Homeಮುಖಪುಟಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸುಗಂಧ ದ್ರವ್ಯಗಳ ಉದ್ಯಮಿಯೊಬ್ಬರ ಮನೆ, ಕಾರ್ಖಾನೆ ಮೇಲೆ ಆದಾಯ ಇಲಾಖೆ(ಐಟಿ) ದಾಳಿ ಮಾಡಿ ನೂರಾರು ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ಈ ನಡುವೆ ಶುಕ್ರವಾರ ಬೆಳಿಗ್ಗೆ ರಾಜ್ಯದ ಪ್ರತಿಪಕ್ಷ ಸಮಾಜವಾದಿ ಪಕ್ಷದ ನಾಯಕ ಪುಷ್ಪರಾಜ್‌ ಜೈನ್ ಅವರು ಕೂಡಾ ಐಟಿ ಇಲಾಖೆಯ ಅಧಿಕಾರಿಗಳಿಂದ ಶೋಧಿಸಲ್ಪಟ್ಟಿದ್ದಾರೆ.

ಪುಷ್ಪರಾಜ್‌ ಜೈನ್ ಅವರು ಸುಗಂಧ ದ್ರವ್ಯ, ಪೆಟ್ರೋಲ್ ಪಂಪ್‌ಗಳು ಮತ್ತು ಕೋಲ್ಡ್ ಸ್ಟೋರೇಜ್‌ಗಳನ್ನು ಹೊಂದಿರುವ ಉದ್ಯಮಿಯಾಗಿದ್ದಾರೆ. ಅವರು ಇತ್ತೀಚೆಗಷ್ಟೇ ತಮ್ಮ ಪಕ್ಷದ ಪ್ರಚಾರಕ್ಕಾಗಿ ‘ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ’ವನ್ನು ಬಿಡುಗಡೆ ಮಾಡಿದ್ದರು. ಇದೀಗ ಐಟಿ ಇಲಾಖೆಯು ಉತ್ತರ ಪ್ರದೇಶ, ದೆಹಲಿ ಮತ್ತು ಮುಂಬೈನಲ್ಲಿ ಅವರಿಗೆ ಸಂಬಂಧಿಸಿದ ಸುಮಾರು 50 ಸ್ಥಳಗಳನ್ನು ಶೋಧಿಸುತ್ತಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

ಐಟಿ ದಾಳಿಯ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷ, “ಕಳೆದ ಬಾರಿ ಭಾರಿ ವೈಫಲ್ಯ ಹೊಂದಿತ್ತು. ಇದೀಗ ಬಿಜೆಪಿ ಕಟ್ಟಕಡೆಯ ಸ್ನೇಹಿತ ಐಟಿ ಇಲಾಕೆ ಕೊನೆಗೂ ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್‌‌ ಜೈನ್ ಮತ್ತು ಖನೌಜ್‌ನ ಇತರ ಸುಗಂಧ ದ್ರವ್ಯ ವ್ಯಾಪಾರಿಗಳ ಸ್ಥಳದ ಮೇಲೆ ದಾಳಿ ಮಾಡಿದೆ. ಹೆದರಿರುವ ಬಿಜೆಪಿ ಯುಪಿ ಚುನಾವಣೆಯಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಹಿರಂಗವಾಗಿ ದುರ್ಬಳಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ, ಅವರು ಮತದ ಮೂಲಕ ಉತ್ತರಿಸುತ್ತಾರೆ” ಎಂದು ಹೇಳಿದೆ.

ಐಟಿ ಇಲಾಖೆಯು ಇತ್ತೀಚೆಗೆ ಮತ್ತೋರ್ವ ಉದ್ಯಮಿ ಪಿಯೂಷ್ ಜೈನ್ ಅವರಿಗೆ ಸೇರಿದ ಕಾನ್ಪುರ ಮತ್ತು ಖನೌಜ್‌‌ನ ಕೆಲವು ಸ್ಥಳಗಳಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನಗಳನ್ನು ವಶಕ್ಕೆ ಪಡೆದಿತ್ತು. ಈ ವೇಳೆ 196 ಕೋಟಿ ರೂ. ನಗದು ಮತ್ತು 23 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ದೇಶದ ಪ್ರತಿಷ್ಠಿತ ಚುನಾವಣೆಯಾಗಿರುವ ಉತ್ತರ ಪ್ರದೇಶದಲ್ಲಿ ಈಗಾಗಲೇ ಎಲ್ಲಾ ಪಕ್ಷಗಳು ಪ್ರಚಾರಗಳನ್ನು ಪ್ರಾರಂಭಿಸಿವೆ. ಈ ಮಧ್ಯದಲ್ಲಿ ಈ ದಾಳಿಗಳು ನಡೆಯುತ್ತಿದ್ದು, ರಾಜಕೀಯವಾಗಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್‌‌ ಜೈನ್‌ ಅವರನ್ನು ಬೆಂಬಲಿಸುತ್ತಿದೆ ಎಂದು ಪರಸ್ಪರ ಆರೋಪಿಸುತ್ತಿದೆ.

ಇದನ್ನೂ ಓದಿ:5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಸಮಾಜವಾದಿ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದವರು ಪಿಯೂಷ್ ಜೈನ್ ಎಂದು ಬಿಜೆಪಿ ಆರೋಪಿಸಿತ್ತು. ಬುಧವಾರ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ‘‘ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯವಹಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ಕ್ಕಿಂತ ಮೊದಲು ಅವರು ಎಲ್ಲೆಡೆ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಉತ್ತರ ಪ್ರದೇಶ ಎಲ್ಲರಿಗೂ ಕಾಣಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್‌‌ ಯಾದವ್, “ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರೊಂದಿಗೆ ಸೇರಿಸಲು ನೋಡುತ್ತಿದೆ. ಪಿಯೂಷ್ ಜೈನ್ ಅವರೊಂದಿಗಿನ ನಮಗೆ ಯಾವುದೆ ಸಂಬಂಧವಿಲ್ಲ. ಬಿಜೆಪಿಯು ಅವರದೇ ಉದ್ಯಮಿಯ ಮೇಲೆ ತಪ್ಪಾಗಿ ದಾಳಿ ಮಾಡಿದೆ” ಎಂದು ಹೇಳಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ-2022: ‘ಸ್ಮೆಲ್‌ ಆಫ್‌ ಸೋಶಿಯಲಿಸಂ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...