Homeಚಳವಳಿದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹ: PFI

ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹ: PFI

- Advertisement -
- Advertisement -

ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ.ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಶುಕ್ರವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಎ ಕೆ ಅಶ್ರಫ್, “ಜಿಲ್ಲೆಯಲ್ಲಿ ಸರಣಿ ದುಷ್ಕೃತ್ಯಗಳು ನಡೆದಾಗಲೆಲ್ಲಾ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಸಂಘಪರಿವಾರವು ಮುಸ್ಲಿಮರನ್ನು ಗುರಿಪಡಿಸಿಕೊಂಡು ಅಪಪ್ರಚಾರಗಳನ್ನು ನಡೆಸುತ್ತಾ ಬಂದಿದೆ. ಜೊತೆಗೆ ಸಂಘಪರಿವಾರದ ನಾಯಕರು ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತಾ ಶಾಂತಿ ಕದಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಡೆಯುವ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳು ಕಳವಳಕಾರಿಯಾಗಿವೆ. ಇದೀಗ ಮಂಗಳೂರಿನ ನಂದಿಗುಡ್ಡೆಯಲ್ಲಿ ಕೊರಗಜ್ಜ ದೈವಸ್ಥಾನ ಕಟ್ಟೆಯನ್ನು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ದೇವದಾಸ್ ದೇಸಾಯಿ ಎಂಬಾತನನ್ನು ಬಂಧಿಸಿದ್ದಾರೆ. ತಾನು 18 ಕಡೆ ಇಂತಹ ದುಷ್ಕೃತ್ಯಗಳನ್ನು ಎಸಗಿದ್ದೆ ಎಂಬ ವಿಚಾರವನ್ನು ಆರೋಪಿ ಒಪ್ಪಿಕೊಂಡಿರುವುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಜೊತೆಗೆ ಕೃತ್ಯ ನಡೆಸಿರುವುದರ ಬಗ್ಗೆ ಆರೋಪಿಯ ಹೇಳಿಕೆಯೂ ಪ್ರಸಾರವಾಗಿದೆ. ಆದರೆ ಅದಕ್ಕೂ ಮೊದಲು ಮುಸ್ಲಿಂ ಯುವಕರನ್ನು ಆರೋಪಿಗಳೆಂದು ಬಿಂಬಿಸಿ ಚಿತ್ರಹಿಂಸೆ ನೀಡಲಾಗಿದ್ದು ಸರಿಯೇ” ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಮಂಗಳೂರು ನಗರದ ಸುತ್ತಮುತ್ತಲಿನ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಎಸಗಿದ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿ ಪೊಲೀಸರು ಜೋಕಟ್ಟೆ ಪರಿಸರದ ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರನ್ನು ಮಾಧ್ಯಮದವರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆಂದು ಪೊಲೀಸ್ ಕಮಿಷನರ್ ಎನ್.ಶಶಿ ಕುಮಾರ್ ಸ್ವತಃ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದರು. ಮಾಧ್ಯಮಗಳಲ್ಲೂ ಪೊಲೀಸ್ ಕಮಿಷನರ್ ಅವರ ಹೇಳಿಕೆಗಳು ಪ್ರಕಟವಾಗಿದ್ದವು. ಇವರಿಬ್ಬರ ಬಂಧನದ ಬಳಿಕ ಒಟ್ಟು ಮುಸ್ಲಿಮ್ ಸಮುದಾಯವನ್ನು ಸಂಶಯದ ದೃಷ್ಟಿಯಿಂದ ನೋಡಲಾಯಿತು. ಪತ್ರಿಕಾಗೋಷ್ಠಿಯಲ್ಲಿ ನೀಡಲಾದ ಹೇಳಿಕೆಗಳನ್ನು ಆಧರಿಸಿ ಸಂಘಪರಿವಾರದ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಅಭಿಯಾನವನ್ನು ಹಮ್ಮಿಕೊಂಡವು. ಜೋಕಟ್ಟೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಮುಸ್ಲಿಮ್ ಯುವಕ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ್ದರಿಂದಲೇ ರಕ್ತ ವಾಂತಿ ಮಾಡಿ ಸತ್ತಿದ್ದಾನೆಂದು ಹೇಳಿ ಭಾವನಾತ್ಮಕವಾಗಿ ಪ್ರಚೋದಿಸುವ ಹುನ್ನಾರವೂ ನಡೆಯಿತು. ಇದು ಸೌಹಾರ್ದದಿಂದ ಬದುಕುತ್ತಿದ್ದ ಹಿಂದು-ಮುಸ್ಲಿಮರ ನಡುವೆ ಮತ್ತಷ್ಟು ಅಪನಂಬಿಕೆ ಸೃಷ್ಟಿಸಲು ಕಾರಣವಾಯಿತು. ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ ಹೆಸರಿನಲ್ಲಿ ಸಂಘಪರಿವಾರ ಮುಸ್ಲಿಮರ ತೇಜೋವಧೆ ನಡೆಸುತ್ತಿದ್ದರೆ, ಜಿಲ್ಲೆಯ ಪೊಲೀಸ್ ಇಲಾಖೆಯೂ ತನಿಖೆಗೆ ಮುನ್ನವೇ ಮುಸ್ಲಿಮರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿಬಿಟ್ಟಿತು ಎಂದು ದೂರಿದ್ದಾರೆ.

ಸತತ 4 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕವೂ ಪೊಲೀಸರಿಗೆ, ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರ ದೊರಕಲಿಲ್ಲ. ನಂತರದಲ್ಲಿ ಈ ಘಟನೆಗಳ ಸಂಬಂಧ ಯಾವುದೇ ಪ್ರಕರಣ ದಾಖಲಿಸದೇ ಅವರಿಬ್ಬರನ್ನೂ ಬಿಡುಗಡೆಗೊಳಿಸಲಾಗಿತ್ತು. ಬಂಧನದ ವೇಳೆ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿದ್ದರು. ಆದರೆ ಅಮಾಯಕರ ಬಿಡುಗಡೆಯ ವೇಳೆ ಮೌನವಹಿಸಿದ್ದರು. ಇದು ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ ಎಂದು ಎ ಕೆ ಅಶ್ರಫ್ ಪ್ರಶ್ನಿಸಿದ್ದಾರೆ.

ಕೆಲ ಸಮಯಗಳ ಹಿಂದೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕರ್ಕೇರ ಮೂಲ ದೈವಸ್ಥಾನದಲ್ಲಿ ಮೂರ್ತಿಗಳನ್ನು ಭಗ್ನಗೊಳಿಸಿದ ಘಟನೆ ನಡೆದಿತ್ತು. ಈ ವೇಳೆ ಸಂಘಪರಿವಾರವು ಘಟನೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ, ಕೋಮುಪ್ರಚೋದನಕಾರಿ ಹೇಳಿಕೆಗಳ ಮೂಲಕ ಶಾಂತಿ ಕದಡುವ ಪ್ರಯತ್ನ ನಡೆಸಿತ್ತು. ಆದರೆ ಆ ಘಟನೆಯಲ್ಲಿ ಆರೋಪಿ ರೋಹಿತಾಶ್ವ ಎಂಬಾತನ ಬಂಧನದೊಂದಿಗೆ ಸಂಘಪರಿವಾರದ ಗಲಭೆ ನಡೆಸುವ ಷಡ್ಯಂತ್ರ ವಿಫಲವಾಗಿತ್ತು. ಮಂಜನಾಡಿ ವಿಷ್ಣುಮೂರ್ತಿ ಜನಾರ್ದನ ದೈವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು ಮತ್ತು ಇತರ ಬೈಕುಗಳು ಕಳವಾದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಬಂಧಿಸಿದ್ದು, ಈತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕನಾಗಿದ್ದ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ ಹೆಸರಿನಲ್ಲಿ ಬಜರಂಗ ದಳವು ಕದ್ರಿಯಿಂದ ಕುತ್ತಾರ್ ವರೆಗೆ ಪಾದಯಾತ್ರೆ ನಡೆಸಿ ಮುಸ್ಲಿಮ್ ವಿರೋಧಿ ಭಾವನೆಗಳನ್ನು ಹುಟ್ಟು ಹಾಕಲು ಶ್ರಮಿಸಿತ್ತು. ಈ ಹಿಂದೆ ಕೊಣಾಜೆಯ ಕಾರ್ತಿಕ್ ರಾಜ್ ಕೊಲೆ ನಡೆದಾಗಲೂ ಪೊಲೀಸರು ಅಮಾಯಕ ಮುಸ್ಲಿಮ್ ಯುವಕರನ್ನು ಠಾಣೆಯಲ್ಲಿಟ್ಟು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಜವಾಬ್ದಾರಿಯುತ ಸಂಸದರು ಅಂದು ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಗೆ ಬೆಂಕಿ ಹಚ್ಚುವ ಅವಿವೇಕದ ಹೇಳಿಕೆಯನ್ನೂ ನೀಡಿದ್ದರು. ಕೆಲ ಸಮಯಗಳ ಬಳಿಕ ಹತ್ಯೆಯಲ್ಲಿ ಕಾರ್ತಿಕ್ ರಾಜ್ ಸಹೋದರಿ ಮತ್ತು ಪ್ರಿಯಕರನ ಪಾತ್ರವಿರುವುದು ಬಹಿರಂಗವಾಗಿತ್ತು ಎಂದು ದ.ಕ ಜಿಲ್ಲಾಧ್ಯಕ್ಷರಾದ ಏಜಾಜ್ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.

ಸಂಘಪರಿವಾರದ ನಿರಂತರ ಅಪಪ್ರಚಾರದೊಂದಿಗೆ ಜಿಲ್ಲಾ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳೂ ಆತಂಕ ಹುಟ್ಟಿಸುತ್ತಿವೆ. ತನಿಖೆಯಲ್ಲಿ ನೈಜ ಆರೋಪಿಗಳು ಪತ್ತೆಯಾದಾಗ ಪೊಲೀಸರು ಘಟನೆಯನ್ನು ಕೇವಲವಾಗಿ ಪ್ರಸ್ತುತಪಡಿಸುತ್ತಿರುವುದು ಕಂಡು ಬರುತ್ತಿದೆ. ಪೊಲೀಸ್ ಇಲಾಖೆಯ ಇಂತಹ ವರ್ತನೆಗಳು ಯಾವುದೇ ಕಾರಣಕ್ಕೂ ಸಹಿಸುವಂಥದ್ದಲ್ಲ. ಈ ಸರಣಿ ದುಷ್ಕೃತ್ಯಗಳ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ತನಿಖೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಇಲಾಖೆ ಮುಸ್ಲಿಮ್ ಯುವಕರನ್ನು ಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು ಯಾರನ್ನು ತೃಪ್ತಿಪಡಿಸಲು ಎಂಬುದು ಬಹಿರಂಗವಾಗಬೇಕು. ಅಮಾಯಕ ಮುಸ್ಲಿಮ್ ಯುವಕರನ್ನು ಬಂಧಿಸಿ ಜನರಿಗೆ ತಪ್ಪು ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು, ಅಮಾಯಕ ಯುವಕರು ಮತ್ತು ಒಟ್ಟು ಮುಸ್ಲಿಮ್ ಸಮುದಾಯದ ಮೇಲಾದ ಮಾನಹಾನಿಗೆ ಕ್ಷಮೆ ಯಾಚಿಸಬೇಕು. ಪೊಲೀಸ್ ಇಲಾಖೆ ಪಕ್ಷಪಾತವಾಗಿ ಮತ್ತು ಪೂರ್ವಾಗ್ರಹಪೀಡಿತವಾಗಿ ಕಾರ್ಯನಿರ್ವಹಿಸದೇ, ಸಂವಿಧಾನದ ಸಮಾನ ನ್ಯಾಯದ ಆಶಯಕ್ಕೆ ಬದ್ಧರಾಗಿ ಕರ್ತವ್ಯ ನಿಷ್ಠೆ ತೋರಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...