Homeಮುಖಪುಟಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಒಕ್ಕೂಟ ಸರ್ಕಾರದ ನಿರ್ಧಾರದ ವಿರುದ್ಧ ಜವಳಿ ಉದ್ಯಮ ಮತ್ತು ಹಲವು ರಾಜ್ಯಗಳ ಆಕ್ಷೇಪಣೆ ಎತ್ತಿದ್ದವು

- Advertisement -
- Advertisement -

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರವನ್ನು ಮುಂದೂಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್‌ ಸಭೆಯು ತೀರ್ಮಾನಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಪ್ರಸ್ತುತ ಜವಳಿ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಇದನ್ನು 12% ಕ್ಕೆ ಹೆಚ್ಚಿಸುವ ಬಗ್ಗೆ ಒಕ್ಕೂಟ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಆದರೆ ಈ ತೀರ್ಮಾನದ ವಿರುದ್ದ ಜವಳಿ ಉದ್ಯಮಗಳು ಮತ್ತು ದೇಶದ ಹಲವು ರಾಜ್ಯಗಳು ಆಕ್ಷೇಪ ಎತ್ತಿದ್ದವು.

ಜವಳಿ ಉತ್ಪನ್ನಗಳ ಮೇಲಿನ ತೆರಿಗೆ ದರ ಹೆಚ್ಚಳಕ್ಕೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ದರ ಏರಿಕೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿದ್ದವು. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದವು.

ಇದನ್ನೂ ಓದಿ:‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವಿಧ ರಾಜ್ಯಗಳ ವಿತ್ತ ಸಚಿವರ ಬಜೆಟ್ ಪೂರ್ವ ಸಮಾಲೋಚನೆಯ ಸಂದರ್ಭದಲ್ಲಿ ಈ ವಿಷಯವು ಚರ್ಚೆಗೆ ಬಂದಿತ್ತು.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಜವಳಿ ಮೇಲಿನ ತೆರಿಗೆ ಹೆಚ್ಚಳವನ್ನು ದೆಹಲಿ ಸರ್ಕಾರ ವಿರೋಧಿಸುತ್ತದೆ. ಸಾಮಾನ್ಯ ಜನರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಬಿಡುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.

ಜವಳಿ ವ್ಯಾಪಾರಿಗಳು ಜಿಎಸ್‌ಟಿ ದರಗಳ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಮತ್ತು ಅವರ ಬೇಡಿಕೆಗಳು ಸಮರ್ಥನೀಯವಾಗಿವೆ, ಆದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರವು ಅವರ ಬೇಡಿಕೆಗಳ ಪರವಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಪಶ್ಚಿಮ ಬಂಗಾಳದ ಮಾಜಿ ವಿತ್ತ ಸಚಿವ ಅಮಿತ್ ಮಿತ್ರಾ ಅವರು ಒಕ್ಕೂಟ ಸರ್ಕಾರದ ಹಣಕಾಸು ಸಚಿವರಿಗೆ ಜವಳಿ ಮೇಲಿನ ಪ್ರಸ್ತಾವಿತ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹೆಚ್ಚಳದಿಂದಾಗಿ ಸುಮಾರು ಒಂದು ಲಕ್ಷ ಜವಳಿ ಘಟಕಗಳು ಮುಚ್ಚಿಹೋಗುತ್ತದೆ ಮತ್ತು 15 ಲಕ್ಷ ಉದ್ಯೋಗ ನಷ್ಟವಾಗುತ್ತದೆ ಎಂದು ಅವರು ಹೇಳಿದ್ದರು.

ಇಷ್ಟೇ ಅಲ್ಲದೆ, ಕೈಗಾರಿಕಾ ಸಂಸ್ಥೆಗಳು ಕೂಡಾ ತೆರಿಗೆ ಹೆಚ್ಚಿಸುವುದನ್ನು ವಿರೋಧಿಸಿದ್ದವು. ವಿಶೇಷವಾಗಿ ಈ ಹೆಚ್ಚಳದಿಂದ ಅಸಂಘಟಿತ ವಲಯ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹೆಚ್ಚಿ ಹೊಡೆತ ಬಿದ್ದು, ಬಡವರು ಖರೀದಿಸುವ ಉಡುಪುಗಳ ದರಗಳು ಹೆಚ್ಚಳವಾಗುತ್ತಿತ್ತು.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇರೆಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ), ಜನವರಿ 1, 2022 ರಿಂದ ಜವಳಿ ಮತ್ತು ಪಾದರಕ್ಷೆಗಳ ಮೇಲಿನ ಜಿಎಸ್‌ಟಿ ದರವನ್ನು 5% ರಿಂದ 12% ಕ್ಕೆ ಏರಿಸಲಾಗುವುದು ಎಂದು ಘೋಷಿಸಿತ್ತು.

ಇದನ್ನೂ ಓದಿ:12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ಜಿಎಸ್‌ಟಿ ಕೌನ್ಸಿಲ್‌ನ 46 ನೇ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಫೆಬ್ರವರಿ 1, 2022 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿರುವ 2022-23ರ ಒಕ್ಕೂಟ ಸರ್ಕಾರದ ಬಜೆಟ್‌ಗೆ ಮುಂಚಿತವಾಗಿ ಸಭೆ ನಡೆಯುತ್ತಿರುವುದರಿಂದ ಈ ಸಭೆಯು ಮಹತ್ವದ್ದಾಗಿದೆ.

ಕೊರೊನಾದಿಂದಾಗಿ ಜವಳಿ ಉದ್ಯಮಕ್ಕೆ ಕೆಟ್ಟ ಪರಿಣಾಮ ಬೀರಿದೆ. ಈ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...