Homeಕರ್ನಾಟಕಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

- Advertisement -
- Advertisement -

ಕೊರಗರದ್ದು ಇನ್ನೊಂದು “ಜೈ ಭೀಮ್” ಕಥೆ ಆಗದಿರಲಿ ಎಂದು ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಾ.ಎಚ್‌.ಸಿ.ಮಹದೇವಪ್ಪ ಎಚ್ಚರಿಸಿದ್ದಾರೆ.

ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ಅವರು, ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೋಟಾದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಅಲ್ಲಿನ ಕೊರಗ ಸಮುದಾಯದ ಮೇಲೆ ಪೊಲೀಸರು ಪ್ರಹಾರ ನಡೆಸಿದ್ದರು. ಇಂತಹ ಹೀನ ಕೃತ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಇದೀಗ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಇದು ಮೇಲ್ನೋಟಕ್ಕೆ ಅತ್ಯಂತ ಸುಳ್ಳಿನ ಪ್ರಕರಣವಾಗಿ ಕಾಣುತ್ತಿದೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಲಾಗಿದೆ. ಒಂದು ವೇಳೆ ಪೊಲೀಸರ ಮೇಲೆ ಕೊರಗರು ಹಲ್ಲೆ ನಡೆಸಿದ್ದೇ ನಿಜವಾದರೆ, ಈ ಸಂಗತಿಯನ್ನು ಪೊಲೀಸರು ಅಂದೇ ಏಕೆ ತಿಳಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಯಾವ ಕಾರಣಕ್ಕೆ ಸಚಿವರ ಹೇಳಿಕೆಗಳು ಪ್ರಕಟಗೊಂಡ ಮೇಲೆ ಈ ರೀತಿ ಹೇಳಿಕೆ ನೀಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂಬುದರ ಬಗ್ಗೆ ಸರಿಯಾದ ಸ್ಪಷ್ಟತೆ ಇಲ್ಲ. ಮೇಲಾಗಿ ಕೊರಗರು ಮೃದು ಸ್ವಭಾವದವರೂ ಆಗಿರುವುದು ಇಲ್ಲಿನ ಅನುಮಾನಗಳಿಗೆ ಮೂಲ ಕಾರಣ ಎಂದು ಎಂದು ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದೊಂದು ಸುಳ್ಳು ಪ್ರಕರಣ ಎಂದೇ ನನಗೆ ಅನಿಸುತ್ತಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರು ಕೊರಗರ ಪರವಾಗಿ ನಿಲ್ಲಲು ಕೋರುತ್ತೇನೆ. ಇನ್ನು ಹಲ್ಲೆ ಯಾರ ಮೇಲೆ ನಡೆದಿದ್ದರೂ ಅದು ತಪ್ಪೇ. ಆದರೆ ಇದನ್ನೇ ಸುಳ್ಳು ಬಂಡವಾಳವಾಗಿಟ್ಟುಕೊಂಡು ಪ್ರಕರಣ ದಾಖಲಿಸುವ, ಅದರಲ್ಲೂ ಜಾಮೀನು ರಹಿತ ಪ್ರಕರಣ ದಾಖಲಿಸುವುದು ನಿಜಕ್ಕೂ ಅನ್ಯಾಯದ ಪರಮಾವಧಿ ಮತ್ತು ಕೆಳ ಸಮುದಾಯದ ಮೇಲೆ ನಡೆದ ದೌರ್ಜನ್ಯವೇ ಆಗಿರುತ್ತದೆ ಎಂದಿದ್ದಾರೆ.

ಈ ಕೋಮುವಾದಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಜನ ಸಮುದಾಯಗಳಿಗೆ ಅಷ್ಟಾಗಿ ರಕ್ಷಣೆ ಇಲ್ಲದಿರುವಾಗ ಇಂತಹ ಘಟನೆಗಳು ನಡೆದಿಲ್ಲ ಎಂದುಕೊಳ್ಳಲು ಆಗದು. ಹೀಗಾಗಿಯೇ ಕಾಂಗ್ರೆಸ್ ಪಕ್ಷವು ನೊಂದ ಸಮುದಾಯದ ಪರವಾಗಿ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಕಲಿ ಪ್ರಕರಣ ದಾಖಲಿಸಲು ಹೊರಟಿರುವ ಪೊಲೀಸರು ಮತ್ತು ಸವರ್ಣೀಯರ ಹಿತಾಸಕ್ತಿಯನ್ನು ಕಾಪಾಡಲು ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕೂಡಲೇ ಅವರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಎಲ್ಲಾ ದಲಿತ ಸಂಘರ್ಷ ಸಮಿತಿಗಳ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಅವರು, “ಕೊರಗರ ಕಥೆ ಇನ್ನೊಂದು ಜೈ ಭೀಮ್ ಸಿನಿಮಾದ ಪ್ರಕರಣದಂತೆ ಆಗದಿರಲಿ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...