Homeಕರ್ನಾಟಕಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

ಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಹಿಂದೆ ಹೇರಿಕೆಯ ವಿರುದ್ಧ ಇದೇ ಜೂನ್ 6ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದು ನಡೆಯುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಅದು ನಡೆಯಲಿಲ್ಲ. ತಮಿಳುನಾಡು ಇಂತಹ ವಿಚಾರ ಬಂದಾಗ, ಅಪೂರ್ವವಾದ ಒಗ್ಗಟ್ಟನ್ನು ಕಾಪಾಡಿಕೊಂಡು ಕೇಂದ್ರಕ್ಕೆ ಮುಟ್ಟಿಸಬೇಕಾದ ಸಂದೇಶ ಮುಟ್ಟಿಸಿಯೇ ತೀರುತ್ತದೆ. ಕರ್ನಾಟಕದಲ್ಲಿ ಹೀಗಾಗದ್ದಕ್ಕೆ ಕಾರಣವೇನು ಎಂಬುದರ ಅವಲೋಕನದ ಅಗತ್ಯವಿದೆ. ಅದೇನೇ ಇರಲಿ, ಜೂನ್ 6ರ ಪ್ರತಿಭಟನೆ ಏಕೆ ನಡೆಯಲಿಲ್ಲ ಎಂಬುದನ್ನು ನೋಡೋಣ. ಸ್ವತಃ ಈ ವರದಿಗಾರ ಹಾಜರಿದ್ದ ಪೂರ್ವಭಾವಿ ಸಭೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜೂನ್ 4, ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳೂ ಮತ್ತು ಕನ್ನಡ ಅಭಿಮಾನಿಗಳ ಸಭೆ ಕರೆದಿದ್ದರು. ಕರ್ನಾಟಕ ಕೈಗಾರಿಕ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟವು ಹಿಂದಿ ಹೇರಿಕೆಯ ವಿರುದ್ಧ 6ರಂದು ಪ್ರತಿಭಟನೆ ಮಾಡಬೇಕೆಂಬ ಕಾರಣಕ್ಕೇ ಕರೆದಿದ್ದ ಪೂರ್ವಭಾವಿ ಸಭೆ ಅದಾಗಿತ್ತು. ಈ ಸಭೆಯು ಹಿರಿಯರಾದ ತಿಮ್ಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕರ್ನಾಟಕ ಕೈಗಾರಿಕೋದ್ಯಮ ಸಂಘಟನೆಗಳ ಮುಖಂಡರಾದ ಶ್ರೀಧರ್, ಕನ್ನಡ ಸಂಘದ ಭೀಮಶಂಕರ್ ಪಾಟೀಲ್ ಭಾಗವಹಿಸಿದ್ದರು.

ದಲಿತ ಕವಿ ಸಿದ್ದಲಿಂಗಯ್ಯನವರು ಮಾತನಾಡಿ ಹಿಂದಿ ಹೇರಿಕೆಯ ಕುರಿತ ಭಾಗವನ್ನು ಕೇಂದ್ರ ಸರ್ಕಾರವು ಮೊನ್ನೆ ವಾಪಸ್ಸು ತೆಗೆದುಕೊಂಡಿದ್ದೆವೆ ಎಂದಿದ್ದಾರೆ. ಆದರೆ ಅವರನ್ನು ನಾವು ನಂಬುವ ಹಾಗಿಲ್ಲ. ದಕ್ಷಿಣದಲ್ಲಿ ಕಪ್ಪು ಜನರಿದ್ದಾರೆ ನಾವು ಸಹಿಸಿಕೊಂಡಿಲ್ಲವೇ ಎಂದು ಕೇಳುವ ಉತ್ತರ ಭಾರತದ ರಾಜಕಾರಣಿಗಳಿದ್ದಾರೆ. ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ಹೋಗಿ ದೇಶಗಳೇ ಒಡೆದಿರುವ ಉದಾಹರಣೆಗಳಿವೆ. ನಮ್ಮಲ್ಲಿ ಹಾಗಾಗಬಾರದು. ಹಾಗಾಗಿ 6ನೇ ತಾರೀಖು ನಡೆಯುವ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಹೇಳಿದರು.

ಎಸ್.ಜಿ.ಸಿದ್ದರಾಮಯ್ಯನವರು ಮಾತನಾಡಿ ದಕ್ಷಿಣ ರಾಜ್ಯದ ಭಾಷೆಗಳ ಮೇಲೆ ಹಿಡಿತ ಸಾಧಿಸಲು ಪದೇ ಪದೇ ಈ ರೀತಿ ನಡೆಯುತ್ತಿದೆ. ಇದಕ್ಕೆ ಸರಿಯಾದ ಬುದ್ಧಿ ಕಲಿಸಬೇಕಾದರೆ ಪ್ರತಿಭಟನೆ ಮಾಡಲೇಬೇಕು ಮತ್ತು ಒಕ್ಕೂಟಕ್ಕೆ ಗೌರವ ಬರಬೇಕು. ದೇಶ ಛಿದ್ರವಾಗಬಾರದು ಎಂದರೆ ಎಲ್ಲಾ ಭಾಷೆಗಳನ್ನು ಗೌರವಿಸುವುದು ಕಲಿಯಬೇಕು ಎಂದು ಹೇಳಿ ಕೇಂದ್ರದ ನೀತಿಗಳನ್ನು ಖಂಡಿಸಿದರು. 6ರ ಪ್ರತಿಭಟನೆಗೆ ಮಾಡಬೇಕಾದ ತಯಾರಿಯನ್ನು ಮಾಡಿಕೊಂಡು ಮುನ್ನುಗ್ಗೋಣ ಎಂದರು.

ಭೀಮಶಂಕರ್ ಪಾಟೀಲ್, ಅರುಣ್ ಜಾವಗಲ್, ಕ.ಸಾ.ಪ ಮಾಯಣ್ಣ ಮತ್ತು ಅಲ್ಲಿ ಬಂದಿದ್ದ ಸಾಕಷ್ಟು ಜನ ಪ್ರತಿಭಟನೆ ಮಾಡಬೇಕೆಂದರು. ಮತ್ತು ಇದರ ವಿರುದ್ಧ ಹಿಂದಿ ವಿರೋಧಿ ಕನ್ನಡ ಒಕ್ಕೂಟ ಮಾಡಿಕೊಂಡು ದೀರ್ಘಕಾಲದ ಹೋರಾಟ ಮಾಡಬೇಕೆಂಬುದೂ ಅಲ್ಲಿನ ಬಹುತೇಕರ ಅಭಿಪ್ರಾಯವಾಗಿತ್ತು. ಪುಸ್ತಕ ಪ್ರಾಧಿಕಾರದ ಅಧಕ್ಷತೆ ವಸುಂಧರ ಭೂಪತಿಯವರು ಮಾತ್ರ ‘ಹಿಂದಿ ಹೇರಿಕೆಯ ವಿರುದ್ಧ ಎಲ್ಲಾ ಕಡೆ ಧ್ವನಿ ಬಂದಿದ್ದಕ್ಕಾಗಿ ವಾಪಸ್ಸು ತೆಗೆದುಕೊಂಡಿದ್ದಾರೆ ಹಾಗಾಗಿ ಪ್ರತಿಭಟನೆ ನಂತರ ಮಾಡೋಣ’ ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರು ಮಾತನಾಡಿದರು. ಅವರ ಮಾತಿನಲ್ಲಿ ಹಿಂದಿ ಹೇರಿಕೆಯ ಕುರಿತ ಯಾವ ಸಿಟ್ಟೂ ಇರಲಿಲ್ಲ. ಸದ್ಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ವೆಬ್ ಸೈಟ್‍ನಿಂದ ಇದನ್ನ ತೆಗೆದಿರುವುದರಿಂದ ಪ್ರತಿಭಟನೆಯ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದರ ಬಗ್ಗೆ ಹಲವರು ಅಸಮಾಧಾನಗೊಂಡು ಪ್ರಶ್ನಿಸಿದಾಗ, ಕಾರಣ ಇಲ್ಲದೇ ಪ್ರತಿಭಟನೆ ಬೇಡ ಎಂದು ಹೇಳಿ ಮುಗಿಸಿದರು. ಕೆಲವರು ಅವರ ಬೆಂಬಲಕ್ಕೆ ನಿಂತರು. ಕೊನೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಿಮ್ಮಯ್ಯನವರು ಕೂಡ ಮನು ಬಳಿಗಾರ್ ಅಭಿಪ್ರಾಯವನ್ನೇ ಮುಂದಿಟ್ಟರು.

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ನಡೆದ ಸಭೆಯಾಗಿದ್ದು, ಜೊತೆಗೆ ಕಸಾಪ ರಾಜ್ಯಾಧ್ಯಕ್ಷರ ಮಾತಿಗೆ ಹೆಚ್ಚಿನ ಮಹತ್ವವಿರುತ್ತದೆ. ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಇದರ ಅಧ್ಯಕ್ಷರಾಗಿರುವವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕೆಂಬುದು ಸಭೆಯಿಂದ ಹೊರಗೆ ಬಂದ ನಂತರ ಹೆಚ್ಚಿನವರ ಅನಿಸಿಕೆಯಾಗಿತ್ತು. ಏಕೆಂದರೆ, ಇದು ಕೇವಲ ಹಿಂದಿ ಹೇರಿಕೆಯ ಪ್ರಶ್ನೆಯಾಗಿರದೇ, ಈಗಾಗಲೇ ಕರ್ನಾಟಕದ ನೆಲದ ಎರಡು ಬ್ಯಾಂಕುಗಳು (ಮೈಸೂರು ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್) ನಷ್ಟದಲ್ಲಿರುವ ಬೇರೆ ರಾಜ್ಯಗಳ ಬ್ಯಾಂಕುಗಳಲ್ಲಿ ವಿಲೀನವಾಗಬೇಕಾಗಿ ಬಂದಿದೆ. ಜಿಎಸ್‍ಟಿಯ ನಂತರ ರಾಜ್ಯಗಳು ಆರ್ಥಿಕವಾಗಿಯೂ ಕೇಂದ್ರದ ಮರ್ಜಿಯಲ್ಲಿರಬೇಕಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ನಡೆಯಬಹುದಾಗಿದ್ದ ಪ್ರತಿಭಟನೆಯು ಸರಿಯಾದ ಸಂದೇಶವನ್ನೇ ನೀಡುತ್ತಿತ್ತು.

ಆದರೆ, ಅದಾಗದಂತೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನು ಬಳಿಗಾರ್. ಉಳಿದ ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮುಂದುವರೆಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನಿಲ್ ಕುಮಾರ್ ಚಿಕ್ಕ ದಾಳವಟ್ಟ ಅವರ ಸುದ್ದಿಗೆ ಕುತೂಹಲ ಕೆರಳಿಸುವ ಶೀರ್ಷಿಕೆ ಕೊಟ್ಟು ಅದಕ್ಕೆ ಉತ್ತರ ಕೊಟ್ಟಿಲ್ಲ.
    ಹಿಂದಿ ಹೇರಿಕೆ ವಿರುದ್ಧ ಕನ್ನಡ ಜನ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆ ಉಂಟಾಗಿದೆ. ಆ ವಿಷಯಗಳನ್ನು ಚೆನ್ನಾಗಿ ತಿಳಿಸಿದ್ದಾರೆ.
    ಧನ್ಯವಾದಗಳು ಸರ್.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...