Homeಚಳವಳಿ12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

- Advertisement -
- Advertisement -

ಅತ್ಯಧಿಕವಾಗಿ ನವೀಕೃತಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ (Mercedes-Maybach S 650 Guard) ಕಾರನ್ನು ಪ್ರಧಾನಿ ನರೇಂದ್ರ ಮೋದಿ ಈಗ ಬಳಸುತ್ತಿದ್ದಾರೆ. ಇದು ರೇಂಜ್ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ಗಿಂತ ಉತ್ತಮವಾಗಿ ನವೀಕರಣಗೊಂಡಿದೆ.

ಈ ಕಾರಿನ ಬೆಲೆ 12 ಕೋಟಿ ರೂಪಾಯಿಯಾಗಿದ್ದು, ವಿಪಕ್ಷಗಳು ಸೇರಿದಂತೆ ನೆಟ್ಟಿಗರು ಕೊರೊನಾ ಲಾಕ್‌ಡೌನ್‌‌ನಿಂದ ಜನ ಪರದಾಡಿ, ಈಗಲೂ ಜೀವನ ಕಟಟಿಕೊಳ್ಳು ಒದ್ದಾಡುತ್ತಿದ್ದಾರೆ. ಹೊಸ ಸೋಂಕು ದೇಶವನ್ನು ಆವರಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿಯವರು ಇಷ್ಟು ದುಂದುವೆಚ್ಚ ಮಾಡಬಹುದೇ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ, ವೊಕಲ್ ಸೇ ಲೋಕಲ್ ಎಂಬ ಘೋಷಣೆಗಳು ಜನಸಾಮಾನ್ಯರಿಗೆ ಮಾತ್ರವೇ…? ದೇಶದ ಪ್ರಧಾನಿಗೆ ಅವುಗಳು ಅನ್ವಯವಾಗುವುದಿಲ್ಲವೇ ಎಂದು ನೆಟ್ಟಿಗರು ಟೀಕಿಸಿದ್ದು, #BrandedFakeer ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

“ಅರ್ಧಕ್ಕಿಂತ ಹೆಚ್ಚು ಜನರು ದಿನಕ್ಕೆ 2 ಯೋಗ್ಯವಾದ ಊಟವನ್ನು ಮಾಡಲು ಸಾಧ್ಯವಾಗದ ರಾಷ್ಟ್ರದಲ್ಲಿ ಮತ್ತು ಕಡಿಮೆಯಾಗುತ್ತಿರುವ ಉದ್ಯೋಗಗಳು, ಗಗನಕ್ಕೇರುತ್ತಿರುವ ಇಂಧನ, ಎಲ್‌ಪಿಜಿ ಮತ್ತು ಆಹಾರ ಪದಾರ್ಥಗಳ ಬೆಲೆಯಿಂದ ಬಹುಪಾಲು ಜನರು ಜೀವನವನ್ನು ನಡೆಸಲು ಸಾಧ್ಯವಾಗದ ರಾಷ್ಟ್ರದಲ್ಲಿ #BrandedFakeer ತನ್ನ ವೈಯಕ್ತಿಕ ಐಷಾರಾಮಿ ಜೀವನಕ್ಕಾಗಿ ಕೋಟಿಗಳನ್ನು ಚೆಲ್ಲುತ್ತಿದ್ದಾರೆ” ಎಂದು ಶ್ರೀ ಎನ್ನುವವರು ಕಿಡಿ ಕಾರಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರು ಹೊಚ್ಚ ಹೊಸ ಮರ್ಸಿಡಿಸ್ ಪಡೆದಿದ್ದಾರೆ. ಇದು ಭಾರತದಲ್ಲಿನ ಅತ್ಯಂತ ದುಬಾರಿ ವಾಹನವಾಗಿದೆ. ಸರ್ಕಾರ ಈ ಕಾರನ್ನು ಕೇವಲ 12 ಕೋಟಿ ರೂಪಾಯಿಗೆ ಖರೀದಿಸಿದೆ. ಇತ್ತ, ಒಬ್ಬ ಸಾಮಾನ್ಯ ವ್ಯಕ್ತಿ ಇನ್ನೂ ಒಂದು ಲೀಟರ್ ಪೆಟ್ರೋಲ್, ಕೆಜಿ ಟೊಮೆಟೊ, ಈರುಳ್ಳಿ ಬ್ರೆಡ್, ಬೆಣ್ಣೆ, ಎಣ್ಣೆ ಮತ್ತು 1 ಎಲ್ಪಿಜಿ ಸಿಲಿಂಡರ್ ಖರೀದಿಸಲು ಹೆಣಗಾಡುತ್ತಿದ್ದಾರೆ” ಎಂದು ಪವನ್ ನಾಯ್ಕ್ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನೆಟ್ಟಿಗರು, ಮೋದಿ ವಿಶ್ವದ ಅತ್ಯಂತ ಶ್ರೀಮಂತ ಫಕೀರ!! ಸಾಮಾನ್ಯ ಜನರು ಇನ್ನೂ ಲೀಟರ್ ಪೆಟ್ರೋಲ್, ಕೆಜಿ ಟೊಮೆಟೊ, ಈರುಳ್ಳಿ, ಬ್ರೆಡ್, ಬೆಣ್ಣೆ, ಎಣ್ಣೆ ಮತ್ತು 1 ಎಲ್ಪಿಜಿ ಸಿಲಿಂಡರ್ ಖರೀದಿಸಲು ಹೆಣಗಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ಮತ್ತೊಬ್ಬ ನೆಟ್ಟಿಗರು, “ಮರ್ಸಿಡೆಸ್ ಅನ್ನು ಹೊಂದಿರುವ ಸನ್ಯಾಸಿ, ಎಲ್ಲಾ ಫಕೀರರಿಗೆ ಉತ್ತಮ ಸ್ಫೂರ್ತಿ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...