Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

- Advertisement -
- Advertisement -

ವ್ಯಕ್ತಿಯೊಬ್ಬರು ತಮ್ಮ ಫೋನ್‌ ಚಾರ್ಜಿಂಗ್‌ನಲ್ಲಿಟ್ಟು ನೀರು ಕುಡಿಯುತ್ತಾ ಫೋನ್ ಕರೆಯಲ್ಲಿ ಮಾತನಾಡುತ್ತಿರುವಾಗ ಅವರ ಕಿವಿಯ ಮೇಲೆ ಫೋನ್ ಸ್ಫೋಟಗೊಂಡಿದೆ ಎಂದು ಹೇಳುವ ಸಿಸಿಟಿವಿ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದೆ. ಮರಾಠಿ ಭಾಷೆಯಲ್ಲಿರುವ ಹೇಳಿಕೆಯೊಂದಿಗೆ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಇದು ಅಪಾಯಕಾರಿ! ನೀರು ಕುಡಿಯುವ ವೇಳೆ ಚಾರ್ಜ್‌ನಲ್ಲಿರುವ ನಿಮ್ಮ ಫೋನ್ ಅನ್ನು ಬಳಸುವಾಗ ಎಲ್ಲರೂ ಕಾಳಜಿ ವಹಿಸಿ. ಇದರಿಂದ ಮೆದುಳು ಕೂಡ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ” ಎಂದು ಫೋಸ್ಟ್‌ನಲ್ಲಿ ಹೇಳಲಾಗಿದೆ.

ಪುಣೆ ಮೂಲದ ಫೇಸ್‌ಬುಕ್ ಪೇಜ್‌ ಫನ್‌ ಮರಾಠಿಯಲ್ಲಿಯೂ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಹಲವಾರು ಇತರ ಫೇಸ್‌ಬುಕ್‌ ಬಳಕೆದಾರರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಈ ಲೇಖನದಲ್ಲಿ ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ರೂಪಿನ್ ಶರ್ಮಾ ಕೂಡ ಪೋಸ್ಟ್ ಮಾಡಿದ್ದಾರೆ. ಬಳಿಕ ಅದನ್ನು ಅಳಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ.

ನಿಜಾಂಶ:

ಇದು ನೈಜ ಘಟನೆ ಎಂದು ವೈರಲ್ ಆಗುತ್ತಿರುವ ದೃಶ್ಯಾವಳಿಯ ಸಂಪೂರ್ಣ ವೀಡಿಯೊದ ಕ್ಲಿಪ್ ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿದೆ. ಇದು ಸ್ಕ್ರಿಪ್ಟೆಂಡ್‌ ವಿಡಿಯೋ ಎಂದು ಹೇಳಲಾಗಿದೆ.

ಸಂಪೂರ್ಣ ವಿಡಿಯೋವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಜ್ವಾಲಾ ಪೋಸ್ಟ್ ಮಾಡಿದ್ದಾರೆ. ಶೀರ್ಷಿಕೆಯು ‘ಎಚ್ಚರಿಕೆಯಿಂದಿರಿ’ ಎಂದು ಕಾಣಿಸುತ್ತದೆ ಮತ್ತು ‘ಇನ್ನಷ್ಟು ವೀಕ್ಷಿಸಿ’ ಕ್ಲಿಕ್ ಮಾಡಿದ ನಂತರ ಕೆಳಗೆ ಓದಿದಾಗ ವೈರಲ್‌ ಆಗುತ್ತಿರುವ ಹೇಳಿಕೆ ತಪ್ಪು ಎಂದು ಗೊತ್ತಾಗುತ್ತದೆ. – “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಗಿದೆ.

‘ಸ್ಫೋಟ’ದ ಹೇಳಿಕೆಯನ್ನು ಉಪಶೀರ್ಷಿಕೆಯಾಗಿ ಮಾತ್ರ ಮಾಡಲಾಗಿದೆ ಎಂಬುದನ್ನು ಓದುಗರು ಗಮನಿಸಬೇಕು. ವೀಡಿಯೋದಲ್ಲಿ ನಿಜವಾದ ಸ್ಫೋಟ ನಡೆದಿಲ್ಲ.

ಅದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗಿದೆ. ಮೂಲ ವಿಡಿಯೋವು ಇದು ಸ್ಕ್ರಿಪ್ಟೆಂಡ್ ವಿಡಿಯೋ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ವಿಡಿಯೋದ ರಚನೆಕಾರರು ಇದು ಚಿತ್ರೀಕರಿಸಲಾದ ವಿಡಿಯೋ ಎಂದು ತಿಳಿಸಲು ವೀಡಿಯೊಗಳಲ್ಲಿ ಸರಿಯಾದ ಮತ್ತು ಸ್ಪಷ್ಟವಾದ ಹೇಳಿಯನ್ನು ಸೇರಿಸುವಲ್ಲಿ ವಿಫಲರಾಗಿದ್ದಾರೆ.

ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುವಾಗ ಫೋನ್‌ ಸ್ಪೋಟಗೊಂಡಿರುವ ವರದಿಗಳಾಗಿವೆ. ಆದರೆ, ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಾ ನೀರು ಕುಡಿಯುವಾಗ ಸ್ಪೋಟಗೊಂಡಿರುವ ಬಗ್ಗೆ ಯಾವುದೇ ಘಟನೆಯು ವರದಿಯಾಗಿಲ್ಲ. ಆದರೂ, ಮೊಬೈಲ್‌ ಫೋನ್‌ ಜಾರ್ಜ್‌ನಲ್ಲಿದ್ದಾಗ ಫೋನ್‌ನಲ್ಲಿ ಮಾತನಾಡುವುದು ಅಪಾಯಕಾರಿ ಎಂಬುದು ನಮ್ಮ ಅರಿವಿನಲ್ಲಿರಬೇಕು.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...