Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...