Homeಮುಖಪುಟಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಒಕ್ಕೂಟ ಸರ್ಕಾರದ ನಿರ್ಧಾರದ ವಿರುದ್ಧ ಜವಳಿ ಉದ್ಯಮ ಮತ್ತು ಹಲವು ರಾಜ್ಯಗಳ ಆಕ್ಷೇಪಣೆ ಎತ್ತಿದ್ದವು

- Advertisement -
- Advertisement -

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರವನ್ನು ಮುಂದೂಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್‌ ಸಭೆಯು ತೀರ್ಮಾನಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಪ್ರಸ್ತುತ ಜವಳಿ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಇದನ್ನು 12% ಕ್ಕೆ ಹೆಚ್ಚಿಸುವ ಬಗ್ಗೆ ಒಕ್ಕೂಟ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಆದರೆ ಈ ತೀರ್ಮಾನದ ವಿರುದ್ದ ಜವಳಿ ಉದ್ಯಮಗಳು ಮತ್ತು ದೇಶದ ಹಲವು ರಾಜ್ಯಗಳು ಆಕ್ಷೇಪ ಎತ್ತಿದ್ದವು.

ಜವಳಿ ಉತ್ಪನ್ನಗಳ ಮೇಲಿನ ತೆರಿಗೆ ದರ ಹೆಚ್ಚಳಕ್ಕೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ದರ ಏರಿಕೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿದ್ದವು. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದವು.

ಇದನ್ನೂ ಓದಿ:‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವಿಧ ರಾಜ್ಯಗಳ ವಿತ್ತ ಸಚಿವರ ಬಜೆಟ್ ಪೂರ್ವ ಸಮಾಲೋಚನೆಯ ಸಂದರ್ಭದಲ್ಲಿ ಈ ವಿಷಯವು ಚರ್ಚೆಗೆ ಬಂದಿತ್ತು.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಜವಳಿ ಮೇಲಿನ ತೆರಿಗೆ ಹೆಚ್ಚಳವನ್ನು ದೆಹಲಿ ಸರ್ಕಾರ ವಿರೋಧಿಸುತ್ತದೆ. ಸಾಮಾನ್ಯ ಜನರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಬಿಡುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.

ಜವಳಿ ವ್ಯಾಪಾರಿಗಳು ಜಿಎಸ್‌ಟಿ ದರಗಳ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಮತ್ತು ಅವರ ಬೇಡಿಕೆಗಳು ಸಮರ್ಥನೀಯವಾಗಿವೆ, ಆದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರವು ಅವರ ಬೇಡಿಕೆಗಳ ಪರವಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಪಶ್ಚಿಮ ಬಂಗಾಳದ ಮಾಜಿ ವಿತ್ತ ಸಚಿವ ಅಮಿತ್ ಮಿತ್ರಾ ಅವರು ಒಕ್ಕೂಟ ಸರ್ಕಾರದ ಹಣಕಾಸು ಸಚಿವರಿಗೆ ಜವಳಿ ಮೇಲಿನ ಪ್ರಸ್ತಾವಿತ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹೆಚ್ಚಳದಿಂದಾಗಿ ಸುಮಾರು ಒಂದು ಲಕ್ಷ ಜವಳಿ ಘಟಕಗಳು ಮುಚ್ಚಿಹೋಗುತ್ತದೆ ಮತ್ತು 15 ಲಕ್ಷ ಉದ್ಯೋಗ ನಷ್ಟವಾಗುತ್ತದೆ ಎಂದು ಅವರು ಹೇಳಿದ್ದರು.

ಇಷ್ಟೇ ಅಲ್ಲದೆ, ಕೈಗಾರಿಕಾ ಸಂಸ್ಥೆಗಳು ಕೂಡಾ ತೆರಿಗೆ ಹೆಚ್ಚಿಸುವುದನ್ನು ವಿರೋಧಿಸಿದ್ದವು. ವಿಶೇಷವಾಗಿ ಈ ಹೆಚ್ಚಳದಿಂದ ಅಸಂಘಟಿತ ವಲಯ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹೆಚ್ಚಿ ಹೊಡೆತ ಬಿದ್ದು, ಬಡವರು ಖರೀದಿಸುವ ಉಡುಪುಗಳ ದರಗಳು ಹೆಚ್ಚಳವಾಗುತ್ತಿತ್ತು.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇರೆಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ), ಜನವರಿ 1, 2022 ರಿಂದ ಜವಳಿ ಮತ್ತು ಪಾದರಕ್ಷೆಗಳ ಮೇಲಿನ ಜಿಎಸ್‌ಟಿ ದರವನ್ನು 5% ರಿಂದ 12% ಕ್ಕೆ ಏರಿಸಲಾಗುವುದು ಎಂದು ಘೋಷಿಸಿತ್ತು.

ಇದನ್ನೂ ಓದಿ:12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ಜಿಎಸ್‌ಟಿ ಕೌನ್ಸಿಲ್‌ನ 46 ನೇ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಫೆಬ್ರವರಿ 1, 2022 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿರುವ 2022-23ರ ಒಕ್ಕೂಟ ಸರ್ಕಾರದ ಬಜೆಟ್‌ಗೆ ಮುಂಚಿತವಾಗಿ ಸಭೆ ನಡೆಯುತ್ತಿರುವುದರಿಂದ ಈ ಸಭೆಯು ಮಹತ್ವದ್ದಾಗಿದೆ.

ಕೊರೊನಾದಿಂದಾಗಿ ಜವಳಿ ಉದ್ಯಮಕ್ಕೆ ಕೆಟ್ಟ ಪರಿಣಾಮ ಬೀರಿದೆ. ಈ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...