Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...