Homeಕರ್ನಾಟಕಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

ಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

- Advertisement -
- Advertisement -

ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಶಿರಸಿಯ ಅನಂತ ಹೆಗಡೆ ಆಶೀಸರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸೆಂಬರ್ 2021ರ ಅಂತ್ಯಕ್ಕೆ ಅಧಿಕಾರ ಅವಧಿಯ ಎರಡು ವರ್ಷ ಮುಕ್ತಾಯ ಆಗುತ್ತಿರುವುದರಿಂದ ಪದತ್ಯಾಗ ಮಾಡುತ್ತಿರವುದಾಗಿ ಡಿ.28ರಂದು ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅನಂತ ಹೆಗಡೆ ಆಶೀಸರ ಮಂಡಳಿಯ ಅಧ್ಯಕ್ಷರಾದಾಗಿನಿಂದ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಲೆ ಇತ್ತು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಲ್ಲದ ಆಶೀಸರ ಆರ್‌ಎಸ್‌ಎಸ್ ಶಿಫಾರಸಿನಿಂದ ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಒಂದಲ್ಲ ಒಂದು ನಿಗಮ-ಮಂಡಳಿ ಅಧಿಕಾರ ಪಡೆಯುತ್ತಾರೆಂದು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರ ಆಕ್ರೋಶವಾಗಿತ್ತು. ಅದರಲ್ಲೂ ಜಿಲ್ಲೆಯ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣ ಸಮುದಾಯದವರೆ ಹೆಚ್ಚು ಅಧಿಕಾರ ಸ್ಥಾನ-ಮಾನ ಅನುಭವಿಸುತ್ತಿದ್ದಾರೆಂಬ ಭಾವನೆ ಹಿಂದುಳಿದವರಲ್ಲಿತ್ತು.

ಕಳೆದ ವಿಧಾನ ಪರಿಷತ್ ಚುನಾವಣೆ ಹೊತ್ತಲ್ಲಿ ಈ ಬೇಸರ ಭುಗಿಲೆದ್ದಿತ್ತು. ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು 2-3 ಹಳೆಯ ಕಾರ್ಯಕರ್ತರು ಸಿದ್ದವಾಗಿದ್ದರು. ಆಗ ಅವರಲ್ಲಿ ಕೆಲವರಿಗೆ ನಿಗಮ-ಮಂಡಳಿ ಅಧ್ಯಕ್ಷತೆ ಕೊಡುವ ಭರವಸೆ ಕೊಟ್ಟು ಸಮಾಧಾನ ಮಾಡಲಾಗಿತ್ತೆನ್ನಲಾಗಿದೆ. ಆಗಲೆ ಆಶೀಸರ ರಾಜಿನಾಮೆ ಪಡೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿರುವ ಸುದ್ದಿ ಹಬ್ಬಿತ್ತು.

ಆಶೀಸರ ರಾಜಿನಾಮೆ ಘೋಷಿಸುತ್ತಿದ್ದಂತೆಯೆ ಜಿಲ್ಲಾ ಬಿಜೆಪಿಯಲ್ಲಿ ನಿಗಮ-ಮಂಡಳಿ ಸ್ಥಾನಕ್ಕಾಗಿ ತುರುಸಿನ ಪೈಪೋಟಿ ಶುರುವಾಗಿದ್ದು, ಘಟ್ಟದ ಮೇಲಿನ-ಘಟ್ಟದ ಕೆಳಗಿನ [ಕರಾವಳಿ], ಬ್ರಾಹ್ಮಣ-ಶೂದ್ರ ಲೆಕ್ಕಾಚಾರ ನಡೆಯಲಾರಂಭಿಸಿದೆ. ಸಂಸದ ಅನಂತಕುಮಾರ್ ಹೆಗಡೆ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣರು. ಲಿಂಗಾಯತ ಸಮುದಾಯದ ವಿ.ಎಸ್.ಪಾಟೀಲ್ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಧನರಾದ ಶಿರಸಿಯ ಎಂ.ಎ.ಹೆಗಡೆ ಯಕ್ಷಗಾನ ಮಂಡಳಿ ಅಧ್ಯಕ್ಷರಾಗಿದ್ದರು.

ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸುತ್ತ ಬಂದಿರುವ ಜಿಲ್ಲೆಯ ದೊಡ್ಡ ಸಮುದಾಯವಾದ ದೀವರು [ಈಡಿಗರು] ಕಾರ್ಯಕರ್ತರಲ್ಲಿ ತಮ್ಮನ್ನು ಬರಿ ಚುನಾವಣೆಯಲ್ಲಿ ಪೋಸ್ಟರ್ ಅಂಟಿಸುವ ಚಾಕರಿಗಷ್ಟೆ ಬಳಸಲಾಗುತ್ತಿದೆಯೆಂಬ ಬೇರಸ ಮೂಡಿದೆ. ಈ ಜಾತಿಗೆ ಸೇರಿದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ್, ಭಟ್ಕಳದ ಗೋವಿಂದ ನಾಯ್ಕ್, ನಾಡವ ಸಮುದಾಯದ ನಾಗರಾಜ್ ನಾಯಕ ತೊರ್ಕೆ, ಅಂಕೋಲಾದ ವಕೀಲ ನಾಗರಾಜ್ ನಾಯಕ್, ಭಾಸ್ಕರ್ ನಾರ್ವೇಕರ್ ಎಮ್ಮೆಲ್ಸಿ ಟಿಕೆಟ್‌ಗೆ ಹಠ ಹಿಡಿದಿದ್ದರು. ಅವರೆಲ್ಲರನ್ನು ಸಮಾಧಾನ ಪಡಿಸಿ ಗಣಪತಿ ಉಳ್ವೇಕರ್ ಅವರನ್ನು ಕಣಕ್ಕಿಳಿಸಲಾಗಿತ್ತು.

ಆಗ ಸಂಧಾನಕಾರರ ಮಾತು ನಂಬಿ ಹಿಂದೆ ಸರಿದವರೆಲ್ಲ ಈಗ ನಿಗಮ-ಮಂಡಳಿ ಆವಕಾಶ ಬೇಡುತ್ತಿದ್ದಾರೆ. ಘಟ್ಟದ ಮೇಲಿನ ಹಲವರಿಗೆ, ಅದರಲ್ಲೂ ಹವ್ಯಕ ಬ್ರಾಹ್ಮಣ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಈ ಬಾರಿ ಘಟ್ಟದ ಕೆಳಗಿನ ದೀವರಿಗೆ ಅವಕಾಶ ಸಿಗಲಿದೆಯೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದಾಪುರದ ಕೆ.ಜಿ.ನಾಯ್ಕ್ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಾರೆ.


ಇದನ್ನೂ ಓದಿ: ಕೃಷಿಕಥನ 03: ರೈತರದು ಆತ್ಮಹತ್ಯೆಯಲ್ಲ, ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...