Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...