Homeಚಳವಳಿದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹ: PFI

ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹ: PFI

- Advertisement -
- Advertisement -

ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ.ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಶುಕ್ರವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಎ ಕೆ ಅಶ್ರಫ್, “ಜಿಲ್ಲೆಯಲ್ಲಿ ಸರಣಿ ದುಷ್ಕೃತ್ಯಗಳು ನಡೆದಾಗಲೆಲ್ಲಾ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಸಂಘಪರಿವಾರವು ಮುಸ್ಲಿಮರನ್ನು ಗುರಿಪಡಿಸಿಕೊಂಡು ಅಪಪ್ರಚಾರಗಳನ್ನು ನಡೆಸುತ್ತಾ ಬಂದಿದೆ. ಜೊತೆಗೆ ಸಂಘಪರಿವಾರದ ನಾಯಕರು ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತಾ ಶಾಂತಿ ಕದಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಡೆಯುವ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳು ಕಳವಳಕಾರಿಯಾಗಿವೆ. ಇದೀಗ ಮಂಗಳೂರಿನ ನಂದಿಗುಡ್ಡೆಯಲ್ಲಿ ಕೊರಗಜ್ಜ ದೈವಸ್ಥಾನ ಕಟ್ಟೆಯನ್ನು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ದೇವದಾಸ್ ದೇಸಾಯಿ ಎಂಬಾತನನ್ನು ಬಂಧಿಸಿದ್ದಾರೆ. ತಾನು 18 ಕಡೆ ಇಂತಹ ದುಷ್ಕೃತ್ಯಗಳನ್ನು ಎಸಗಿದ್ದೆ ಎಂಬ ವಿಚಾರವನ್ನು ಆರೋಪಿ ಒಪ್ಪಿಕೊಂಡಿರುವುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಜೊತೆಗೆ ಕೃತ್ಯ ನಡೆಸಿರುವುದರ ಬಗ್ಗೆ ಆರೋಪಿಯ ಹೇಳಿಕೆಯೂ ಪ್ರಸಾರವಾಗಿದೆ. ಆದರೆ ಅದಕ್ಕೂ ಮೊದಲು ಮುಸ್ಲಿಂ ಯುವಕರನ್ನು ಆರೋಪಿಗಳೆಂದು ಬಿಂಬಿಸಿ ಚಿತ್ರಹಿಂಸೆ ನೀಡಲಾಗಿದ್ದು ಸರಿಯೇ” ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಮಂಗಳೂರು ನಗರದ ಸುತ್ತಮುತ್ತಲಿನ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಎಸಗಿದ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿ ಪೊಲೀಸರು ಜೋಕಟ್ಟೆ ಪರಿಸರದ ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರನ್ನು ಮಾಧ್ಯಮದವರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆಂದು ಪೊಲೀಸ್ ಕಮಿಷನರ್ ಎನ್.ಶಶಿ ಕುಮಾರ್ ಸ್ವತಃ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದರು. ಮಾಧ್ಯಮಗಳಲ್ಲೂ ಪೊಲೀಸ್ ಕಮಿಷನರ್ ಅವರ ಹೇಳಿಕೆಗಳು ಪ್ರಕಟವಾಗಿದ್ದವು. ಇವರಿಬ್ಬರ ಬಂಧನದ ಬಳಿಕ ಒಟ್ಟು ಮುಸ್ಲಿಮ್ ಸಮುದಾಯವನ್ನು ಸಂಶಯದ ದೃಷ್ಟಿಯಿಂದ ನೋಡಲಾಯಿತು. ಪತ್ರಿಕಾಗೋಷ್ಠಿಯಲ್ಲಿ ನೀಡಲಾದ ಹೇಳಿಕೆಗಳನ್ನು ಆಧರಿಸಿ ಸಂಘಪರಿವಾರದ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಅಭಿಯಾನವನ್ನು ಹಮ್ಮಿಕೊಂಡವು. ಜೋಕಟ್ಟೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಮುಸ್ಲಿಮ್ ಯುವಕ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ್ದರಿಂದಲೇ ರಕ್ತ ವಾಂತಿ ಮಾಡಿ ಸತ್ತಿದ್ದಾನೆಂದು ಹೇಳಿ ಭಾವನಾತ್ಮಕವಾಗಿ ಪ್ರಚೋದಿಸುವ ಹುನ್ನಾರವೂ ನಡೆಯಿತು. ಇದು ಸೌಹಾರ್ದದಿಂದ ಬದುಕುತ್ತಿದ್ದ ಹಿಂದು-ಮುಸ್ಲಿಮರ ನಡುವೆ ಮತ್ತಷ್ಟು ಅಪನಂಬಿಕೆ ಸೃಷ್ಟಿಸಲು ಕಾರಣವಾಯಿತು. ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ ಹೆಸರಿನಲ್ಲಿ ಸಂಘಪರಿವಾರ ಮುಸ್ಲಿಮರ ತೇಜೋವಧೆ ನಡೆಸುತ್ತಿದ್ದರೆ, ಜಿಲ್ಲೆಯ ಪೊಲೀಸ್ ಇಲಾಖೆಯೂ ತನಿಖೆಗೆ ಮುನ್ನವೇ ಮುಸ್ಲಿಮರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿಬಿಟ್ಟಿತು ಎಂದು ದೂರಿದ್ದಾರೆ.

ಸತತ 4 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕವೂ ಪೊಲೀಸರಿಗೆ, ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರ ದೊರಕಲಿಲ್ಲ. ನಂತರದಲ್ಲಿ ಈ ಘಟನೆಗಳ ಸಂಬಂಧ ಯಾವುದೇ ಪ್ರಕರಣ ದಾಖಲಿಸದೇ ಅವರಿಬ್ಬರನ್ನೂ ಬಿಡುಗಡೆಗೊಳಿಸಲಾಗಿತ್ತು. ಬಂಧನದ ವೇಳೆ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿದ್ದರು. ಆದರೆ ಅಮಾಯಕರ ಬಿಡುಗಡೆಯ ವೇಳೆ ಮೌನವಹಿಸಿದ್ದರು. ಇದು ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ ಎಂದು ಎ ಕೆ ಅಶ್ರಫ್ ಪ್ರಶ್ನಿಸಿದ್ದಾರೆ.

ಕೆಲ ಸಮಯಗಳ ಹಿಂದೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕರ್ಕೇರ ಮೂಲ ದೈವಸ್ಥಾನದಲ್ಲಿ ಮೂರ್ತಿಗಳನ್ನು ಭಗ್ನಗೊಳಿಸಿದ ಘಟನೆ ನಡೆದಿತ್ತು. ಈ ವೇಳೆ ಸಂಘಪರಿವಾರವು ಘಟನೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ, ಕೋಮುಪ್ರಚೋದನಕಾರಿ ಹೇಳಿಕೆಗಳ ಮೂಲಕ ಶಾಂತಿ ಕದಡುವ ಪ್ರಯತ್ನ ನಡೆಸಿತ್ತು. ಆದರೆ ಆ ಘಟನೆಯಲ್ಲಿ ಆರೋಪಿ ರೋಹಿತಾಶ್ವ ಎಂಬಾತನ ಬಂಧನದೊಂದಿಗೆ ಸಂಘಪರಿವಾರದ ಗಲಭೆ ನಡೆಸುವ ಷಡ್ಯಂತ್ರ ವಿಫಲವಾಗಿತ್ತು. ಮಂಜನಾಡಿ ವಿಷ್ಣುಮೂರ್ತಿ ಜನಾರ್ದನ ದೈವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು ಮತ್ತು ಇತರ ಬೈಕುಗಳು ಕಳವಾದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಬಂಧಿಸಿದ್ದು, ಈತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕನಾಗಿದ್ದ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ ಹೆಸರಿನಲ್ಲಿ ಬಜರಂಗ ದಳವು ಕದ್ರಿಯಿಂದ ಕುತ್ತಾರ್ ವರೆಗೆ ಪಾದಯಾತ್ರೆ ನಡೆಸಿ ಮುಸ್ಲಿಮ್ ವಿರೋಧಿ ಭಾವನೆಗಳನ್ನು ಹುಟ್ಟು ಹಾಕಲು ಶ್ರಮಿಸಿತ್ತು. ಈ ಹಿಂದೆ ಕೊಣಾಜೆಯ ಕಾರ್ತಿಕ್ ರಾಜ್ ಕೊಲೆ ನಡೆದಾಗಲೂ ಪೊಲೀಸರು ಅಮಾಯಕ ಮುಸ್ಲಿಮ್ ಯುವಕರನ್ನು ಠಾಣೆಯಲ್ಲಿಟ್ಟು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಜವಾಬ್ದಾರಿಯುತ ಸಂಸದರು ಅಂದು ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಗೆ ಬೆಂಕಿ ಹಚ್ಚುವ ಅವಿವೇಕದ ಹೇಳಿಕೆಯನ್ನೂ ನೀಡಿದ್ದರು. ಕೆಲ ಸಮಯಗಳ ಬಳಿಕ ಹತ್ಯೆಯಲ್ಲಿ ಕಾರ್ತಿಕ್ ರಾಜ್ ಸಹೋದರಿ ಮತ್ತು ಪ್ರಿಯಕರನ ಪಾತ್ರವಿರುವುದು ಬಹಿರಂಗವಾಗಿತ್ತು ಎಂದು ದ.ಕ ಜಿಲ್ಲಾಧ್ಯಕ್ಷರಾದ ಏಜಾಜ್ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.

ಸಂಘಪರಿವಾರದ ನಿರಂತರ ಅಪಪ್ರಚಾರದೊಂದಿಗೆ ಜಿಲ್ಲಾ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳೂ ಆತಂಕ ಹುಟ್ಟಿಸುತ್ತಿವೆ. ತನಿಖೆಯಲ್ಲಿ ನೈಜ ಆರೋಪಿಗಳು ಪತ್ತೆಯಾದಾಗ ಪೊಲೀಸರು ಘಟನೆಯನ್ನು ಕೇವಲವಾಗಿ ಪ್ರಸ್ತುತಪಡಿಸುತ್ತಿರುವುದು ಕಂಡು ಬರುತ್ತಿದೆ. ಪೊಲೀಸ್ ಇಲಾಖೆಯ ಇಂತಹ ವರ್ತನೆಗಳು ಯಾವುದೇ ಕಾರಣಕ್ಕೂ ಸಹಿಸುವಂಥದ್ದಲ್ಲ. ಈ ಸರಣಿ ದುಷ್ಕೃತ್ಯಗಳ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ತನಿಖೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಇಲಾಖೆ ಮುಸ್ಲಿಮ್ ಯುವಕರನ್ನು ಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು ಯಾರನ್ನು ತೃಪ್ತಿಪಡಿಸಲು ಎಂಬುದು ಬಹಿರಂಗವಾಗಬೇಕು. ಅಮಾಯಕ ಮುಸ್ಲಿಮ್ ಯುವಕರನ್ನು ಬಂಧಿಸಿ ಜನರಿಗೆ ತಪ್ಪು ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು, ಅಮಾಯಕ ಯುವಕರು ಮತ್ತು ಒಟ್ಟು ಮುಸ್ಲಿಮ್ ಸಮುದಾಯದ ಮೇಲಾದ ಮಾನಹಾನಿಗೆ ಕ್ಷಮೆ ಯಾಚಿಸಬೇಕು. ಪೊಲೀಸ್ ಇಲಾಖೆ ಪಕ್ಷಪಾತವಾಗಿ ಮತ್ತು ಪೂರ್ವಾಗ್ರಹಪೀಡಿತವಾಗಿ ಕಾರ್ಯನಿರ್ವಹಿಸದೇ, ಸಂವಿಧಾನದ ಸಮಾನ ನ್ಯಾಯದ ಆಶಯಕ್ಕೆ ಬದ್ಧರಾಗಿ ಕರ್ತವ್ಯ ನಿಷ್ಠೆ ತೋರಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...