Homeಮುಖಪುಟನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾವು ಯಾವುದೇ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡಿದ್ದಕ್ಕೆ ಯಾವುದಾದರೂ ಸಾಕ್ಷಿಯಿದ್ದರೆ ತೋರಿಸಿ, ಮತಾಂತರ ಎಂದರೆ ಏನು ಎಂದು ನಮಗೆ ತಿಳಿಸಿ ಎಂದು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -
- Advertisement -

ಕ್ರಿಸ್‌ಮಸ್‌ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರನ್ನು ಕೆಲ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿಳಿದೇವಾಲಯ ಗ್ರಾಮದಲ್ಲಿ ಡಿಸೆಂಬರ್ 28ರ ಮಂಗಳವಾರ ಸಂಜೆ ಜರುಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ನಂದಿನಿ ಎಂಬುವವರ ಮನೆಗೆ ನುಗ್ಗಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿದ್ದಾರೆ. ಅಲ್ಲಿದ್ದ ಮಹಿಳೆಯರು ನಾವು ಮತಾಂತರ ಮಾಡುತ್ತಿಲ್ಲ ಎಂದು ಸಮರ್ಥನೆ ನೀಡಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹಿಂದೂ ಧರ್ಮದಂತೆ ನಿಮ್ಮ ಹಣೆಯಲ್ಲಿ ಸಿಂಧೂರ ಏಕಿಲ್ಲ ಎಂದು ಪ್ರಶ್ನಿಸಿದಾಗ ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಅದನ್ನು ಕೇಳಲು ಅಧಿಕಾರ ನಿಮಗೆ ಕೊಟ್ಟವರ್ಯಾರು ಎಂದು ನಂದಿನಿಯವರು ತರಾಟೆಗೆ ತೆಗೆದುಕೊಂಡಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ನೀವು ಹೊರಗಡೆ ಹೋದಾಗ ವಾರಗಟ್ಟಲೆ ಮುಖ ತೊಳೆಯುವುದಿಲ್ಲ, ನಾಮ ಇಕ್ಕಿಕೊಳ್ಳುವುದಿಲ್ಲ. ಅದನ್ನು ಯಾರಾದರೂ ಪ್ರಶ್ನಿಸಿದ್ದಾರ? ಇಲ್ಲವಾದರೆ ನಮ್ಮನ್ನು ಏಕೆ ಪ್ರಶ್ನಿಸುತ್ತೀರಿ? ಎಂದು ನಂದಿನಿಯವರು ಮರು ಪ್ರಶ್ನಿಸಿದ್ದಾರೆ. ನಾವು ನಮ್ಮ ಮನಶಾಂತಿಗಾಗಿ ಪ್ರಾರ್ಥನೆ ಮಾಡುತ್ತೇವೆ ಎಂದು ಮತ್ತೊಬ್ಬ ಮಹಿಳೆ ಇದೇ ಸಮಯದಲ್ಲಿ ತಿಳಿಸಿದ್ದಾರೆ.

ನಾವು ಯಾವುದೇ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡಿದ್ದಕ್ಕೆ ಯಾವುದಾದರೂ ಸಾಕ್ಷಿಯಿದ್ದರೆ ತೋರಿಸಿ, ಮತಾಂತರ ಎಂದರೆ ಏನು ಎಂದು ನಮಗೆ ತಿಳಿಸಿ ಎಂದು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಾರ್ಥನೆಯನ್ನು ಚರ್ಚ್‌ಗಳಲ್ಲಿ ಮಾತ್ರ ಮಾಡಬೇಕು ಎಂಬು ಬಜರಂಗದಳದ ಸದಸ್ಯರ ಪ್ರಶ್ನೆಗೆ ನಾವು ಹಿಂದೂಗಳ ಹಬ್ಬದಲ್ಲಿ ಮನೆ ಮುಂದೆಯೇ ಬಲಿ ಕೊಡುತ್ತೇವೆ, ಒಂದೊಂದು ದೇವರಿಗೂ ಒಂದೊಂದು ಆಚರಣೆ ಇದೆ ಇದೆ. ಅದೇ ರೀತಿ ಪ್ರಾರ್ಥನೆ ಮಾಡುತ್ತಿದ್ದೇವೆ. ಮರಿ ಕಡಿದು ಹಬ್ಬ ಮಾಡುತ್ತೇವೆ, ಬಂದು ನೀವು ಊಟ ಮಾಡಿಕೊಂಡು ಹೋಗಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿ ಹಿಂದೂ ದೇವರ ಫೋಟೊಗಳಿಲ್ಲ ಎಂಬ ಪ್ರಶ್ನೆಗೆ ನಮ್ಮ ಮನೆಯಲ್ಲಿ ಹಿಂದೂ ದೇವರ ಫೋಟೊಗಳು, ದೇವರ ಮನೆ ಎಲ್ಲಾ ಇದೆ ಎಂದು ಮಹಿಳೆಯರು ಪ್ರತಿ ಉತ್ತರ ನೀಡಿದ್ದಾರೆ. ಅದೇ ಸಮಯದಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮನೆಗೆ ದಾಳಿ ಮಾಡಿ ಪ್ರಾರ್ಥನೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೂರುವುದನ್ನು ಕಾಣಬಹುದಾಗಿದೆ.

ಬಿಳಿದೇವಾಲಯ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ದೂರಿನ ಮೇಲೆ ಬಜರಂಗದಳ ಸದಸ್ಯರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೂರು-ಪ್ರತಿದೂರು ದಾಖಲಾಗಿದೆ, ಆದರೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ತರುವ ಪ್ರಯತ್ನದ ಬೆನ್ನಲ್ಲೆ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗಿವೆ. ನಿನ್ನೆ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.


ಇದನ್ನೂ ಓದಿ: ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಾಳಿ,ಕಾಲುಂಗರ ಹಾಕಬೇಡಿ ,ಹಾಕು ಅಂತ ಯಾರು ಹೇಳ್ತಾರೆ ಇವರಿಗೆ .ಮತಾಂತರ ಆಗಿರೋರು ಕ್ರಿಶ್ಚಿಯನ್ ಸಮುದಾಯದಲ್ಲಿ ಅಧಿಕೃತವಾಗಿ ಸೇರಲಿ ,ಹಿಂದೂ ಸಮುದಾಯದ SC,ST ,OBC ಮೀಸಲಾತಿ ಏನಕ್ಕೆ ಇವರಿಗೆ .

  2. ದಾರ್ಮಿಕ ಸ್ವಾತಂತ್ರ್ಯ ಈ ದೇಶದ ಜನರ ಸಂವಿಧಾನಿಕ ಹಕ್ಕು ಅದನ್ನ ಪ್ರಶ್ನಿಸೋಕೆ ಬಜರಂಗದಳ ಅಲ್ಲ ಸುಪ್ರಿಂಕೋರ್ಟ್ಗೂ ಹಕ್ಕಿಲ್ಲ..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...