Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....