Homeಪುಸ್ತಕ ವಿಮರ್ಶೆದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

- Advertisement -
- Advertisement -

ಹೊಸ ತಲೆಮಾರು ತನ್ನದೇ ರೀತಿಯಲ್ಲಿ ಸೃಜನಶೀಲ ಬರವಣಿಗೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷವೆಂದರೆ ಸಮಕಾಲೀನ ಸಾಮಾಜಿಕ ಬಿಕ್ಕಟ್ಟುಗಳೇ ಕೃತಿಗಳ ವಸ್ತುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೀಮೆಯವರಾದ ಸುಶಾಂತ್ ಕೋಟ್ಯಾನ್ ಅವರ ’ದೀಪವಿರದ ದಾರಿಯಲ್ಲಿ’ ಕಾದಂಬರಿಯು ಪುರುಷ ಸಲಿಂಗರತಿಯನ್ನು ಪ್ರಧಾನ ಭೂಮಿಕೆಯನ್ನಾಗಿ ರೂಪಿಸಿಕೊಂಡಿದೆ.

ಈ ಕಾದಂಬರಿಯು ಯಕ್ಷಗಾನದ ಸ್ತ್ರೀವೇಷಧಾರಿಗಳಾದ ಸುಕೇಶ, ರಘುಪತಿ ಹಾಗೂ ಸಂಜೀವ-ಇವರ ಲೈಂಗಿಕ ಜೀವನದ ಕತೆಯನ್ನು ನವಿರಾದ ಭಾಷಿಕ ಧಾಟಿಯಲ್ಲಿ ನಿರೂಪಿಸುತ್ತದೆ. ಇದರೊಳಗೆ ಇನ್ನೂ ಹಲವರ ಕತೆಗಳು ಕೂಡ ಸೇರಿಕೊಳ್ಳುತ್ತವೆ. ಕಾದಂಬರಿಯ ತುಂಬ ಆವರಿಸಿಕೊಂಡಿರುವ ಸುಕೇಶನೇ ಇದರ ಕಥಾ ನಾಯಕ; ಈತ ತನ್ನೊಳಗಿನ ಹೆಣ್ಣು ಜೀವವನ್ನು ಪೋಷಿಸಿಕೊಳ್ಳುತ್ತಾನೆ; ಗಂಡು ದೇಹದೊಳಗಿರುವ ಹೆಣ್ಣನ್ನು ಪ್ರೀತಿಸುವ ಗಂಡಿಗಾಗಿ ಹಂಬಲಿಸುತ್ತಾನೆ. ಈ ನಿಟ್ಟಿನಲ್ಲಿ ಸುಕೇಶನಲ್ಲಿ ಅಂತಸ್ಥವಾಗಿರುವ ಹೆಣ್ಣಿನ ಆಸೆ, ಆಕಾಂಕ್ಷೆ, ಆಯ್ಕೆ ಹಾಗೂ ನಿರಾಕರಣೆಗಳೇ ಈ ಕಾದಂಬರಿಯ ಕಥನವನ್ನು ಮುನ್ನಡೆಸಿಕೊಂಡು ಹೋಗುತ್ತವೆ. ಕಾದಂಬರಿಯು ಇವುಗಳ ಪರಿಣಾಮಗಳನ್ನು ಒಂದು ಸೂತ್ರಬದ್ಧ ಚೌಕಟ್ಟಿನಲ್ಲಿ ಆಪ್ತವಾದ ಶೈಲಿಯಲ್ಲಿ ಓದುಗರಿಗೆ ದಾಟಿಸುವುದರಲ್ಲಿ ಸಫಲವಾಗಿದೆ.

ಕೆಲವು ವರ್ಷಗಳ ಹಿಂದೆಯಷ್ಟೇ ಸರ್ವೋಚ್ಚ ನ್ಯಾಯಾಲಯವು ಸಲಿಂಗಪ್ರೇಮ ಅಪರಾಧ ಅಲ್ಲ ಎಂದು ತೀರ್ಪು ನೀಡಿತು. ಅದರೂ ಇದಕ್ಕೆ ಸಾಮಾಜಿಕ ಮಾನ್ಯತೆಯಾಗಲಿ, ಒಪ್ಪಿಗೆಯಾಗಲಿ ವ್ಯಾಪಕವಾಗಿಲ್ಲ. ನಮ್ಮದು ಅತಿ ಮಡಿವಂತಿಕೆಯ ಸಮಾಜವಾಗಿ ಇನ್ನೂ ಮುಂದುವರೆದಿದೆ. ಆದರೆ ಪುರುಷನಿಗೆ ವಿವಾಹೇತರ ಲೈಂಗಿಕ ಸಂಬಂಧವು ಸಂಭ್ರಮಿಸುವ ಪ್ರತಿಷ್ಠೆಯಾಗಿರುತ್ತದೆ. ಇದೇ ಸಂಗತಿಯು ಹೆಣ್ಣಿಗೆ ಅವಮಾನ, ನಿಂದನೆ, ಅಪಹಾಸ್ಯ ಮತ್ತು ನಿಷೇಧಗಳನ್ನು ತಂದೊಡ್ಡುತ್ತವೆ. ಈ ಹಿನ್ನೆಲೆಯಲ್ಲಿ ಕಾದಂಬರಿಯ ಪಾತ್ರಗಳಾದ ರವೀಂದ್ರ, ಆಕಾಶ್ ಹಾಗೂ ಅನೇಕ ಪುರುಷರು ನೈತಿಕತೆಯಿಲ್ಲದೆ ಲಜ್ಜಾಹೀನರಾಗಿ ನಡೆದುಕೊಳ್ಳುತ್ತಾರೆ. ರಘುಪತಿಯ ಹೆಂಡತಿ ಪರಪುರುಷನೊಂದಿಗೆ ಹೋಗುವುದನ್ನು ಕಾದಂಬರಿಯು ಓಡಿಹೋದವಳೆಂದು ಜರೆಯುತ್ತದೆ. ಇಂತಹ ಲಿಂಗತ್ವ ಆಧಾರಿತ ತಾರತಮ್ಯದ ಬಗ್ಗೆ ಕಾದಂಬರಿಯ ನಿರೂಪಕ ತಟಸ್ಥನಾಗಿದ್ದಾನೆ.

ಸುಶಾಂತ್ ಕೋಟ್ಯಾನ್

ಜೈವಿಕವಾಗಿ ಗಂಡಾಗಿರುವ ಎಷ್ಟೋ ಜನ ಹೆಣ್ಣಾಗಲು ಇಚ್ಛಿಸುವುದನ್ನು ಅಸಹಜವಾಗಿ ಕಾಣುವ ಭಾವ ಇಲ್ಲಿ ಬಹುತೇಕರಿಗೆ ನೆಲೆಯೂರಿದೆ. ಸಾಮಾಜಿಕವಾಗಿಯೂ ಇದು ಅಸ್ವಾಭಾವಿಕ ಮತ್ತು ಅನೈಸರ್ಗಿಕವೆಂಬ ನಂಬಿಕೆ ಇಲ್ಲಿ ದೊಡ್ಡದಾಗಿ ಬೆಳೆದಿದೆ. ಕಾದಂಬರಿಯು ಮೇಲ್ನೋಟಕ್ಕೆ ಇಂತಹ ಮನಸ್ಥಿತಿಯನ್ನು ಪ್ರಶ್ನಿಸುತ್ತಿರುವಂತೆ ತೋರುತ್ತದೆ. ಗಂಡಸರ ಲೈಂಗಿಕ ವಿಕೃತಿಗಳನ್ನು ತೆರೆದು ತೋರಿಸುತ್ತದೆ. ಅವರಿಗೆ ಸಾಮಾಜಿಕವಾಗಿ ದೊರಕಿರುವ ಇಂತಹ ಸ್ವಾತಂತ್ರ್ಯದ ಬಗ್ಗೆ ದೂಷಿಸುತ್ತದೆ. ಸುದರ್ಶನ, ಸುಕೇಶನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಪೀಡಿಸುವುದನ್ನು ಹಾಗೂ ರವೀಂದ್ರ ತನ್ನ ಹೆಂಡತಿ ತವರಿಗೆ ಹೋದಾಗ ಪುನಃ ಸುಕೇಶನಿಗೆ ಗಂಟು ಬೀಳುವ ಸನ್ನಿವೇಶಗಳನ್ನು ಈ ನೆಲೆಯಿಂದ ಗಮನಿಸಬಹುದು. ಆದರೆ ಲೈಂಗಿಕವಾಗಿ ಸ್ವೇಚ್ಛಾಚಾರವನ್ನು ಅನುಭವಿಸುವ ಗಂಡಿನ ಬಗ್ಗೆ ಕಾದಂಬರಿ ಖಚಿತ ನಿಲುವುಗಳನ್ನು ವ್ಯಕ್ತಪಡಿಸುವುದಿಲ್ಲ. ಅದು ವ್ಯಕ್ತಿಗತ ನೆಲೆಗಷ್ಟೇ ಸೀಮಿತವಾಗುತ್ತದೆ.

ಯಾವ ಅಂಶಗಳು ಈ ಕಾದಂಬರಿಯ ಶಕ್ತಿಯಾಗಿದೆಯೋ ಅವುಗಳೇ ಅದರ ದುರ್ಬಲ ಸಂಗತಿಯಾಗಿದೆ. ಕಾದಂಬರಿಯ ಕೇಂದ್ರ ಭಿತ್ತಿಯಲ್ಲಿರುವ ಸುಕೇಶನ ಪಾತ್ರವು ಗಟ್ಟಿಯಾಗಿ ಮೂಡಿಬರಲಿಲ್ಲ. ಇದಕ್ಕೆ ಕಾರಣವೆಂದರೆ ಈತ ತನ್ನ ಪ್ರತಿಯೊಂದು ಸಮಸ್ಯೆಗಳಿಗೂ ಬೇರೆಯವರಲ್ಲಿ ಸಾಂತ್ವನ ಪಡೆಯಲು ಬಯಸುತ್ತಾನೆ. ಕಾದಂಬರಿಯು ಹಲವು ಕಡೆಯಲ್ಲಿ ಸುಕೇಶನನ್ನು ’ಗಂಡು ದೇಹದೊಳಗಿನ ಹೆಣ್ಣು ಮನಸ್ಸು’ ಎಂದು ವರ್ಣಿಸುತ್ತದೆ. ಸುಕೇಶ ತಾನು ಇಷ್ಟಪಡುವ ರವೀಂದ್ರ ಬೇರೆ ಹುಡುಗಿಯನ್ನು ಮದುವೆಯಾಗುವ ಸಂದರ್ಭದಲ್ಲಿಯು ತನಗೆ ಆಸರೆಯಾಗಿ ಇರಬೇಕೆಂದು ಕೇಳುತ್ತಾನೆ; ನಂತರದಲ್ಲಿ ವಿಧುರನಾಗಿರುವ ಆಕಾಶನ ಹೆಂಡತಿಯ ಸ್ಥಾನವನ್ನು ತುಂಬುವ ದೈನಸ್ಥಿತಿಗೆ ಇಳಿಯಬೇಕಾಗುತ್ತದೆ. ಹೀಗಾಗಿ ಕಾದಂಬರಿಯಲ್ಲಿ ಹೆಣ್ಣೆಂದರೆ ಎಂದಿಗೂ ಗಂಡಿನ ಅಧೀನವಾಗಿಯೇ ಇರುವಂತೆ ಚಿತ್ರಿಸಿದ್ದು ಯಥಾಸ್ಥಿತಿವಾದದ ಸಮರ್ಥನೆಯೇ ಆಗಿದೆ. ಕೊನೆಯ ಭಾಗದಲ್ಲಿ ಬರುವ ಸುಕೇಶನ ಅಸಹಾಯಕತೆ ಮತ್ತು ಗೋಳಾಟವು ಕಾದಂಬರಿಯಲ್ಲಿ ಬರಿ ರೋದನವಾಗಿ ಕೇಳಿಸುವಂತಾಗಿದೆ.

’ದೀಪವಿರದ ದಾರಿಯಲ್ಲಿ’ ಕಾದಂಬರಿಯಲ್ಲಿ ಸುಕೇಶ, ಸಂಜೀವ, ರಘುಪತಿ-ಇವರೆಲ್ಲರೂ ಒಂದಲ್ಲ ಒಂದು ಬಗೆಯಲ್ಲಿ ಗಂಡಸರ ಲೈಂಗಿಕ ತೃಷೆಗೆ ಬಲಿಪಶುಗಳೇ ಆಗಿದ್ದಾರೆ. ಲಿಂಗ ಪರಿವರ್ತಿಸಿಕೊಂಡಿರುವ ಸುನಂದಾ ಮತ್ತು ಮಂದಾಕಿನಿಯಂತಹವರ ಬದುಕು ಇನ್ನೂ ಹೀನಾಯವಾಗುತ್ತದೆ. ಇವರ ಬಾಳು ಬರಿ ಕತ್ತಲಿನಿಂದಲೇ ತುಂಬಿರುತ್ತದೆ ಎಂಬ ನೇತ್ಯಾತ್ಮಕ ನಿಟ್ಟಿನಿಂದಲೇ ಕಾದಂಬರಿಯನ್ನು ಹೆಣೆಯಲಾಗಿದೆ. ಕಾದಂಬರಿಯ ಶೀರ್ಷಿಕೆಯು ಕೂಡ ಅದನ್ನೇ ಧ್ವನಿಸುತ್ತದೆ. ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಕಾದಂಬರಿಯು ಯಾವ ಧೋರಣೆಗಳನ್ನು ಹೊಂದಿದೆ ಎನ್ನುವುದು ಸ್ಪಷ್ಟವಾಗುವುದಿಲ್ಲ. ಆದರೆ ಸಲಿಂಗಪ್ರೇಮದ ವ್ಯಕ್ತಿಗಳ ಅಸ್ಮಿತೆಗೆ ಸಾಮಾಜಿಕ ಒಪ್ಪಿಗೆ ಇಲ್ಲದಿರುವುದನ್ನು ಕಾದಂಬರಿಯು ತೀವ್ರ ಅನುಕಂಪದ ದೃಷ್ಟಿಕೋನದಿಂದಲೇ ನೋಡುತ್ತದೆ.

ನಮ್ಮ ಕಾಲದಲ್ಲಿ ಸಲಿಂಗಪ್ರೇಮದಂತಹ ಸೂಕ್ಷ್ಮ ಮತ್ತು ಸಂಕೀರ್ಣ ವಿಷಯವನ್ನು ಒಂದು ಕಾದಂಬರಿಯಾಗಿ ಬರೆದಿರುವುದು ಮುಖ್ಯ ಸಂಗತಿಯಾಗಿದೆ. ಈ ಕಾದಂಬರಿಯು ಸರಳ ಮತ್ತು ನೇರವಾದ ಕಥನ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಆದರೆ ಸಲಿಂಗಪ್ರೇಮದ ಸಂಕೀರ್ಣ ನೆಲೆಗಳನ್ನು ಶೋಧಿಸಲು ಇಲ್ಲಿ ಲೇಖಕರಿಗೆ ಸಾಧ್ಯವಾಗಿಲ್ಲ. ಆದರೂ ಭಾಷೆಯ ಹೊಸತನ, ನಿರೂಪಣೆಯ ಭಾವತೀವ್ರತೆಯಿಂದ ಕಾದಂಬರಿಯು ಆಪ್ತಭಾವವನ್ನು ಮೂಡಿಸುತ್ತದೆ.

ಡಾ. ಸುಭಾಷ್ ರಾಜಮಾನೆ

ಡಾ. ಸುಭಾಷ್ ರಾಜಮಾನೆ
ಬೆಂಗಳೂರಿನ ಯಲಹಂಕ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರು. ಕನ್ನಡ, ಇಂಗ್ಲಿಷ್, ಮರಾಠಿ ಭಾಷೆಗಳನ್ನು ಬಲ್ಲ ಇವರು, ಸಿನಿಮಾ ಮತ್ತು ಸಾಹಿತ್ಯ ವಿಮರ್ಶೆಯಲ್ಲಿ ತೊಡಗಿಸಿಕೊಂಡಿದ್ದಾರೆ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...