Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...