Homeಕರ್ನಾಟಕಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿಂತೆ ಬೊಬ್ಬಿಡುತ್ತಿರುವ ಸಚಿವೆ ಶೋಭಾ ಕರಂದ್ಲಾಜೆಯ ಮೌನ ಪೊಲೀಸ್‌ ದೌರ್ಜನ್ಯಕ್ಕೆ ಸಮ್ಮತಿ ಎಂದು ಅರ್ಥೈಸೋಣವೇ? ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೆ ಪ್ರಕರಣ ದಾಖಲು ಮಾಡಿರುವುದು ನೋಡಿದರೆ, ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

“ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು. ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ:ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

“ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ, ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...