Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...