Homeಮುಖಪುಟಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ...

ಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ ಮಾಜಿ ಮುಖ್ಯಸ್ಥರು

- Advertisement -
- Advertisement -

ದೇಶದಲ್ಲಿ ಇತ್ತೀಚೆಗೆ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ, ಭಾರತೀಯ ಮುಸ್ಲಿಮರ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿರುವುದರ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಸಶಸ್ತ್ರ ಪಡೆಗಳ ಐದು ಮಾಜಿ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳು ಹಾಗೂ ದೇಶದ ಗಣ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಉತ್ತರಾಖಂಡದ ಹರಿದ್ವಾರ ಮತ್ತು ದೆಹಲಿಯಲ್ಲಿ ದ್ವೇಷ ಭಾಷಣವನ್ನು ಮಾಡಲಾಗಿತ್ತು. ಪತ್ರದಲ್ಲಿ ಕ್ರಿಶ್ಚಿಯನ್ನರು, ದಲಿತರು ಮತ್ತು ಸಿಖ್ಖರಂತಹ ಇತರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಕೂಡಾ ಉಲ್ಲೇಖಿಸಲಾಗಿದೆ.

ಹಿಂಸಾಚಾರದ ಇಂತಹ ಕರೆಗಳು ಆಂತರಿಕವಾಗಿ ಅಸಾಮರಸ್ಯವನ್ನು ಉಂಟುಮಾಡಬಹುದು ಮತ್ತು ಬಾಹ್ಯ ಶಕ್ತಿಗಳಿಗೆ ಧೈರ್ಯ ತುಂಬಬಹುದು ಎಂದು ಎಚ್ಚರಿಸಿ, ದೇಶದ ಗಡಿಗಳಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

“ರಾಷ್ಟ್ರದೊಳಗೆ ಶಾಂತಿ ಮತ್ತು ಸೌಹಾರ್ದತೆಯ ಯಾವುದೇ ಉಲ್ಲಂಘನೆಯು ದುಷ್ಟ ಬಾಹ್ಯ ಶಕ್ತಿಗಳನ್ನು ಉತ್ತೇಜಿಸುತ್ತದೆ. ನಮ್ಮ ವೈವಿಧ್ಯಮಯ ಮತ್ತು ಬಹುಸಂಖ್ಯೆಯ ಸಮಾಜದಲ್ಲಿ ಯಾವುದೆ ಸಮುದಾಯದ ವಿರುದ್ಧ ಹಿಂಸಾಚಾರಕ್ಕಾಗಿ ಇಂತಹ ಅಬ್ಬರದ ಕರೆಗಳಿಗೆ ಅನುಮತಿ ನೀಡಿದರೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಪೊಲೀಸ್ ಪಡೆಗಳು ಸೇರಿದಂತೆ ಸಮವಸ್ತ್ರದಲ್ಲಿರುವ ನಮ್ಮ ಸೈನಿಕರ ಏಕತೆ ಮತ್ತು ಒಗ್ಗಟ್ಟಿಗೆ ಗಂಭೀರವಾಗಿ ಪರಿಣಾಮ ಬೀರುತ್ತದೆ” ಎಂದು ಪತ್ರ ಹೇಳಿದೆ.

ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ನೇರ ಕರೆ ನೀಡಿದ “ಧರ್ಮ ಸಂಸದ್” ಅನ್ನು ನೇರವಾಗಿ ಉಲ್ಲೇಖಿಸಿರುವ ಪತ್ರವು, “ಹಿಂದೂಗಳ ಧರ್ಮ ಸಂಸದ್ ಎಂಬ 3 ದಿನಗಳ ಧಾರ್ಮಿಕ ಸಮಾವೇಶದಲ್ಲಿ ಮಾಡಿದ ಭಾಷಣಗಳ ವಿಷಯದಿಂದ ನಾವು ಗಂಭೀರವಾಗಿ ವಿಚಲಿತರಾಗಿದ್ದೇವೆ. 2021 ರ ಡಿಸೆಂಬರ್ 17-19 ರ ನಡುವೆ ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪದೇ ಪದೇ ಕರೆಗಳನ್ನು ನೀಡಲಾಯಿತು. ಜೊತೆಗೆ ಅಗತ್ಯವಿದ್ದರೆ, ಹಿಂದೂ ಧರ್ಮವನ್ನು ರಕ್ಷಿಸುವ ಹೆಸರಿನಲ್ಲಿ ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಭಾರತದ ಮುಸ್ಲಿಮರನ್ನು ಕೊಲ್ಲು ಕೂಡಾ ಕರೆ ನೀಡಲಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಿಂದೂ ರಾಷ್ಟ್ರಕ್ಕಾಗಿ ಹೋರಾಡುವ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ ಎಂದು ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ ಘಟನೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇಂತಹ ದೇಶದ್ರೋಹಿ ಸಭೆಗಳನ್ನು ಇತರ ಸ್ಥಳಗಳಲ್ಲಿ ಆಯೋಜಿಸಲಾಗುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

“ಹಿಂಸಾಚಾರಕ್ಕೆ ಕರೆ ನೀಡುವ ಇಂತಹ ಪ್ರಚೋದನೆಯನ್ನು ನಾವು ಸಹಿಸುವುದಿಲ್ಲ. ಇದು ಆಂತರಿಕ ಭದ್ರತೆಯ ಗಂಭೀರ ಉಲ್ಲಂಘನೆ ಮಾಡುವುದು ಮಾತ್ರವಲ್ಲದೆ, ನಮ್ಮ ರಾಷ್ಟ್ರದ ಸಾಮಾಜಿಕ ಸಂರಚನೆಯನ್ನು ನಾಶ ಮಾಡಬಹುದು. ಒಬ್ಬ ಭಾಷಣಗಾರ ಸೇನೆ ಮತ್ತು ಪೊಲೀಸರಿಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ (ಜನಾಂಗೀಯ ಹತ್ಯೆಗೆ) ಎಂದು ಕರೆ ನೀಡಿದ್ದಾರೆ. ಅವರು ನಮ್ಮದೇ ನಾಗರಿಕರ ನರಮೇಧದಲ್ಲಿ ಭಾಗವಹಿಸುವಂತೆ ಸೇನೆಯನ್ನು ಕೇಳಿದ್ದಾರೆ. ಇದು ಖಂಡನೀಯ ಮತ್ತು ಸ್ವೀಕಾರಾರ್ಹವಲ್ಲ” ಎಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್‌ನ ಎಪ್ಪತ್ತಾರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದು, ಹಿಂಸಾಚಾರಕ್ಕೆ ಕರೆ ನೀಡಿರುವುದ ಬಗ್ಗೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ.

ಪೂರ್ಣ ಪತ್ರವನ್ನು ಇಲ್ಲಿ ಓದಿ:

ಇದನ್ನೂ ಓದಿ:ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...