Homeಮುಖಪುಟಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

ಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

- Advertisement -
- Advertisement -

ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ನಮ್ಮ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿವೆ ಎಂದು ಖರ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಕಬಳಿಕೆಯ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ದಕ್ಷಿಣ ಟಿಬೆಟ್’ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶ ರಾಜ್ಯದಲ್ಲಿ ಇರುವ ವಸತಿ ಪ್ರದೇಶಗಳು, ಪರ್ವತಗಳು, ನದಿಗಳು ಮತ್ತು ಮೌಂಟೇನ್ ಪಾಸ್ ಸೇರಿದಂತೆ 15 ಸ್ಥಳಗಳಿಗೆ ಚೀನಾ ಗುರುವಾರ ‘ಮರುನಾಮಕರಣ’ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭೂ ಗಡಿ ಕಾನೂನು’ ಜನವರಿ 1ರಿಂದ ಜಾರಿಗೆ ಬರಲಿದ್ದು, ಇದಕ್ಕೆ ಮುಂಚಿತವಾಗಿ ಈ ಬೆಳವಣಿಗೆ ಆಗಿರುವುದು ಆತಂಕ ತಂದಿದೆ. ಗಡಿ ನಿಯಂತ್ರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕಾನೂನು ಇದಾಗಿದ್ದು, ಚೀನಾದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಗೆ ಈ ಕಾನೂನು ನೇರವಾಗಿ ಸಂಬಂಧಿಸಿದೆ ಎಂದು ವರದಿಗಳಾಗಿವೆ.

ಭಾರತದ ಪ್ರದೇಶದೊಳಗೆ ಚೀನಾ ಅತಿಕ್ರಮಣ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ಪ್ರಶ್ನಿಸುತ್ತಲೇ ಬಂದಿದ್ದಾರೆ. ನವೆಂಬರ್‌ನಲ್ಲಿ ರಾಹುಲ್ ಗಾಂಧಿಯವರು ಈ ಕುರಿತು ಪ್ರಶ್ನಿಸಿದ್ದರು. “ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದರು.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದರು.

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದರು.

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿತ್ತು. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿತ್ತು.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿತ್ತು. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿತ್ತು ಎನ್ನಲಾಗಿದೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...