Homeಕರ್ನಾಟಕನಾಟಕದ ಮೂಲಕ ಕೈದಿಗಳಲ್ಲಿನ ಅದ್ಭುತ ಪ್ರತಿಭೆ ಹೊರತೆಗೆದ ಹುಲುಗಪ್ಪ ಕಟ್ಟೀಮನಿ

ನಾಟಕದ ಮೂಲಕ ಕೈದಿಗಳಲ್ಲಿನ ಅದ್ಭುತ ಪ್ರತಿಭೆ ಹೊರತೆಗೆದ ಹುಲುಗಪ್ಪ ಕಟ್ಟೀಮನಿ

- Advertisement -
- Advertisement -

| ಬಿ. ಚಂದ್ರೇಗೌಡ |

ನಾಟಕ ನಿರ್ದೇಶಕ ಹುಲುಗಪ್ಪ ಕಟ್ಟೀಮನಿಯವರು ಮೈಸೂರಿನ ಜೈಲು ನಿವಾಸಿಗಳಿಗೆ ಕಲಿಸಿದ್ದ ಎರಡು ನಾಟಕಗಳನ್ನು ತಂದು ಶಿವಮೊಗ್ಗದಲ್ಲಿ ಪ್ರದರ್ಶಿಸಿದರು. ನಿಜಕ್ಕೂ ಇದೊಂದು ಅಸಾಮಾನ್ಯ ಸಾಧನೆಯೆಂದೇ ಹೇಳಬೇಕು. ಸಹಜವಾಗಿ ಇಂತಹ ಸಾಹಸಗಳಿಗೆ ಬೆನ್ನೆಲುಬಾಗಿ ನಿಲ್ಲುವ ಜಿಲ್ಲಾಧಿಕಾರಿ ದಯಾನಂದ್‍ರವರು ಮತ್ತು ಮೈಸೂರಿನ ಕಾರಾಗೃಹದ ಸೂಪರಿಂಟೆಂಡೆಂಟ್ ದಿವ್ಯಶ್ರೀಯವರ ಕಾಳಜಿಯ ಫಲವಾಗಿ ಇಂತಹ ಘಟನೆ ಸಂಭವಿಸಿತು.

ಘಟನೆ ಏಕೆಂದರೆ, ಕಾರಾಗೃಹ ವಾಸಿಗಳಿಗೆ, ನಾಟಕ ಕಲಿಸಿ ಅದನ್ನು ಜೈಲಿನಿಂದ ಹೊರಗೆ ತೆಗೆದುಕೊಂಡು ಹೋಗಿ ಅದ್ಭುತ ಪ್ರದರ್ಶನ ನೀಡಿದ್ದಕ್ಕೆ. ಇದು ದೇಶದಲ್ಲೆಲ್ಲೊ ನಡೆಯದೆ ಇರುವ ಸಾಹಸ. ದಿವ್ಯಶ್ರೀ ಈಗ ಶಿವಮೊಗ್ಗದ ಜಿಲ್ಲಾ ಸೂಪರಿಂಟೆಂಡೆಂಟ್ ಆಗಿ ಬಂದಿರುವುದರಿಂದ ಇಲ್ಲೂ ಅಂತಹ ಸಾಹಸ ಜರುಗಬಹುದು.

ಮೈಸೂರಿನಿಂದ ಐವತ್ತು ಜನ ಕೈದಿಗಳನ್ನ ಹೊರತೆಗೆದುಕೊಂಡು ಹೋಗುವುದೇ ಒಂದು ಸಾಹಸ. ಇದಕ್ಕಾಗಿ ಇಲಾಖೆ ಮತ್ತು ಸರಕಾರದ ನಡುವೆ ನಂಬಿಕೆಯ ನಡವಳಿಕೆ ಬೇಕಾಗುತ್ತದೆ. ಇದನ್ನೆಲ್ಲಾ ಸುಗಮಗೊಳಿಸಿ ಹೋದವರು, ಅಂದು ಗೃಹ ಸಚಿವರಾಗಿದ್ದ ಎಂ.ಪಿ ಪ್ರಕಾಶರು. ಅವರೆಂತಹ ವ್ಯಕ್ತಿ ಎಂದರೆ, – ಪೆರೋಲ್ ಮೇಲೆ ಬಿಡುಗಡೆ ಕೇಳಲು ಮನೆಗೆ ಹೋದ ಕೈದಿಯನ್ನ ಕೂರಪ್ಪ ಕೂತುಗೊ” ಎಂದು ಕೂರಿಸಿ, ಕಾಫಿ ಕೊಟ್ಟು ಊರು, ಕೇರಿ, ಮಾಡಿದ ಅಪರಾಧವನ್ನು ಕೇಳಿ ಕಳುಹಿಸುತ್ತಿದ್ದ ಅಪರೂಪದ ವ್ಯಕ್ತಿ. ಅವರ ಕಾಳಜಿಯ ಫಲವಾಗಿ ನಮ್ಮ ನಡುವೆಯಿದ್ದ ರಂಗ ಚಟುವಟಿಕೆ ಜೈಲು ಪ್ರವೇಶಿಸುವಂತಾಯ್ತು. ಅವರ ಮೆಚ್ಚಿನ ವ್ಯಕ್ತಿಯಾಗಿದ್ದ ಹುಲುಗಪ್ಪ ಕಟ್ಟಿಮನಿ, ತಿಂಗಳಾನುಗಟ್ಟಲೆ ಶ್ರಮವಹಿಸಿ, ಅಪರಾಧವೆಸಗಿದ ಕಾರಣಕ್ಕೆ ಖಿನ್ನತೆಗೊಳಗಾಗಿ ಅವಸಾನದ ಮುಖಭಾವದಲ್ಲಿದ್ದ ಕೈದಿಗಳಿಗೆ, ಮರುಜೀವ ಕೊಟ್ಟಿದ್ದಾರೆ.

ಹುಲುಗಪ್ಪ ಕಟ್ಟೀಮನಿ

ಕಟ್ಟಿಮನಿ ನೇರ ನಾಟಕ ಕಲಿಸಿದ, ಅವರಿಗೆಲ್ಲಾ ಯೋಗದ ಶಿಬಿರ ಮತ್ತಿತರ ಚಟುವಟಿಕೆ ಕಲಿಸಿ ಆನಂತರ ಅವರಲ್ಲಿನ ಪ್ರತಿಭೆ ಗುರುತಿಸಿ ನಂತರ ತಾವು ಆರಿಸಿಕೊಂಡ ನಾಟಕದ ಪಾತ್ರಗಳಿಗೆ ಲಗತ್ತಾದ ದೇಹಾಕೃತಿ ಮತ್ತು ಮುಖಚರ್ಯೆ ಗ್ರಹಿಸಿ ಆಯ್ಕೆಮಾಡಿಕೊಂಡಿದ್ದರಿಂದ ಕೈದಿಗಳು ಪಾತ್ರಗಳೇ ಆಗಿ ಹೋಗಿದ್ದರು. ಸಾಮಾನ್ಯವಾಗಿ ಜೈಲು ಸೇರಿದ ಅಪರಾಧಿಗಳು ಉಕ್ಕುವ ಆರೋಗ್ಯವಂತರಾಗಿರುತ್ತಾರೆ. ದಷ್ಟಪುಷ್ಟ ದೇಹದವರಾಗಿರುತ್ತಾರೆ. ಅಪರಾಧವೆಸಗಲು ಇದು ಪ್ರಧಾನ ಕಾರಣ. ಹುಲುಗಪ್ಪ ಕಟ್ಟೀಮನಿ ಕರೆತಂದ ಕೈದಿಗಳೆಲ್ಲರೂ ಆರೋಗ್ಯವಂತರಾಗಿದ್ದರು. ಈ ಪೈಕಿ ಸಂಗ್ಯಾಬಾಳ್ಯಾ ನಾಟಕದ ಸಂಗ್ಯಾನ ಪಾತ್ರಧಾರಿ ನಮ್ಮ ಕಲ್ಪನೆಯ ಸಂಗ್ಯಾನ ಪ್ರತಿರೂಪದಂತಿದ್ದ. ಇಲ್ಲಿನ ಪಾತ್ರಧಾರಿಗಳೆಲ್ಲಾ ಬಹುತೇಕ ಕೊಲೆ ಆಪಾದನೆಯಿಂದ ಜೀವಾವಧಿಗೆ ತುತ್ತಾಗಿದ್ದವರು.

ಪಕ್ಕದ ಮನೆಯ ಕೆಟ್ಟ ಮನುಷ್ಯನನ್ನೇ ಒಂದೇ ಏಟಿಗೆ ಕೊಂದವನು, ಹೆಂಡತಿ ಕೊಂದವನು, ತಂಗಿಯ ಬಗ್ಗೆ ಕೆಟ್ಟ ಮಾತನಾಡಿದವನನ್ನೇ ಕೊಂದುಹಾಕಿದವನು, ಮುಸ್ಲಿಮನನ್ನು ಹದಿನಾಲ್ಕು ಪೀಸುಗಳಾಗಿ ಕೊಂದ ಭಜರಂಗಿ, ತನ್ನಿಂದ ಇಂತಹ ಕೃತ್ಯವೆಸಗಲು ಪ್ರಚೋದಿಸಿ ಮರೆಯಾದ ಆರೆಸೆಸ್‍ನವರ ಬಗ್ಗೆ ಜೈಲಲ್ಲಿ ಕುದಿಯುತ್ತಿರುವವನು, ಹೀಗೆ, ಅಪರಾಧಗಳ ವಿಭಾಗ ಅಸಂಖ್ಯ. ಇವರೆಲ್ಲರ ಕೃತ್ಯ ಕೇಳುತ್ತಿದ್ದರೆ, ಮನುಷ್ಯನ ಮನಸ್ಸಿನಲ್ಲಿನ ಕ್ರೌರ್ಯದ ವಿರಾಟ ದರ್ಶನವಾಗುತ್ತದೆ. ಅಲ್ಲದೆ ಸಿಟ್ಟೇ ಇಲ್ಲದಿದ್ದರೆ ಮನುಷ್ಯನ ಬಾಳು ಎಷ್ಟು ಚೆನ್ನಾಗಿರುತ್ತಿತ್ತು ಅನ್ನಿಸುತ್ತದೆ.

ಹುಲುಗಪ್ಪ ಕಟ್ಟೀಮನಿ ಆರಿಸಿಕೊಂಡ ನಾಟಕ ಜಯಂತರ ತರ್ಜುಮೆಯಾದ “ಜೊತೆಗಿರುವನು ಚಂದಿರ” ಮತ್ತು ಕಂಬಾರರ “ಸಂಗ್ಯಾ ಬಾಳ್ಯಾ”. ಈ ಎರಡೂ ನಾಟಕ ಈ ಹಿಂದೆ ಹಲವು ಪ್ರಯೋಗ ಕಂಡಿದ್ದರೂ ಹುಲುಗಪ್ಪನವರು ಮೂಲ ನಾಟಕದೊಳಕ್ಕೆ ತಮ್ಮ ಪ್ರತಿಭೆಯನ್ನು ಬೆರೆಸಿರುವುದರಿಂದ ಸಮಯ ದ್ವಗುಣಗೊಂಡಿರುವುದಲ್ಲದೆ, ಎಲ್ಲ ಕೈದಿಗಳೂ ಸ್ಟೇಜಿಗೆ ಬಂದು ವಿಜೃಂಭಿಸುವಂತಾಗಿದೆ. ಹಾಗೆ ನೋಡಿದರೆ ಈ ಎರಡೂ ನಾಟಕಗಳು ಐತಿಹಾಸಿಕ ಘಟನೆಗಳು. ಭಾರತ ಪಾಕಿಸ್ತಾನ ಇಬ್ಭಾಗವಾದಾಗಿನ ಒಂದು ಘಟನೆ ಹೇಳುವ ‘ಜತೆಗಿರುವನು ಚಂದಿರ’ವನ್ನು ನೋಡುತ್ತಿದ್ದರೆ ಇದೇ ಘಟನೆಯನ್ನ ಹಿಂದೂ ಕುಟುಂಬಕ್ಕೆ ಬದಲಾಯಿಸಿದರೆ ಎರಡೂ ಒಂದೇ ವೃತ್ತಾಂತವನ್ನು ಹೇಳುತ್ತವೆ.

ಪ್ರಪಂಚದ ಯಾವ ದೇಶವೂ ಭಾರತದಂತೆ ಇಬ್ಭಾಗವಾಗಿಲ್ಲ, ಮತ್ತು ಇಷ್ಟು ವರ್ಷಗಳ ನಂತರವೂ ಪರಸ್ಪರ ದ್ವೇಷಿಸುತ್ತಾ ಯುದ್ದ ಮಾಡುತ್ತಾ ಬಂದಿಲ್ಲ. ಆದರೆ ಆ ಸಂದರ್ಭದ ಯಾವ ಪ್ರಜೆಗೂ ಈ ವಿಭಾಗ ಮತ್ತು ವಲಸೆ ಬೇಕಿರಲಿಲ್ಲ. ಆದರೆ ನಡೆದುಹೋಯ್ತು. ವಿಭಾಗ ಮತ್ತು ಹತ್ಯಾಕಾಂಡದ ಆಗಿನ ವಲಸೆ ನೋಡಿದ ಮಹಮದ್ ಅಲಿ ಜಿನ್ನಾ ನಾನು ವಿಭಾಗಿಸಿದ್ದು ಇಂತಹ ವಲಸೆ ನೋಡಲಿಲ್ಲ. ಅಲ್ಲಿಯವರು ಅಲ್ಲಲ್ಲೇ ಇರುತ್ತಾರೆ. ವಿಭಾಗದ ಗಡಿಯಷ್ಟೇ ನಿರ್ಮಾಣವಾಗುತ್ತದೆ ಎಂದು ಭಾವಿಸಿದ್ದನಂತೆ. ಆದರೆ ಆಗಿನ ಸಂದರ್ಭ ಕುರಿತ ಈ ನಾಟಕ ನೋಡುಗರನ್ನ ಆಧ್ರಗೊಳಿಸುತ್ತದೆ.

ಮುಸ್ಲಿಂ ಕುಟುಂಬವೊಂದು ಅನಾಥವಾಗಿ ಭಾರತ ಬಿಟ್ಟು ಹೋಗುತ್ತದೆ. ಹೋಗುವ ಮುನ್ನ ಮನೆಯೊಡತಿ ಮನೆ ಕಸಗುಡಿಸಿ ಹೋಗುತ್ತಾಳೆ. ಇದು ಪ್ರೇಕ್ಷಕನ ಮಧುರಗೊಳಿಸಲು ಆ ಕಾಲದ ಹಿಂದಿ ಸಿನಿಮಾ ಹಾಡುಗಳನ್ನ ಬಳಸಿಕೊಂಡಿದ್ದಾರೆ. ಇದೊಂದು ರೀತಿ ಅರ್ಥಪೂರ್ಣವಾಗಿದೆ. ಅಂದು ವಿಭಾಗದ ವಲಸೆ ಹತ್ಯಾಕಾಂಡ ನಡೆಯುತ್ತಿದ್ದರೆ, ಇತ್ತ ಹಿಂದೂಸ್ತಾನಿ ಸಂಗೀತಗಾರರಾದ ಬಡೇಗುಲಾಂ ಆಲಿ ಖಾನ್‍ರ ಸಂಗೀತ ಮತ್ತು ಪಾಕಿಸ್ತಾನದಿಂದ ಬಂದ ದೇವಾನಂದ್ ದಿಲೀಪ್‍ಕುಮಾರ್ ಇತ್ಯಾದಿ ನಾಯಕ ನಟರು ವಿಜೃಂಭಿಸುತ್ತಿದ್ದರು. ಇಡೀ ಹಿಂದಿ ಚಿತ್ರರಂಗವೇ ಮುಸ್ಲಿಂ ಪ್ರತಿಭಾವಂತರಿಂದ ತುಂಬಿಹೋಗಿತ್ತು. ಅದೊಂದು ವಿಪರ್ಯಾಸಗಳೇ ಮೇಳೈಸಿದ ಕಾಲ ಅನ್ನಬಹುದು.

ಇನ್ನ ಹುಲುಗಪ್ಪನವರು ನಿರ್ದೇಶಿಸಿರುವ ಸಂಗ್ಯಾ ಬಾಳ್ಯಾ ಹಲವು ನಿರ್ದೇಶಕರ ಕೈಲಿ ನಾಡಿನಾದ್ಯಂತ ಸಾವಿರಾರು ಪ್ರದರ್ಶನ ಕಂಡಿದೆ. ನೂರು ವರ್ಷದ ಹಿಂದೆ ನಡೆದ ಈ ಕೊಲೆ ಅಕ್ರಮ ಸಂಬಂಧಕ್ಕೆ ಪ್ರತಿಕಾರವಾಗಿ ನಡೆದದ್ದು, ಇಂದೂ ಕೂಡ ನಡೆಯುತ್ತಿದೆ. ಹಾಗಾಗಿ ಇದೊಂದು ಎಂದೆಂದೂ ಬದುಕಿಕೊಂಡೇ ಇರುವ ಕ್ರೌರ್ಯದ ವಸ್ತು. ತನ್ನ ಹೆಂಡತಿ ಗಂಗಿಯನ್ನ ಇಟ್ಟುಕೊಂಡ ಸಂಗ್ಯನನ್ನ ವೀರಪ್ಪ ಕೊಂದು ಹಾಕುತ್ತಾನೆ. ಜೈಲಿಗೆ ಬರುತ್ತಾನೆ, ಕೈದಿಗಳು ಘಟನೆ ಕುರಿತು ಕೇಳುತ್ತಾರೆ. ಅಂದರೆ ನಾಟಕ ಆರಂಭವಾದ ಅರ್ಧಗಂಟೆಯಲ್ಲೇ ಮುಗಿದುಹೋದ ನಾಟಕ, ಜೈಲಿನ ಮುಖಾಂತರ ಬೆಳೆಯತೊಡಗುತ್ತದೆ. ಖೈದಿಗಳೆಲ್ಲರಿಗೂ ಅವಕಾಶ ಕೊಟ್ಟಿರುವ ಹುಲುಗಪ್ಪ ಕಡೆಯಲ್ಲಿ ವೀರಪ್ಪ ಗಲ್ಲಿಗೇರುವ ದೃಶ್ಯದಲ್ಲಿ ಕೊನೆಗೊಳಿಸಿದ್ದಾರೆ.

ವೀರಪ್ಪನಿಗೆ ನೇಣಿಗೇರಿಸುವ ಅಧಿಕಾರಿಗಳು ಕೊನೆಯಾಸೆ ಕೇಳಿದಾಗ ಆತ “ತನ್ನ ಗಂಗಿಯನ್ನ ತಪ್ಪು ತಿಳಿದೆ, ಸಂಗ್ಯಾನನ್ನ ನಾನು ಕೊಲ್ಲುವಾಗ ಆತನಗುತ್ತಿದ್ದ ನನ್ನನ್ನು ಇಲ್ಲಿಯವರೆಗೂ ಕಾಡಿಸಿದ್ದು ಆತನ ನಗು ವ್ಯಾಪಾರ ಮಾಡಿ ಹಣ ಸಂಗ್ರಹಿಸುವ ಲೋಭಿತನಕ್ಕೆ ಬಿದ್ದ ನಾನು ಗಂಗಿಯನ್ನ ನಿರ್ಲಕ್ಷಿಸಿದೆ” ಎನ್ನುತ್ತಾನೆ. ಆತ ತಪ್ಪು ಒಪ್ಪಿಕೊಂಡು ಪಶ್ಚಾತ್ತಾಪ ಪಡುವ ಸಮಯಕ್ಕೆ ನೇಣು ಬೀಳುತ್ತದೆ. ಕೈದಿಗಳ ಸಮೇತ ಪ್ರೇಕ್ಷಕ ಸಮೂಹ ದಿಗ್ಭ್ರಮೆಗೊಳ್ಳುತ್ತದೆ. ಹುಲುಗಪ್ಪ ಆರಿಸಿರುವ ವೀರಪ್ಪನ ಪಾತ್ರ ಕೂಡ, ಕೊಲೆಯೆಂದರೆ ಫಲವಾಗಿ ಜೈಲು ಸೇರಿದ ವ್ಯಕ್ತಿ. ಆದ್ದರಿಂದ ಅವನ ಅಭಿನಯ ಮನಮುಟ್ಟುವಂತಿತ್ತು.

ಎರಡೂ ಮುಕ್ಕಾಲು ಗಂಟೆಯಷ್ಟೇ ಆರಂಭಿಸಿರುವ ಈ ನಾಟಕ ಸಮಯ ಹೋದದ್ದೇ ಗೊತ್ತಾಗದಷ್ಟು ಲವಲವಿಕೆಯಿಂದ ಕೂಡಿದೆ. ಯಾವ ದೃಶ್ಯವನ್ನ ಕೈಬಿಡದಷ್ಟೂ ಬಿಗಿಯಾಗಿ ಕಟ್ಟೀಮನಿ ಕಟ್ಟಿಕೊಟ್ಟಿದ್ದಾರೆ. ಮರುದಿನದ ಸಂವಾದದಲ್ಲಿ ಎಲ್ಲ ಕೊಲೆಗಾರರು ತಮ್ಮ ಕೃತ್ಯಗಳ ಪರಿಣಾಮದಿಂದ ಅನುಭವಿಸುತ್ತಿರುವ ಯಾತನೆಯಿಂದ ಹೊರಬಂದಂತೆ ಕಂಡರು. ಕೆಲವರು ತಮ್ಮ ಕೃತ್ಯ ನೆನೆದು ಅತ್ತರು. ಅಂದರೆ, ತಾವು ಕೊಂದವರ ಕುಟುಂಬ ನೆನೆಸಿಕೊಂಡಲ್ಲ, ತಮ್ಮ ಬಂಧು-ಬಳಗ, ಮಕ್ಕಳು, ಮಡದಿ ನೆನಸಿಕೊಂಡು. ಇಲ್ಲಿನ ಜೀವಾವಧಿಯ ಜನ, ತಾವು ಕೊಂದವರ ಕುಟುಂಬದ ಬಗ್ಗೆ ಯೋಚಿಸಿದಂತೆ ನನಗೆ ಕಾಣಲಿಲ್ಲ. ಹಾಗೇನಾದರೂ ಯೋಚಿಸಿದರೆ, ಅದು ಮಾತ್ರ ಅವರನ್ನ ಮಾನವೀಯ ಆವರಣಕ್ಕೆ ತಂದು ನಿಲ್ಲಿಸುವಂತದ್ದು. ಕೊಂದವನನ್ನೇ ಅಯ್ಯೋ ಪಾಪ ಎಂಥಾ ಕೆಲಸ ಮಾಡಿಬುಟ್ಟ, ಹೋದೊನ ಕತೆ ಇರ್ಲಿ, ಬದುಕಿದೋನ್ನ ಯಂಗಾರ ಮಾಡಿ ಏಳಿಸಿಕೊಬೇಕು ಅನ್ನೋ ಮನೋಭಾವ ನಮ್ಮ ನಡುವೆ ಇದೆ. ಇದಷ್ಟು ಒಳ್ಳೆಯದಲ್ಲ. ಇದರಿಂದ ಸತ್ತವನ ಪರ ಸಾಕ್ಷಿ ಹೇಳಲು ಯಾರೂ ಬರುವುದಿಲ್ಲ. ಇರಲಿ ಕೈದಿಗಳ ಲೋಕ ತೋರಿದ ಕಟ್ಟೀಮನಿಗೆ ಧನ್ಯವಾದಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...