್ಥಿತಿ ಇದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಮುಖಭಂಗ ಎದುರಿಸಿದ್ದು, ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

ಬಂಕಾಪುರ ಪುರಸಭೆಯಲ್ಲಿರುವ ಒಟ್ಟು 23 ಸ್ಥಾನಗಳ ಪೈಕಿ ಕಾಂಗ್ರೆಸ್- 14, ಬಿಜೆಪಿ- 7, ಪಕ್ಷೇತರರು- 2 ಸ್ಥಾನ ಗೆದ್ದಿದ್ದಾರೆ. ಇನ್ನು, ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿರುವ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್‌- 11, ಬಿಜೆಪಿ- 6, ಪಕ್ಷೇತರರು- 1 ಸ್ಥಾನಗಳಲ್ಲಿ ಗೆಲುವುಸಾಧಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿನ ಕಣವಾಗಿದ್ದ ಬಿಡದಿ ಪುರಸಭೆಯಲ್ಲಿ ಜೆಡಿಎಸ್‌ ಅಧಿಕಾರ ಪಡೆದುಕೊಂಡಿದೆ. ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದೆ. 

ಬಿಡದಿ ಪುರಸಭೆಯ ಒಟ್ಟು 23 ವಾರ್ಡುಗಳ ಪೈಕಿ ಜೆಡಿಎಸ್ 14 ವಾರ್ಡುಗಳಲ್ಲಿ, ಕಾಂಗ್ರೆಸ್ 9 ವಾರ್ಡುಗಳಲ್ಲಿ ಗೆದ್ದಿವೆ. ಬಿಜೆಪಿ 12 ವಾರ್ಡ್‌ಗಳಲ್ಲಿ ಸ್ಪರ್ಧಿಸಿತ್ತು, 12 ವಾರ್ಡುಗಳಲ್ಲಿಯೂ ಠೇವಣಿ ಕಳೆದುಕೊಂಡಿದೆ.


ಇದನ್ನೂ ಓದಿ: ಜೈಲುಗಳಲ್ಲೂ ಜಾತಿಭೇದ ಮೆರೆದಿರುವ ಮನುವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...