Homeಚಳವಳಿ12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

- Advertisement -
- Advertisement -

ಅತ್ಯಧಿಕವಾಗಿ ನವೀಕೃತಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ (Mercedes-Maybach S 650 Guard) ಕಾರನ್ನು ಪ್ರಧಾನಿ ನರೇಂದ್ರ ಮೋದಿ ಈಗ ಬಳಸುತ್ತಿದ್ದಾರೆ. ಇದು ರೇಂಜ್ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ಗಿಂತ ಉತ್ತಮವಾಗಿ ನವೀಕರಣಗೊಂಡಿದೆ.

ಈ ಕಾರಿನ ಬೆಲೆ 12 ಕೋಟಿ ರೂಪಾಯಿಯಾಗಿದ್ದು, ವಿಪಕ್ಷಗಳು ಸೇರಿದಂತೆ ನೆಟ್ಟಿಗರು ಕೊರೊನಾ ಲಾಕ್‌ಡೌನ್‌‌ನಿಂದ ಜನ ಪರದಾಡಿ, ಈಗಲೂ ಜೀವನ ಕಟಟಿಕೊಳ್ಳು ಒದ್ದಾಡುತ್ತಿದ್ದಾರೆ. ಹೊಸ ಸೋಂಕು ದೇಶವನ್ನು ಆವರಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿಯವರು ಇಷ್ಟು ದುಂದುವೆಚ್ಚ ಮಾಡಬಹುದೇ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ, ವೊಕಲ್ ಸೇ ಲೋಕಲ್ ಎಂಬ ಘೋಷಣೆಗಳು ಜನಸಾಮಾನ್ಯರಿಗೆ ಮಾತ್ರವೇ…? ದೇಶದ ಪ್ರಧಾನಿಗೆ ಅವುಗಳು ಅನ್ವಯವಾಗುವುದಿಲ್ಲವೇ ಎಂದು ನೆಟ್ಟಿಗರು ಟೀಕಿಸಿದ್ದು, #BrandedFakeer ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

“ಅರ್ಧಕ್ಕಿಂತ ಹೆಚ್ಚು ಜನರು ದಿನಕ್ಕೆ 2 ಯೋಗ್ಯವಾದ ಊಟವನ್ನು ಮಾಡಲು ಸಾಧ್ಯವಾಗದ ರಾಷ್ಟ್ರದಲ್ಲಿ ಮತ್ತು ಕಡಿಮೆಯಾಗುತ್ತಿರುವ ಉದ್ಯೋಗಗಳು, ಗಗನಕ್ಕೇರುತ್ತಿರುವ ಇಂಧನ, ಎಲ್‌ಪಿಜಿ ಮತ್ತು ಆಹಾರ ಪದಾರ್ಥಗಳ ಬೆಲೆಯಿಂದ ಬಹುಪಾಲು ಜನರು ಜೀವನವನ್ನು ನಡೆಸಲು ಸಾಧ್ಯವಾಗದ ರಾಷ್ಟ್ರದಲ್ಲಿ #BrandedFakeer ತನ್ನ ವೈಯಕ್ತಿಕ ಐಷಾರಾಮಿ ಜೀವನಕ್ಕಾಗಿ ಕೋಟಿಗಳನ್ನು ಚೆಲ್ಲುತ್ತಿದ್ದಾರೆ” ಎಂದು ಶ್ರೀ ಎನ್ನುವವರು ಕಿಡಿ ಕಾರಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರು ಹೊಚ್ಚ ಹೊಸ ಮರ್ಸಿಡಿಸ್ ಪಡೆದಿದ್ದಾರೆ. ಇದು ಭಾರತದಲ್ಲಿನ ಅತ್ಯಂತ ದುಬಾರಿ ವಾಹನವಾಗಿದೆ. ಸರ್ಕಾರ ಈ ಕಾರನ್ನು ಕೇವಲ 12 ಕೋಟಿ ರೂಪಾಯಿಗೆ ಖರೀದಿಸಿದೆ. ಇತ್ತ, ಒಬ್ಬ ಸಾಮಾನ್ಯ ವ್ಯಕ್ತಿ ಇನ್ನೂ ಒಂದು ಲೀಟರ್ ಪೆಟ್ರೋಲ್, ಕೆಜಿ ಟೊಮೆಟೊ, ಈರುಳ್ಳಿ ಬ್ರೆಡ್, ಬೆಣ್ಣೆ, ಎಣ್ಣೆ ಮತ್ತು 1 ಎಲ್ಪಿಜಿ ಸಿಲಿಂಡರ್ ಖರೀದಿಸಲು ಹೆಣಗಾಡುತ್ತಿದ್ದಾರೆ” ಎಂದು ಪವನ್ ನಾಯ್ಕ್ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನೆಟ್ಟಿಗರು, ಮೋದಿ ವಿಶ್ವದ ಅತ್ಯಂತ ಶ್ರೀಮಂತ ಫಕೀರ!! ಸಾಮಾನ್ಯ ಜನರು ಇನ್ನೂ ಲೀಟರ್ ಪೆಟ್ರೋಲ್, ಕೆಜಿ ಟೊಮೆಟೊ, ಈರುಳ್ಳಿ, ಬ್ರೆಡ್, ಬೆಣ್ಣೆ, ಎಣ್ಣೆ ಮತ್ತು 1 ಎಲ್ಪಿಜಿ ಸಿಲಿಂಡರ್ ಖರೀದಿಸಲು ಹೆಣಗಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ಮತ್ತೊಬ್ಬ ನೆಟ್ಟಿಗರು, “ಮರ್ಸಿಡೆಸ್ ಅನ್ನು ಹೊಂದಿರುವ ಸನ್ಯಾಸಿ, ಎಲ್ಲಾ ಫಕೀರರಿಗೆ ಉತ್ತಮ ಸ್ಫೂರ್ತಿ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...